ಬಿಜೆಪಿ ಪಕ್ಷದ ಅಭ್ಯರ್ಥಿ ಸ್ಥಾನಕ್ಕೆ ನಾನು ಸಹ ಪ್ರಬಲ ಆಕಾಂಕ್ಷಿಯಾಗಿದ್ದೇನೆ-ಟಿ.ವಿ.ಲಕ್ಷ್ಮೀನಾರಾಯಣ್

ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ರಂಗೇರಿದ ಚುನಾವಣಾ ಚದುರಂಗದ ಆಟ. ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ದಿನೇದಿನೆ ಹೆಚ್ಚುತ್ತಿದೆ.

ಇಂದು ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್ ಅವರು, ನನಗೂ ಬಿಜೆಪಿಯಿಂದ ಟಿಕೆಟ್ ನೀಡಿ ಸ್ಪರ್ಧಿಸಲು ಅವಕಾಶ ನೀಡಬೇಕೆಂದು ಹೊಸ ಬಾಣ ಬಿಟ್ಟಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷದ ಅಭ್ಯರ್ಥಿ ಸ್ಥಾನಕ್ಕೆ ನಾನು ಸಹ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ಕಳೆದ 40 ವರ್ಷಗಳಿಂದ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿದ್ದೇನೆ. ಹಿರಿಯರಾದ ಜಾಲಪ್ಪ. ರಾಮೇಗೌಡ, ಆರ್.ಜಿ.ವೆಂಕಟಾಚಲಯ್ಯ, ನರಸಿಂಹಸ್ವಾಮಿ ಅವರೊಂದಿಗೆ ವಿದ್ಯಾರ್ಥಿ ಜೀವನದಿದಂದಲೂ ರಾಜಕೀಯ ಸೇವೆ ಸಲ್ಲಿಸಿ, ತಾಲೂಕಿನ ಪ್ರತಿ ಗ್ರಾಮದ ಜನರ ಅಭಿಮಾನ ಪಡೆದಿದ್ದೇನೆ ಎಂದರು.

ತಾಲೂಕು ಸೊಸೈಟಿ, ಪಿಎಲ್ ಡಿ ಬ್ಯಾಂಕ್, ಎಪಿಎಂಸಿ, ಜಿಲ್ಲಾಪಂಚಾಯಿತಿ ಅಧ್ಯಕ್ಷನಾಗಿ, ಕೇಂದ್ರ ರೇಷ್ಮೆ ಮಂಡಲಿ ಸದಸ್ಯನಾಗಿ, ರಾಜ್ಯ ಕೃಷಿ ಮಾರುಕಟ್ಟೆ ನಿರ್ದೇಶಕನಾಗಿ, ಸಹಕಾರಿ ಯೂನಿಯನ್ ನಿರ್ದೇಶಕನಾಗಿ ಸೇವೆ ಸಲ್ಲಿಸಿದ್ದೇನೆ. ಈ ನಿಟ್ಟಿನಲ್ಲಿ ಬಿಜೆಪಿಯಿಂದ ಅಭ್ಯರ್ಥಿಯಾಗಿ ನನಗೂ ಅವಕಾಶ ನೀಡಿ ಎಂದು ವರಿಷ್ಠರು, ಮುಖಂಡರು, ಕಾರ್ಯಕರ್ತರಲ್ಲಿ ಮನವಿ ಮಾಡುತ್ತಿದ್ದೇನೆ.

ವರಿಷ್ಠರು ಟಿಕೆಟ್ ನೀಡಿದರೆ ಪ್ರತಿ ಹಳ್ಳಿಯಲ್ಲಿ ಪಕ್ಷದ ಸಂಘಟನೆ, ಶಿಸ್ತಿನ ಅನ್ವಯ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ. ಇಲ್ಲವಾದರೆ ಯಾರಿಗೆ ಟಿಕೆಟ್ ನೀಡಿದರು ಬೆಂಬಲ ನೀಡುತ್ತೇನೆ ಎಂದಿದ್ದಾರೆ.

ತಾಲೂಕಿನಲ್ಲಿ ಹೊರಗಿನವರು ಬಂದು ಟಿಕೆಟ್ ಕೇಳುತ್ತಿದ್ದಾರೆ. ಅವರಿಗೆ ಎಂಪಿ, ಎಂಎಲ್ಸಿ ಸೇರಿದಂತೆ ಬೇರೆ ಬೇರೆ ಅವಕಾಶಗಳಿವೆ. ಹೊರಗಿನವರಿಗೆ ಅವಕಾಶ ನೀಡುವ ಬದಲು ನನಗೆ ಅವಕಾಶ ನೀಡಬೇಕೆಂದು ಮನವಿ ಮಾಡಿದ್ದಾರೆ.

ಜಿಲ್ಲಾ ಬಿಜೆಪಿ ಪ್ರಕೋಷ್ಠದ ಸಂಚಾಲಕ ಧೀರಜ್ ಮುನಿರಾಜು ಅವರಿಗೆ ಲೋಕಸಭೆ ಟಿಕೆಟ್ ನೀಡಲಿ ಅಥವಾ ಈ ವಿಧಾನಸಭಾ ಚುನಾವಣೆಯಲ್ಲಿ ನನನ್ನು ಗೆಲ್ಲಿಸಿ, ಮುಂದಿನ ವಿಧಾನಸಭಾ ಚುನಾವಣೆಗೆ ಬೇಕಾದರೆ ಅವರಿಗೆ ಟಿಕೆಟ್ ನೀಡಲಿ. ಅವರು ತಾಲೂಕಿಗೆ ಬಂದು ಎರಡು ಮೂರು ವರ್ಷವಾಗಿದೆ ಅಷ್ಟೇ. ನಾನು ರಾಜಕೀಯಕ್ಕೆ ಬಂದು ಸುಮಾರು ನಲವತ್ತು ವರ್ಷವಾಗಿದೆ. ನನಗೆ ವಯಸ್ಸಾಗಿದೆ  ಆದ್ದರಿಂದ ನನಗೆ ಮೊದಲು ಅವಕಾಶ ನೀಡಬೇಕು, ಅವರಿನ್ನು ವಯಸ್ಸಿನಲ್ಲಿ ಚಿಕ್ಕವರು ಅವಕಾಶ ಇದೆ ಎಂದರು.

ಇತ್ತೀಚೆಗೆ ವಸಂತ್ ಕುಮಾರ್ ಗೌಡ ಅವರ ಕಚೇರಿ ಪೂಜೆಗೆ ತಾಲೂಕು ಅಧ್ಯಕ್ಷರ ಕರೆಯ ಮೇಲೆ ತೆರಳಿದ್ದೆ ಅಷ್ಟೆ. ಆ ವೇಳೆ ವಸಂತ್ ಕುಮಾರ್ ಗೌಡ ತಾಲೂಕಿನಲ್ಲಿ ಪಕ್ಷ ಸಂಘಟನೆಗೆ ಬಂದಿರುವೆ ಎಂದರು. ತಾಲೂಕಿನಲ್ಲಿ ಬಿಜೆಪಿ ಸಂಘಟನೆ ಚೆನ್ನಾಗಿದೆ ಎಂದು ಅಲ್ಲಿಯೇ ಹೇಳಿದ್ದೆ ಎಂದರು.

ಈ ವೇಳೆ ಮುಖಂಡರಾದ ಅಶ್ವಥ್ ನಾರಯಣಗೌಡ, ವೆಂಕಟಾಚಲಯ್ಯ, ರುದ್ರಪ್ಪ, ವೇಣುಕುಮಾರ್, ಪ್ರಕಾಶ್ ಕುಮಾರ್, ಗೋಪಾಲ್ ನಾಯಕ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

8 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

10 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

10 hours ago

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

12 hours ago

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

20 hours ago

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

1 day ago