ಬಿಜೆಪಿ ಪಕ್ಷದ ಅಭ್ಯರ್ಥಿ ಸ್ಥಾನಕ್ಕೆ ನಾನು ಸಹ ಪ್ರಬಲ ಆಕಾಂಕ್ಷಿಯಾಗಿದ್ದೇನೆ-ಟಿ.ವಿ.ಲಕ್ಷ್ಮೀನಾರಾಯಣ್

ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ರಂಗೇರಿದ ಚುನಾವಣಾ ಚದುರಂಗದ ಆಟ. ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ದಿನೇದಿನೆ ಹೆಚ್ಚುತ್ತಿದೆ.

ಇಂದು ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್ ಅವರು, ನನಗೂ ಬಿಜೆಪಿಯಿಂದ ಟಿಕೆಟ್ ನೀಡಿ ಸ್ಪರ್ಧಿಸಲು ಅವಕಾಶ ನೀಡಬೇಕೆಂದು ಹೊಸ ಬಾಣ ಬಿಟ್ಟಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷದ ಅಭ್ಯರ್ಥಿ ಸ್ಥಾನಕ್ಕೆ ನಾನು ಸಹ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ಕಳೆದ 40 ವರ್ಷಗಳಿಂದ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿದ್ದೇನೆ. ಹಿರಿಯರಾದ ಜಾಲಪ್ಪ. ರಾಮೇಗೌಡ, ಆರ್.ಜಿ.ವೆಂಕಟಾಚಲಯ್ಯ, ನರಸಿಂಹಸ್ವಾಮಿ ಅವರೊಂದಿಗೆ ವಿದ್ಯಾರ್ಥಿ ಜೀವನದಿದಂದಲೂ ರಾಜಕೀಯ ಸೇವೆ ಸಲ್ಲಿಸಿ, ತಾಲೂಕಿನ ಪ್ರತಿ ಗ್ರಾಮದ ಜನರ ಅಭಿಮಾನ ಪಡೆದಿದ್ದೇನೆ ಎಂದರು.

ತಾಲೂಕು ಸೊಸೈಟಿ, ಪಿಎಲ್ ಡಿ ಬ್ಯಾಂಕ್, ಎಪಿಎಂಸಿ, ಜಿಲ್ಲಾಪಂಚಾಯಿತಿ ಅಧ್ಯಕ್ಷನಾಗಿ, ಕೇಂದ್ರ ರೇಷ್ಮೆ ಮಂಡಲಿ ಸದಸ್ಯನಾಗಿ, ರಾಜ್ಯ ಕೃಷಿ ಮಾರುಕಟ್ಟೆ ನಿರ್ದೇಶಕನಾಗಿ, ಸಹಕಾರಿ ಯೂನಿಯನ್ ನಿರ್ದೇಶಕನಾಗಿ ಸೇವೆ ಸಲ್ಲಿಸಿದ್ದೇನೆ. ಈ ನಿಟ್ಟಿನಲ್ಲಿ ಬಿಜೆಪಿಯಿಂದ ಅಭ್ಯರ್ಥಿಯಾಗಿ ನನಗೂ ಅವಕಾಶ ನೀಡಿ ಎಂದು ವರಿಷ್ಠರು, ಮುಖಂಡರು, ಕಾರ್ಯಕರ್ತರಲ್ಲಿ ಮನವಿ ಮಾಡುತ್ತಿದ್ದೇನೆ.

ವರಿಷ್ಠರು ಟಿಕೆಟ್ ನೀಡಿದರೆ ಪ್ರತಿ ಹಳ್ಳಿಯಲ್ಲಿ ಪಕ್ಷದ ಸಂಘಟನೆ, ಶಿಸ್ತಿನ ಅನ್ವಯ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ. ಇಲ್ಲವಾದರೆ ಯಾರಿಗೆ ಟಿಕೆಟ್ ನೀಡಿದರು ಬೆಂಬಲ ನೀಡುತ್ತೇನೆ ಎಂದಿದ್ದಾರೆ.

ತಾಲೂಕಿನಲ್ಲಿ ಹೊರಗಿನವರು ಬಂದು ಟಿಕೆಟ್ ಕೇಳುತ್ತಿದ್ದಾರೆ. ಅವರಿಗೆ ಎಂಪಿ, ಎಂಎಲ್ಸಿ ಸೇರಿದಂತೆ ಬೇರೆ ಬೇರೆ ಅವಕಾಶಗಳಿವೆ. ಹೊರಗಿನವರಿಗೆ ಅವಕಾಶ ನೀಡುವ ಬದಲು ನನಗೆ ಅವಕಾಶ ನೀಡಬೇಕೆಂದು ಮನವಿ ಮಾಡಿದ್ದಾರೆ.

ಜಿಲ್ಲಾ ಬಿಜೆಪಿ ಪ್ರಕೋಷ್ಠದ ಸಂಚಾಲಕ ಧೀರಜ್ ಮುನಿರಾಜು ಅವರಿಗೆ ಲೋಕಸಭೆ ಟಿಕೆಟ್ ನೀಡಲಿ ಅಥವಾ ಈ ವಿಧಾನಸಭಾ ಚುನಾವಣೆಯಲ್ಲಿ ನನನ್ನು ಗೆಲ್ಲಿಸಿ, ಮುಂದಿನ ವಿಧಾನಸಭಾ ಚುನಾವಣೆಗೆ ಬೇಕಾದರೆ ಅವರಿಗೆ ಟಿಕೆಟ್ ನೀಡಲಿ. ಅವರು ತಾಲೂಕಿಗೆ ಬಂದು ಎರಡು ಮೂರು ವರ್ಷವಾಗಿದೆ ಅಷ್ಟೇ. ನಾನು ರಾಜಕೀಯಕ್ಕೆ ಬಂದು ಸುಮಾರು ನಲವತ್ತು ವರ್ಷವಾಗಿದೆ. ನನಗೆ ವಯಸ್ಸಾಗಿದೆ  ಆದ್ದರಿಂದ ನನಗೆ ಮೊದಲು ಅವಕಾಶ ನೀಡಬೇಕು, ಅವರಿನ್ನು ವಯಸ್ಸಿನಲ್ಲಿ ಚಿಕ್ಕವರು ಅವಕಾಶ ಇದೆ ಎಂದರು.

ಇತ್ತೀಚೆಗೆ ವಸಂತ್ ಕುಮಾರ್ ಗೌಡ ಅವರ ಕಚೇರಿ ಪೂಜೆಗೆ ತಾಲೂಕು ಅಧ್ಯಕ್ಷರ ಕರೆಯ ಮೇಲೆ ತೆರಳಿದ್ದೆ ಅಷ್ಟೆ. ಆ ವೇಳೆ ವಸಂತ್ ಕುಮಾರ್ ಗೌಡ ತಾಲೂಕಿನಲ್ಲಿ ಪಕ್ಷ ಸಂಘಟನೆಗೆ ಬಂದಿರುವೆ ಎಂದರು. ತಾಲೂಕಿನಲ್ಲಿ ಬಿಜೆಪಿ ಸಂಘಟನೆ ಚೆನ್ನಾಗಿದೆ ಎಂದು ಅಲ್ಲಿಯೇ ಹೇಳಿದ್ದೆ ಎಂದರು.

ಈ ವೇಳೆ ಮುಖಂಡರಾದ ಅಶ್ವಥ್ ನಾರಯಣಗೌಡ, ವೆಂಕಟಾಚಲಯ್ಯ, ರುದ್ರಪ್ಪ, ವೇಣುಕುಮಾರ್, ಪ್ರಕಾಶ್ ಕುಮಾರ್, ಗೋಪಾಲ್ ನಾಯಕ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

2 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

9 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

12 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

13 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago