ಬಿಜೆಪಿ ‌ನಾಯಕರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ: ಕಿಡಿಗೇಡಿಗಳ ವಿರುದ್ಧ ಕಿಡಿಕಾರಿದ ಬಿಜೆಪಿ

2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸೋಲು ಹಿನ್ನೆಲೆ ಇದನ್ನು ಗುರಿಯಾಗಿಸಿಕೊಂಡು ಕೆಲ ಬಿಜೆಪಿ ನಾಯಕರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಪೋಸ್ಟ್ ಮಾಡಿ ಕುಹಕ ಮಾಡುತ್ತಿರುವವರ ವಿರುದ್ಧ ಕಿಡಿಕಾರಿದ ಬಿಜೆಪಿ ಮುಖಂಡರು.

ನಗರದ ಬಿಜೆಪಿ ಕಾರ್ಯಾಲಯದಲ್ಲಿ ಈ ಕುರಿತು ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ವಕ್ತಾರೆ ಪುಷ್ಪಾ ಶಿವಶಂಕರ್, ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಿ.ಟಿ.ರವಿ ಸೇರಿದಂತೆ ಇತರೆ ಪ್ರಮುಖ ನಾಯಕರ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ ಇದನ್ನು ಬಿಜೆಪಿ ತೀವ್ರವಾಗಿ ಖಂಡಿಸಿ, ಅವಹೇಳನ ಪೋಸ್ಟ್ ಮಾಡುವವರ ವಿರುದ್ಧ ಸೈಬರ್ ಕ್ರೈಂ ಠಾಣೆಗೆ ದೂರು ನೀಡುತ್ತೇವೆ ಎಂದು ತಿಳಿಸಿದರು.

ಬಿಜೆಪಿ ಸೋಲಿಗೆ ಯಾವ ನಾಯಕರು ಕಾರಣರಲ್ಲ, ಅದರಲ್ಲೂ ಬಿ.ಎಲ್.ಸಂತೋಷ್ ಪಾತ್ರ ಏನೂ ಇಲ್ಲ, ಅವರು ರಾಜಕೀಯದಿಂದ ಬಹಳ ದೂರ ಇದ್ದಾರೆ ಅವರು ಕೇವಲ ಸಂಘಟನೆಯಲ್ಲಿ‌ ತಮ್ಮನ್ನು ತಾವು ತೊಡಗಿಸಿಕೊಂಡು ಆ ನಿಟ್ಟಿನಲ್ಲಿ ಕೆಲಸ‌‌ ಮಾಡುತ್ತಿದ್ದಾರೆ ಅಂತಹವರ ವಿರುದ್ಧ ಕುಹಕ ಮಾಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಪಕ್ಷ ಕಡೆಗಣಿಸಿರುವುದರಿಂದ ಬಿಜೆಪಿ ಸೋಲಿಗೆ ಕಾರಣ ಎಂಬ ವದಂತಿಗೆ ಪ್ರತಿಕ್ರಿಯೆ ನೀಡಿದ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋಪಿ, ಯಡಿಯೂರಪ್ಪ ಅವರನ್ನು ಪಕ್ಷ ಎಂದೂ ಕಡೆಗಣಿಸಿಲ್ಲ, ಕಡೆಗಣಿಸುವುದಿಲ್ಲ ಕೇವಲ ಯಾರೋ ವದಂತಿಗಳನ್ನು ಹರಡುತ್ತಿದ್ದಾರೆ. ಯಡಿಯೂರಪ್ಪ ಅವರು ಸಹ ಎಂದೂ, ಎಲ್ಲೂ ನನ್ನನ್ನು ಕಡೆಗಣಿಸಿದ್ದಾರೆಂದು ಹೇಳಿಕೊಂಡಿಲ್ಲ, ಇನ್ನೂ ನನಗೆ ಪಕ್ಷ ಎಲ್ಲವನ್ನೂ ನೀಡಿದೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ ಎಂದು ತಿಳಿಸಿದರು.

ಹೊಸಕೋಟೆ ಮಿನಿ ಬಿಹಾರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಅಲ್ಲಿನ ವಾತಾವರಣ, ನಡೆದಂತಹ ಘಟನೆ ನೋಡಿ ಈ ರೀತಿ ನಮ್ಮ ನಾಯಕರು ಹೇಳಿಕೆ‌ ನೀಡಿದ್ದಾರೆ. ಒಬ್ಬ ಬಿಜೆಪಿ ಕಾರ್ಯಕರ್ತನ ಕೊಲೆ ಆಗಿದೆ, ಇನ್ನೂ ಸಾಮಾನ್ಯ ಜನರ ಗತಿ ಏನು? ಎಂದು ಪಶ್ನೆ ಮಾಡಿದರು. ಎಂಟಿಬಿ ಅಧಿಕಾರದಲ್ಲಿದ್ದಾಗ ಅಲ್ಲಿ ಶಾಂತಿಯಿಂದ ಜನ ಜೀವನ ಮಾಡುತ್ತಿದ್ದರು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ನಮ್ಮ ಕಾರ್ಯಕರ್ತನ‌ ಕೊಲೆ ಆಗಿದೆ ಇದನ್ನು ತೀವ್ರವಾಗಿ ಖಂಡಿಸಿ ಕೊಲೆಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುವುದು ಎಂದರು.

ಈ ವೇಳೆ ಬಿಜೆಪಿ ಗ್ರಾಮಾಂತರ ಅಧ್ಯಕ್ಷ ನಾಗೇಶ್, ನಗರ ಅಧ್ಯಕ್ಷ ಮುದ್ದಪ್ಪ, ರೇಷ್ಮೆ ಮಾರಾಟ ಮಂಡಳಿ ಮಾಜಿ ಅಧ್ಯಕ್ಷ ಬಿ.ಸಿ.ನಾರಾಯಣ ಸ್ವಾಮಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

2 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

8 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

21 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

23 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

23 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

23 hours ago