Categories: ಕೋಲಾರ

ಬಿಜೆಪಿ ತೊಲಗಿಸಿ ದೇಶ ಉಳಿಸಲು ಸಿಪಿಐಎಂ ಪ್ರಚಾರಾಂದೋಲನ ಹಾಗೂ ಪ್ರತಿಭಟನಾ ಸಭೆ

ಕೋಲಾರ: ಕೇಂದ್ರದ ಬಿಜೆಪಿ ಸರಕಾರದ ಜನ ವಿರೋಧಿ ಹಾಗೂ ಕಾರ್ಪೊರೇಟ್ ಸಂಸ್ಥೆಗಳ ಪರವಾದ ನೀತಿಗಳ ವಿರುದ್ಧ ದೇಶದಲ್ಲಿ ಬಿಜೆಪಿಯನ್ನು ತೊಲಗಿಸಿ ದೇಶವನ್ನು ಉಳಿಸಲು ನಗರದ ಹಳೆ ಬಸ್ ನಿಲ್ದಾಣದಲ್ಲಿ ಶುಕ್ರವಾರ ಸಿಪಿಐಎಂ ಪಕ್ಷದ ಜಿಲ್ಲಾ ಸಮಿತಿಯಿಂದ ಪ್ರಚಾರಾಂದೋಲನ ಹಾಗೂ ಪ್ರತಿಭಟನಾ ಸಭೆಯನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ, ಭಾರತದ ಸಂವಿಧಾನದಂತೆ ದೇಶಾದ್ಯಂತ ಒಕ್ಕೂಟವಾದಿ ಸ್ವರೂಪವನ್ನು ಬಲಗೊಳಿಸಬೇಕಿತ್ತು . ಆದರೆ ಒಕ್ಕೂಟ ಸರಕಾರ ರಾಜ್ಯ ಸರಕಾರಗಳ ಮೇಲೆ ತನ್ನ ಅಧಿಕಾರ ದುರುಪಯೋಗ ಹಾಗೂ ಹಸ್ತಕ್ಷೇಪದ ಮೂಲಕ ಒಕ್ಕೂಟವಾದಿ ಸ್ವರೂಪಕ್ಕೆ ಭಂಗ ಉಂಟು ಮಾಡುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ತಕ್ಕ ಪಾಠವನ್ನು ಕಲಿಸಬೇಕಾಗಿದೆ ಎಂದು ತಿಳಿಸಿದರು.

ಅಸಂಘಟಿತ ಕಾರ್ಮಿಕರ ರಕ್ಷಣೆ ಕಾರ್ಮಿಕರ ಭವಿಷ್ಯ ನಿಧಿ ಯೋಜನೆ ಬಲಗೊಳಿಸಿ, ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಸಮರ್ಪಕವಾಗಿ ಅನುಷ್ಠಾನವಾಗಬೇಕು. ಬಡ-ಮಧ್ಯಮ ರೈತರ ಸಾಲವನ್ನು ಮನ್ನಾ ಮಾಡಿ ರೈತರ ಬೆಳೆಗೆ ಬೆಂಬಲ ಬೆಲೆ ನಿಗದಿ ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟಬೇಕು ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರವು ಕಾರ್ಪೋರೇಟ್ ಕಂಪನಿಗಳ ಲೂಟಿಗೆ ನೆರವಾಗುವ ಎಪಿಎಂಸಿ ಕಾಯಿದೆಗೆ ಸುಗ್ರೀವಾಜ್ಞೆ ಮೂಲಕ ಮಾಡಲಾದ ತಿದ್ದುಪಡಿ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು

ಈ ಸಂದರ್ಭದಲ್ಲಿ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಪಿ.ಆರ್ ಶ್ರೀನಿವಾಸ್ ಮಾತನಾಡಿ, ಕೇಂದ್ರ ಸರಕಾರದ ಆಡಳಿತದಲ್ಲಿ ಪೆಟ್ರೋಲ್‌, ಡಿಸೇಲ್‌, ಅಡುಗೆ ಅನಿಲ, ದಿನನಿತ್ಯದ ವಸ್ತುಗಳ ಬೆಲೆಗಳು ಗಗನಕ್ಕೇರಿವೆ. ಇದರಿಂದ ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದಾರೆ. ಆದರೆ, ಕೇಂದ್ರ ಸರಕಾರ ನಿರ್ಲಕ್ಷಿಸಿ ಕೇವಲ ಜನರನ್ನು ಮೋಡಿ ಮಾಡುವ ಮಾತಿಗೆ ಮಾತ್ರ ಸೀಮಿತವಾಗಿದೆ. ಮೋದಿ ಸರಕಾರ ಕೇವಲ ಘೋಷಣೆ, ಪ್ರಚಾರ, ಕಾರ್ಪೋರೇಟ್ ನೀತಿಗಳನ್ನು ಮುಂದುವರಿಸುವ ನಿಟ್ಟಿನಲ್ಲಿ ವೇಗವಾಗಿ ಸಾಗುತ್ತಿದೆ. ರೈತರು, ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಹಿಂದೆ ಬಿದ್ದಿದೆ. ಒಡೆದು ಆಳುವ ನೀತಿ ಅನುಸರಿಸಲಾಗುತ್ತಿದೆ. ಇದರಿಂದ ಜನರ ಗಮನ ಸೆಳೆಯಲು ಕೋಮು ದ್ವೇಷ ಹುಟ್ಟು ಹಾಕುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು

ಈ ಸಂದರ್ಭದಲ್ಲಿ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಪಿ.ಆರ್ ಸೂರ್ಯನಾರಾಯಣ, ಟಿ.ಎಂ ವೆಂಕಟೇಶ್, ಎ.ಆರ್ ಬಾಬು, ಸದಸ್ಯರಾದ ಪಾತಕೋಟ ನವೀನ್ ಕುಮಾರ್, ಪಿ.ತಂಗರಾಜ್, ಅಶೋಕ್, ವಿಜಯಕೃಷ್ಣ, ಮುಂತಾದವರು ಇದ್ದರು

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

19 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

4 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

5 days ago