ಕೋಲಾರ: ಕೇಂದ್ರದ ಬಿಜೆಪಿ ಸರಕಾರದ ಜನ ವಿರೋಧಿ ಹಾಗೂ ಕಾರ್ಪೊರೇಟ್ ಸಂಸ್ಥೆಗಳ ಪರವಾದ ನೀತಿಗಳ ವಿರುದ್ಧ ದೇಶದಲ್ಲಿ ಬಿಜೆಪಿಯನ್ನು ತೊಲಗಿಸಿ ದೇಶವನ್ನು ಉಳಿಸಲು ನಗರದ ಹಳೆ ಬಸ್ ನಿಲ್ದಾಣದಲ್ಲಿ ಶುಕ್ರವಾರ ಸಿಪಿಐಎಂ ಪಕ್ಷದ ಜಿಲ್ಲಾ ಸಮಿತಿಯಿಂದ ಪ್ರಚಾರಾಂದೋಲನ ಹಾಗೂ ಪ್ರತಿಭಟನಾ ಸಭೆಯನ್ನು ನಡೆಸಲಾಯಿತು.
ಈ ಸಂದರ್ಭದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ, ಭಾರತದ ಸಂವಿಧಾನದಂತೆ ದೇಶಾದ್ಯಂತ ಒಕ್ಕೂಟವಾದಿ ಸ್ವರೂಪವನ್ನು ಬಲಗೊಳಿಸಬೇಕಿತ್ತು . ಆದರೆ ಒಕ್ಕೂಟ ಸರಕಾರ ರಾಜ್ಯ ಸರಕಾರಗಳ ಮೇಲೆ ತನ್ನ ಅಧಿಕಾರ ದುರುಪಯೋಗ ಹಾಗೂ ಹಸ್ತಕ್ಷೇಪದ ಮೂಲಕ ಒಕ್ಕೂಟವಾದಿ ಸ್ವರೂಪಕ್ಕೆ ಭಂಗ ಉಂಟು ಮಾಡುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ತಕ್ಕ ಪಾಠವನ್ನು ಕಲಿಸಬೇಕಾಗಿದೆ ಎಂದು ತಿಳಿಸಿದರು.
ಅಸಂಘಟಿತ ಕಾರ್ಮಿಕರ ರಕ್ಷಣೆ ಕಾರ್ಮಿಕರ ಭವಿಷ್ಯ ನಿಧಿ ಯೋಜನೆ ಬಲಗೊಳಿಸಿ, ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಸಮರ್ಪಕವಾಗಿ ಅನುಷ್ಠಾನವಾಗಬೇಕು. ಬಡ-ಮಧ್ಯಮ ರೈತರ ಸಾಲವನ್ನು ಮನ್ನಾ ಮಾಡಿ ರೈತರ ಬೆಳೆಗೆ ಬೆಂಬಲ ಬೆಲೆ ನಿಗದಿ ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟಬೇಕು ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರವು ಕಾರ್ಪೋರೇಟ್ ಕಂಪನಿಗಳ ಲೂಟಿಗೆ ನೆರವಾಗುವ ಎಪಿಎಂಸಿ ಕಾಯಿದೆಗೆ ಸುಗ್ರೀವಾಜ್ಞೆ ಮೂಲಕ ಮಾಡಲಾದ ತಿದ್ದುಪಡಿ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು
ಈ ಸಂದರ್ಭದಲ್ಲಿ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಪಿ.ಆರ್ ಶ್ರೀನಿವಾಸ್ ಮಾತನಾಡಿ, ಕೇಂದ್ರ ಸರಕಾರದ ಆಡಳಿತದಲ್ಲಿ ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ, ದಿನನಿತ್ಯದ ವಸ್ತುಗಳ ಬೆಲೆಗಳು ಗಗನಕ್ಕೇರಿವೆ. ಇದರಿಂದ ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದಾರೆ. ಆದರೆ, ಕೇಂದ್ರ ಸರಕಾರ ನಿರ್ಲಕ್ಷಿಸಿ ಕೇವಲ ಜನರನ್ನು ಮೋಡಿ ಮಾಡುವ ಮಾತಿಗೆ ಮಾತ್ರ ಸೀಮಿತವಾಗಿದೆ. ಮೋದಿ ಸರಕಾರ ಕೇವಲ ಘೋಷಣೆ, ಪ್ರಚಾರ, ಕಾರ್ಪೋರೇಟ್ ನೀತಿಗಳನ್ನು ಮುಂದುವರಿಸುವ ನಿಟ್ಟಿನಲ್ಲಿ ವೇಗವಾಗಿ ಸಾಗುತ್ತಿದೆ. ರೈತರು, ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಹಿಂದೆ ಬಿದ್ದಿದೆ. ಒಡೆದು ಆಳುವ ನೀತಿ ಅನುಸರಿಸಲಾಗುತ್ತಿದೆ. ಇದರಿಂದ ಜನರ ಗಮನ ಸೆಳೆಯಲು ಕೋಮು ದ್ವೇಷ ಹುಟ್ಟು ಹಾಕುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು
ಈ ಸಂದರ್ಭದಲ್ಲಿ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಪಿ.ಆರ್ ಸೂರ್ಯನಾರಾಯಣ, ಟಿ.ಎಂ ವೆಂಕಟೇಶ್, ಎ.ಆರ್ ಬಾಬು, ಸದಸ್ಯರಾದ ಪಾತಕೋಟ ನವೀನ್ ಕುಮಾರ್, ಪಿ.ತಂಗರಾಜ್, ಅಶೋಕ್, ವಿಜಯಕೃಷ್ಣ, ಮುಂತಾದವರು ಇದ್ದರು
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…