ಬಿಜೆಪಿ ಪಕ್ಷದ ಅಭ್ಯರ್ಥಿ ಸ್ಥಾನಕ್ಕೆ ನಾನು ಸಹ ಪ್ರಬಲ ಆಕಾಂಕ್ಷಿಯಾಗಿದ್ದೇನೆ-ಟಿ.ವಿ.ಲಕ್ಷ್ಮೀನಾರಾಯಣ್

ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ರಂಗೇರಿದ ಚುನಾವಣಾ ಚದುರಂಗದ ಆಟ. ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ದಿನೇದಿನೆ ಹೆಚ್ಚುತ್ತಿದೆ.

ಇಂದು ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್ ಅವರು, ನನಗೂ ಬಿಜೆಪಿಯಿಂದ ಟಿಕೆಟ್ ನೀಡಿ ಸ್ಪರ್ಧಿಸಲು ಅವಕಾಶ ನೀಡಬೇಕೆಂದು ಹೊಸ ಬಾಣ ಬಿಟ್ಟಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷದ ಅಭ್ಯರ್ಥಿ ಸ್ಥಾನಕ್ಕೆ ನಾನು ಸಹ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ಕಳೆದ 40 ವರ್ಷಗಳಿಂದ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿದ್ದೇನೆ. ಹಿರಿಯರಾದ ಜಾಲಪ್ಪ. ರಾಮೇಗೌಡ, ಆರ್.ಜಿ.ವೆಂಕಟಾಚಲಯ್ಯ, ನರಸಿಂಹಸ್ವಾಮಿ ಅವರೊಂದಿಗೆ ವಿದ್ಯಾರ್ಥಿ ಜೀವನದಿದಂದಲೂ ರಾಜಕೀಯ ಸೇವೆ ಸಲ್ಲಿಸಿ, ತಾಲೂಕಿನ ಪ್ರತಿ ಗ್ರಾಮದ ಜನರ ಅಭಿಮಾನ ಪಡೆದಿದ್ದೇನೆ ಎಂದರು.

ತಾಲೂಕು ಸೊಸೈಟಿ, ಪಿಎಲ್ ಡಿ ಬ್ಯಾಂಕ್, ಎಪಿಎಂಸಿ, ಜಿಲ್ಲಾಪಂಚಾಯಿತಿ ಅಧ್ಯಕ್ಷನಾಗಿ, ಕೇಂದ್ರ ರೇಷ್ಮೆ ಮಂಡಲಿ ಸದಸ್ಯನಾಗಿ, ರಾಜ್ಯ ಕೃಷಿ ಮಾರುಕಟ್ಟೆ ನಿರ್ದೇಶಕನಾಗಿ, ಸಹಕಾರಿ ಯೂನಿಯನ್ ನಿರ್ದೇಶಕನಾಗಿ ಸೇವೆ ಸಲ್ಲಿಸಿದ್ದೇನೆ. ಈ ನಿಟ್ಟಿನಲ್ಲಿ ಬಿಜೆಪಿಯಿಂದ ಅಭ್ಯರ್ಥಿಯಾಗಿ ನನಗೂ ಅವಕಾಶ ನೀಡಿ ಎಂದು ವರಿಷ್ಠರು, ಮುಖಂಡರು, ಕಾರ್ಯಕರ್ತರಲ್ಲಿ ಮನವಿ ಮಾಡುತ್ತಿದ್ದೇನೆ.

ವರಿಷ್ಠರು ಟಿಕೆಟ್ ನೀಡಿದರೆ ಪ್ರತಿ ಹಳ್ಳಿಯಲ್ಲಿ ಪಕ್ಷದ ಸಂಘಟನೆ, ಶಿಸ್ತಿನ ಅನ್ವಯ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ. ಇಲ್ಲವಾದರೆ ಯಾರಿಗೆ ಟಿಕೆಟ್ ನೀಡಿದರು ಬೆಂಬಲ ನೀಡುತ್ತೇನೆ ಎಂದಿದ್ದಾರೆ.

ತಾಲೂಕಿನಲ್ಲಿ ಹೊರಗಿನವರು ಬಂದು ಟಿಕೆಟ್ ಕೇಳುತ್ತಿದ್ದಾರೆ. ಅವರಿಗೆ ಎಂಪಿ, ಎಂಎಲ್ಸಿ ಸೇರಿದಂತೆ ಬೇರೆ ಬೇರೆ ಅವಕಾಶಗಳಿವೆ. ಹೊರಗಿನವರಿಗೆ ಅವಕಾಶ ನೀಡುವ ಬದಲು ನನಗೆ ಅವಕಾಶ ನೀಡಬೇಕೆಂದು ಮನವಿ ಮಾಡಿದ್ದಾರೆ.

ಜಿಲ್ಲಾ ಬಿಜೆಪಿ ಪ್ರಕೋಷ್ಠದ ಸಂಚಾಲಕ ಧೀರಜ್ ಮುನಿರಾಜು ಅವರಿಗೆ ಲೋಕಸಭೆ ಟಿಕೆಟ್ ನೀಡಲಿ ಅಥವಾ ಈ ವಿಧಾನಸಭಾ ಚುನಾವಣೆಯಲ್ಲಿ ನನನ್ನು ಗೆಲ್ಲಿಸಿ, ಮುಂದಿನ ವಿಧಾನಸಭಾ ಚುನಾವಣೆಗೆ ಬೇಕಾದರೆ ಅವರಿಗೆ ಟಿಕೆಟ್ ನೀಡಲಿ. ಅವರು ತಾಲೂಕಿಗೆ ಬಂದು ಎರಡು ಮೂರು ವರ್ಷವಾಗಿದೆ ಅಷ್ಟೇ. ನಾನು ರಾಜಕೀಯಕ್ಕೆ ಬಂದು ಸುಮಾರು ನಲವತ್ತು ವರ್ಷವಾಗಿದೆ. ನನಗೆ ವಯಸ್ಸಾಗಿದೆ  ಆದ್ದರಿಂದ ನನಗೆ ಮೊದಲು ಅವಕಾಶ ನೀಡಬೇಕು, ಅವರಿನ್ನು ವಯಸ್ಸಿನಲ್ಲಿ ಚಿಕ್ಕವರು ಅವಕಾಶ ಇದೆ ಎಂದರು.

ಇತ್ತೀಚೆಗೆ ವಸಂತ್ ಕುಮಾರ್ ಗೌಡ ಅವರ ಕಚೇರಿ ಪೂಜೆಗೆ ತಾಲೂಕು ಅಧ್ಯಕ್ಷರ ಕರೆಯ ಮೇಲೆ ತೆರಳಿದ್ದೆ ಅಷ್ಟೆ. ಆ ವೇಳೆ ವಸಂತ್ ಕುಮಾರ್ ಗೌಡ ತಾಲೂಕಿನಲ್ಲಿ ಪಕ್ಷ ಸಂಘಟನೆಗೆ ಬಂದಿರುವೆ ಎಂದರು. ತಾಲೂಕಿನಲ್ಲಿ ಬಿಜೆಪಿ ಸಂಘಟನೆ ಚೆನ್ನಾಗಿದೆ ಎಂದು ಅಲ್ಲಿಯೇ ಹೇಳಿದ್ದೆ ಎಂದರು.

ಈ ವೇಳೆ ಮುಖಂಡರಾದ ಅಶ್ವಥ್ ನಾರಯಣಗೌಡ, ವೆಂಕಟಾಚಲಯ್ಯ, ರುದ್ರಪ್ಪ, ವೇಣುಕುಮಾರ್, ಪ್ರಕಾಶ್ ಕುಮಾರ್, ಗೋಪಾಲ್ ನಾಯಕ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

44 minutes ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

8 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

9 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

24 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago