Categories: ಕೋಲಾರ

ಬಿಜೆಪಿ ತೊಲಗಿಸಿ ದೇಶ ಉಳಿಸಲು ಸಿಪಿಐಎಂ ಪ್ರಚಾರಾಂದೋಲನ ಹಾಗೂ ಪ್ರತಿಭಟನಾ ಸಭೆ

ಕೋಲಾರ: ಕೇಂದ್ರದ ಬಿಜೆಪಿ ಸರಕಾರದ ಜನ ವಿರೋಧಿ ಹಾಗೂ ಕಾರ್ಪೊರೇಟ್ ಸಂಸ್ಥೆಗಳ ಪರವಾದ ನೀತಿಗಳ ವಿರುದ್ಧ ದೇಶದಲ್ಲಿ ಬಿಜೆಪಿಯನ್ನು ತೊಲಗಿಸಿ ದೇಶವನ್ನು ಉಳಿಸಲು ನಗರದ ಹಳೆ ಬಸ್ ನಿಲ್ದಾಣದಲ್ಲಿ ಶುಕ್ರವಾರ ಸಿಪಿಐಎಂ ಪಕ್ಷದ ಜಿಲ್ಲಾ ಸಮಿತಿಯಿಂದ ಪ್ರಚಾರಾಂದೋಲನ ಹಾಗೂ ಪ್ರತಿಭಟನಾ ಸಭೆಯನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ, ಭಾರತದ ಸಂವಿಧಾನದಂತೆ ದೇಶಾದ್ಯಂತ ಒಕ್ಕೂಟವಾದಿ ಸ್ವರೂಪವನ್ನು ಬಲಗೊಳಿಸಬೇಕಿತ್ತು . ಆದರೆ ಒಕ್ಕೂಟ ಸರಕಾರ ರಾಜ್ಯ ಸರಕಾರಗಳ ಮೇಲೆ ತನ್ನ ಅಧಿಕಾರ ದುರುಪಯೋಗ ಹಾಗೂ ಹಸ್ತಕ್ಷೇಪದ ಮೂಲಕ ಒಕ್ಕೂಟವಾದಿ ಸ್ವರೂಪಕ್ಕೆ ಭಂಗ ಉಂಟು ಮಾಡುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ತಕ್ಕ ಪಾಠವನ್ನು ಕಲಿಸಬೇಕಾಗಿದೆ ಎಂದು ತಿಳಿಸಿದರು.

ಅಸಂಘಟಿತ ಕಾರ್ಮಿಕರ ರಕ್ಷಣೆ ಕಾರ್ಮಿಕರ ಭವಿಷ್ಯ ನಿಧಿ ಯೋಜನೆ ಬಲಗೊಳಿಸಿ, ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಸಮರ್ಪಕವಾಗಿ ಅನುಷ್ಠಾನವಾಗಬೇಕು. ಬಡ-ಮಧ್ಯಮ ರೈತರ ಸಾಲವನ್ನು ಮನ್ನಾ ಮಾಡಿ ರೈತರ ಬೆಳೆಗೆ ಬೆಂಬಲ ಬೆಲೆ ನಿಗದಿ ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟಬೇಕು ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರವು ಕಾರ್ಪೋರೇಟ್ ಕಂಪನಿಗಳ ಲೂಟಿಗೆ ನೆರವಾಗುವ ಎಪಿಎಂಸಿ ಕಾಯಿದೆಗೆ ಸುಗ್ರೀವಾಜ್ಞೆ ಮೂಲಕ ಮಾಡಲಾದ ತಿದ್ದುಪಡಿ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು

ಈ ಸಂದರ್ಭದಲ್ಲಿ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಪಿ.ಆರ್ ಶ್ರೀನಿವಾಸ್ ಮಾತನಾಡಿ, ಕೇಂದ್ರ ಸರಕಾರದ ಆಡಳಿತದಲ್ಲಿ ಪೆಟ್ರೋಲ್‌, ಡಿಸೇಲ್‌, ಅಡುಗೆ ಅನಿಲ, ದಿನನಿತ್ಯದ ವಸ್ತುಗಳ ಬೆಲೆಗಳು ಗಗನಕ್ಕೇರಿವೆ. ಇದರಿಂದ ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದಾರೆ. ಆದರೆ, ಕೇಂದ್ರ ಸರಕಾರ ನಿರ್ಲಕ್ಷಿಸಿ ಕೇವಲ ಜನರನ್ನು ಮೋಡಿ ಮಾಡುವ ಮಾತಿಗೆ ಮಾತ್ರ ಸೀಮಿತವಾಗಿದೆ. ಮೋದಿ ಸರಕಾರ ಕೇವಲ ಘೋಷಣೆ, ಪ್ರಚಾರ, ಕಾರ್ಪೋರೇಟ್ ನೀತಿಗಳನ್ನು ಮುಂದುವರಿಸುವ ನಿಟ್ಟಿನಲ್ಲಿ ವೇಗವಾಗಿ ಸಾಗುತ್ತಿದೆ. ರೈತರು, ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಹಿಂದೆ ಬಿದ್ದಿದೆ. ಒಡೆದು ಆಳುವ ನೀತಿ ಅನುಸರಿಸಲಾಗುತ್ತಿದೆ. ಇದರಿಂದ ಜನರ ಗಮನ ಸೆಳೆಯಲು ಕೋಮು ದ್ವೇಷ ಹುಟ್ಟು ಹಾಕುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು

ಈ ಸಂದರ್ಭದಲ್ಲಿ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಪಿ.ಆರ್ ಸೂರ್ಯನಾರಾಯಣ, ಟಿ.ಎಂ ವೆಂಕಟೇಶ್, ಎ.ಆರ್ ಬಾಬು, ಸದಸ್ಯರಾದ ಪಾತಕೋಟ ನವೀನ್ ಕುಮಾರ್, ಪಿ.ತಂಗರಾಜ್, ಅಶೋಕ್, ವಿಜಯಕೃಷ್ಣ, ಮುಂತಾದವರು ಇದ್ದರು

Ramesh Babu

Journalist

Recent Posts

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

6 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

7 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

1 day ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

1 day ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

1 day ago