ಬಿಜೆಪಿ ‌ನಾಯಕರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ: ಕಿಡಿಗೇಡಿಗಳ ವಿರುದ್ಧ ಕಿಡಿಕಾರಿದ ಬಿಜೆಪಿ

2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸೋಲು ಹಿನ್ನೆಲೆ ಇದನ್ನು ಗುರಿಯಾಗಿಸಿಕೊಂಡು ಕೆಲ ಬಿಜೆಪಿ ನಾಯಕರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಪೋಸ್ಟ್ ಮಾಡಿ ಕುಹಕ ಮಾಡುತ್ತಿರುವವರ ವಿರುದ್ಧ ಕಿಡಿಕಾರಿದ ಬಿಜೆಪಿ ಮುಖಂಡರು.

ನಗರದ ಬಿಜೆಪಿ ಕಾರ್ಯಾಲಯದಲ್ಲಿ ಈ ಕುರಿತು ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ವಕ್ತಾರೆ ಪುಷ್ಪಾ ಶಿವಶಂಕರ್, ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಿ.ಟಿ.ರವಿ ಸೇರಿದಂತೆ ಇತರೆ ಪ್ರಮುಖ ನಾಯಕರ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ ಇದನ್ನು ಬಿಜೆಪಿ ತೀವ್ರವಾಗಿ ಖಂಡಿಸಿ, ಅವಹೇಳನ ಪೋಸ್ಟ್ ಮಾಡುವವರ ವಿರುದ್ಧ ಸೈಬರ್ ಕ್ರೈಂ ಠಾಣೆಗೆ ದೂರು ನೀಡುತ್ತೇವೆ ಎಂದು ತಿಳಿಸಿದರು.

ಬಿಜೆಪಿ ಸೋಲಿಗೆ ಯಾವ ನಾಯಕರು ಕಾರಣರಲ್ಲ, ಅದರಲ್ಲೂ ಬಿ.ಎಲ್.ಸಂತೋಷ್ ಪಾತ್ರ ಏನೂ ಇಲ್ಲ, ಅವರು ರಾಜಕೀಯದಿಂದ ಬಹಳ ದೂರ ಇದ್ದಾರೆ ಅವರು ಕೇವಲ ಸಂಘಟನೆಯಲ್ಲಿ‌ ತಮ್ಮನ್ನು ತಾವು ತೊಡಗಿಸಿಕೊಂಡು ಆ ನಿಟ್ಟಿನಲ್ಲಿ ಕೆಲಸ‌‌ ಮಾಡುತ್ತಿದ್ದಾರೆ ಅಂತಹವರ ವಿರುದ್ಧ ಕುಹಕ ಮಾಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಪಕ್ಷ ಕಡೆಗಣಿಸಿರುವುದರಿಂದ ಬಿಜೆಪಿ ಸೋಲಿಗೆ ಕಾರಣ ಎಂಬ ವದಂತಿಗೆ ಪ್ರತಿಕ್ರಿಯೆ ನೀಡಿದ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋಪಿ, ಯಡಿಯೂರಪ್ಪ ಅವರನ್ನು ಪಕ್ಷ ಎಂದೂ ಕಡೆಗಣಿಸಿಲ್ಲ, ಕಡೆಗಣಿಸುವುದಿಲ್ಲ ಕೇವಲ ಯಾರೋ ವದಂತಿಗಳನ್ನು ಹರಡುತ್ತಿದ್ದಾರೆ. ಯಡಿಯೂರಪ್ಪ ಅವರು ಸಹ ಎಂದೂ, ಎಲ್ಲೂ ನನ್ನನ್ನು ಕಡೆಗಣಿಸಿದ್ದಾರೆಂದು ಹೇಳಿಕೊಂಡಿಲ್ಲ, ಇನ್ನೂ ನನಗೆ ಪಕ್ಷ ಎಲ್ಲವನ್ನೂ ನೀಡಿದೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ ಎಂದು ತಿಳಿಸಿದರು.

ಹೊಸಕೋಟೆ ಮಿನಿ ಬಿಹಾರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಅಲ್ಲಿನ ವಾತಾವರಣ, ನಡೆದಂತಹ ಘಟನೆ ನೋಡಿ ಈ ರೀತಿ ನಮ್ಮ ನಾಯಕರು ಹೇಳಿಕೆ‌ ನೀಡಿದ್ದಾರೆ. ಒಬ್ಬ ಬಿಜೆಪಿ ಕಾರ್ಯಕರ್ತನ ಕೊಲೆ ಆಗಿದೆ, ಇನ್ನೂ ಸಾಮಾನ್ಯ ಜನರ ಗತಿ ಏನು? ಎಂದು ಪಶ್ನೆ ಮಾಡಿದರು. ಎಂಟಿಬಿ ಅಧಿಕಾರದಲ್ಲಿದ್ದಾಗ ಅಲ್ಲಿ ಶಾಂತಿಯಿಂದ ಜನ ಜೀವನ ಮಾಡುತ್ತಿದ್ದರು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ನಮ್ಮ ಕಾರ್ಯಕರ್ತನ‌ ಕೊಲೆ ಆಗಿದೆ ಇದನ್ನು ತೀವ್ರವಾಗಿ ಖಂಡಿಸಿ ಕೊಲೆಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುವುದು ಎಂದರು.

ಈ ವೇಳೆ ಬಿಜೆಪಿ ಗ್ರಾಮಾಂತರ ಅಧ್ಯಕ್ಷ ನಾಗೇಶ್, ನಗರ ಅಧ್ಯಕ್ಷ ಮುದ್ದಪ್ಪ, ರೇಷ್ಮೆ ಮಾರಾಟ ಮಂಡಳಿ ಮಾಜಿ ಅಧ್ಯಕ್ಷ ಬಿ.ಸಿ.ನಾರಾಯಣ ಸ್ವಾಮಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

7 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

8 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

10 hours ago

ಆಸ್ತಿ ವಿವರ ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಕೆ ವಿಚಾರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ. ಚುನಾವಣಾ ಆಯೋಗ…

12 hours ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

14 hours ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

19 hours ago