ಬಿಜೆಪಿ ಪಕ್ಷದ ಅಭ್ಯರ್ಥಿ ಸ್ಥಾನಕ್ಕೆ ನಾನು ಸಹ ಪ್ರಬಲ ಆಕಾಂಕ್ಷಿಯಾಗಿದ್ದೇನೆ-ಟಿ.ವಿ.ಲಕ್ಷ್ಮೀನಾರಾಯಣ್

ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ರಂಗೇರಿದ ಚುನಾವಣಾ ಚದುರಂಗದ ಆಟ. ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ದಿನೇದಿನೆ ಹೆಚ್ಚುತ್ತಿದೆ.

ಇಂದು ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್ ಅವರು, ನನಗೂ ಬಿಜೆಪಿಯಿಂದ ಟಿಕೆಟ್ ನೀಡಿ ಸ್ಪರ್ಧಿಸಲು ಅವಕಾಶ ನೀಡಬೇಕೆಂದು ಹೊಸ ಬಾಣ ಬಿಟ್ಟಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷದ ಅಭ್ಯರ್ಥಿ ಸ್ಥಾನಕ್ಕೆ ನಾನು ಸಹ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ಕಳೆದ 40 ವರ್ಷಗಳಿಂದ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿದ್ದೇನೆ. ಹಿರಿಯರಾದ ಜಾಲಪ್ಪ. ರಾಮೇಗೌಡ, ಆರ್.ಜಿ.ವೆಂಕಟಾಚಲಯ್ಯ, ನರಸಿಂಹಸ್ವಾಮಿ ಅವರೊಂದಿಗೆ ವಿದ್ಯಾರ್ಥಿ ಜೀವನದಿದಂದಲೂ ರಾಜಕೀಯ ಸೇವೆ ಸಲ್ಲಿಸಿ, ತಾಲೂಕಿನ ಪ್ರತಿ ಗ್ರಾಮದ ಜನರ ಅಭಿಮಾನ ಪಡೆದಿದ್ದೇನೆ ಎಂದರು.

ತಾಲೂಕು ಸೊಸೈಟಿ, ಪಿಎಲ್ ಡಿ ಬ್ಯಾಂಕ್, ಎಪಿಎಂಸಿ, ಜಿಲ್ಲಾಪಂಚಾಯಿತಿ ಅಧ್ಯಕ್ಷನಾಗಿ, ಕೇಂದ್ರ ರೇಷ್ಮೆ ಮಂಡಲಿ ಸದಸ್ಯನಾಗಿ, ರಾಜ್ಯ ಕೃಷಿ ಮಾರುಕಟ್ಟೆ ನಿರ್ದೇಶಕನಾಗಿ, ಸಹಕಾರಿ ಯೂನಿಯನ್ ನಿರ್ದೇಶಕನಾಗಿ ಸೇವೆ ಸಲ್ಲಿಸಿದ್ದೇನೆ. ಈ ನಿಟ್ಟಿನಲ್ಲಿ ಬಿಜೆಪಿಯಿಂದ ಅಭ್ಯರ್ಥಿಯಾಗಿ ನನಗೂ ಅವಕಾಶ ನೀಡಿ ಎಂದು ವರಿಷ್ಠರು, ಮುಖಂಡರು, ಕಾರ್ಯಕರ್ತರಲ್ಲಿ ಮನವಿ ಮಾಡುತ್ತಿದ್ದೇನೆ.

ವರಿಷ್ಠರು ಟಿಕೆಟ್ ನೀಡಿದರೆ ಪ್ರತಿ ಹಳ್ಳಿಯಲ್ಲಿ ಪಕ್ಷದ ಸಂಘಟನೆ, ಶಿಸ್ತಿನ ಅನ್ವಯ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ. ಇಲ್ಲವಾದರೆ ಯಾರಿಗೆ ಟಿಕೆಟ್ ನೀಡಿದರು ಬೆಂಬಲ ನೀಡುತ್ತೇನೆ ಎಂದಿದ್ದಾರೆ.

ತಾಲೂಕಿನಲ್ಲಿ ಹೊರಗಿನವರು ಬಂದು ಟಿಕೆಟ್ ಕೇಳುತ್ತಿದ್ದಾರೆ. ಅವರಿಗೆ ಎಂಪಿ, ಎಂಎಲ್ಸಿ ಸೇರಿದಂತೆ ಬೇರೆ ಬೇರೆ ಅವಕಾಶಗಳಿವೆ. ಹೊರಗಿನವರಿಗೆ ಅವಕಾಶ ನೀಡುವ ಬದಲು ನನಗೆ ಅವಕಾಶ ನೀಡಬೇಕೆಂದು ಮನವಿ ಮಾಡಿದ್ದಾರೆ.

ಜಿಲ್ಲಾ ಬಿಜೆಪಿ ಪ್ರಕೋಷ್ಠದ ಸಂಚಾಲಕ ಧೀರಜ್ ಮುನಿರಾಜು ಅವರಿಗೆ ಲೋಕಸಭೆ ಟಿಕೆಟ್ ನೀಡಲಿ ಅಥವಾ ಈ ವಿಧಾನಸಭಾ ಚುನಾವಣೆಯಲ್ಲಿ ನನನ್ನು ಗೆಲ್ಲಿಸಿ, ಮುಂದಿನ ವಿಧಾನಸಭಾ ಚುನಾವಣೆಗೆ ಬೇಕಾದರೆ ಅವರಿಗೆ ಟಿಕೆಟ್ ನೀಡಲಿ. ಅವರು ತಾಲೂಕಿಗೆ ಬಂದು ಎರಡು ಮೂರು ವರ್ಷವಾಗಿದೆ ಅಷ್ಟೇ. ನಾನು ರಾಜಕೀಯಕ್ಕೆ ಬಂದು ಸುಮಾರು ನಲವತ್ತು ವರ್ಷವಾಗಿದೆ. ನನಗೆ ವಯಸ್ಸಾಗಿದೆ  ಆದ್ದರಿಂದ ನನಗೆ ಮೊದಲು ಅವಕಾಶ ನೀಡಬೇಕು, ಅವರಿನ್ನು ವಯಸ್ಸಿನಲ್ಲಿ ಚಿಕ್ಕವರು ಅವಕಾಶ ಇದೆ ಎಂದರು.

ಇತ್ತೀಚೆಗೆ ವಸಂತ್ ಕುಮಾರ್ ಗೌಡ ಅವರ ಕಚೇರಿ ಪೂಜೆಗೆ ತಾಲೂಕು ಅಧ್ಯಕ್ಷರ ಕರೆಯ ಮೇಲೆ ತೆರಳಿದ್ದೆ ಅಷ್ಟೆ. ಆ ವೇಳೆ ವಸಂತ್ ಕುಮಾರ್ ಗೌಡ ತಾಲೂಕಿನಲ್ಲಿ ಪಕ್ಷ ಸಂಘಟನೆಗೆ ಬಂದಿರುವೆ ಎಂದರು. ತಾಲೂಕಿನಲ್ಲಿ ಬಿಜೆಪಿ ಸಂಘಟನೆ ಚೆನ್ನಾಗಿದೆ ಎಂದು ಅಲ್ಲಿಯೇ ಹೇಳಿದ್ದೆ ಎಂದರು.

ಈ ವೇಳೆ ಮುಖಂಡರಾದ ಅಶ್ವಥ್ ನಾರಯಣಗೌಡ, ವೆಂಕಟಾಚಲಯ್ಯ, ರುದ್ರಪ್ಪ, ವೇಣುಕುಮಾರ್, ಪ್ರಕಾಶ್ ಕುಮಾರ್, ಗೋಪಾಲ್ ನಾಯಕ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

27 seconds ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

15 minutes ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

4 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

6 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

9 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

13 hours ago