ಬಿಜೆಪಿ ಪಕ್ಷದ ಅಭ್ಯರ್ಥಿ ಸ್ಥಾನಕ್ಕೆ ನಾನು ಸಹ ಪ್ರಬಲ ಆಕಾಂಕ್ಷಿಯಾಗಿದ್ದೇನೆ-ಟಿ.ವಿ.ಲಕ್ಷ್ಮೀನಾರಾಯಣ್

ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ರಂಗೇರಿದ ಚುನಾವಣಾ ಚದುರಂಗದ ಆಟ. ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ದಿನೇದಿನೆ ಹೆಚ್ಚುತ್ತಿದೆ.

ಇಂದು ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್ ಅವರು, ನನಗೂ ಬಿಜೆಪಿಯಿಂದ ಟಿಕೆಟ್ ನೀಡಿ ಸ್ಪರ್ಧಿಸಲು ಅವಕಾಶ ನೀಡಬೇಕೆಂದು ಹೊಸ ಬಾಣ ಬಿಟ್ಟಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷದ ಅಭ್ಯರ್ಥಿ ಸ್ಥಾನಕ್ಕೆ ನಾನು ಸಹ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ಕಳೆದ 40 ವರ್ಷಗಳಿಂದ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿದ್ದೇನೆ. ಹಿರಿಯರಾದ ಜಾಲಪ್ಪ. ರಾಮೇಗೌಡ, ಆರ್.ಜಿ.ವೆಂಕಟಾಚಲಯ್ಯ, ನರಸಿಂಹಸ್ವಾಮಿ ಅವರೊಂದಿಗೆ ವಿದ್ಯಾರ್ಥಿ ಜೀವನದಿದಂದಲೂ ರಾಜಕೀಯ ಸೇವೆ ಸಲ್ಲಿಸಿ, ತಾಲೂಕಿನ ಪ್ರತಿ ಗ್ರಾಮದ ಜನರ ಅಭಿಮಾನ ಪಡೆದಿದ್ದೇನೆ ಎಂದರು.

ತಾಲೂಕು ಸೊಸೈಟಿ, ಪಿಎಲ್ ಡಿ ಬ್ಯಾಂಕ್, ಎಪಿಎಂಸಿ, ಜಿಲ್ಲಾಪಂಚಾಯಿತಿ ಅಧ್ಯಕ್ಷನಾಗಿ, ಕೇಂದ್ರ ರೇಷ್ಮೆ ಮಂಡಲಿ ಸದಸ್ಯನಾಗಿ, ರಾಜ್ಯ ಕೃಷಿ ಮಾರುಕಟ್ಟೆ ನಿರ್ದೇಶಕನಾಗಿ, ಸಹಕಾರಿ ಯೂನಿಯನ್ ನಿರ್ದೇಶಕನಾಗಿ ಸೇವೆ ಸಲ್ಲಿಸಿದ್ದೇನೆ. ಈ ನಿಟ್ಟಿನಲ್ಲಿ ಬಿಜೆಪಿಯಿಂದ ಅಭ್ಯರ್ಥಿಯಾಗಿ ನನಗೂ ಅವಕಾಶ ನೀಡಿ ಎಂದು ವರಿಷ್ಠರು, ಮುಖಂಡರು, ಕಾರ್ಯಕರ್ತರಲ್ಲಿ ಮನವಿ ಮಾಡುತ್ತಿದ್ದೇನೆ.

ವರಿಷ್ಠರು ಟಿಕೆಟ್ ನೀಡಿದರೆ ಪ್ರತಿ ಹಳ್ಳಿಯಲ್ಲಿ ಪಕ್ಷದ ಸಂಘಟನೆ, ಶಿಸ್ತಿನ ಅನ್ವಯ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ. ಇಲ್ಲವಾದರೆ ಯಾರಿಗೆ ಟಿಕೆಟ್ ನೀಡಿದರು ಬೆಂಬಲ ನೀಡುತ್ತೇನೆ ಎಂದಿದ್ದಾರೆ.

ತಾಲೂಕಿನಲ್ಲಿ ಹೊರಗಿನವರು ಬಂದು ಟಿಕೆಟ್ ಕೇಳುತ್ತಿದ್ದಾರೆ. ಅವರಿಗೆ ಎಂಪಿ, ಎಂಎಲ್ಸಿ ಸೇರಿದಂತೆ ಬೇರೆ ಬೇರೆ ಅವಕಾಶಗಳಿವೆ. ಹೊರಗಿನವರಿಗೆ ಅವಕಾಶ ನೀಡುವ ಬದಲು ನನಗೆ ಅವಕಾಶ ನೀಡಬೇಕೆಂದು ಮನವಿ ಮಾಡಿದ್ದಾರೆ.

ಜಿಲ್ಲಾ ಬಿಜೆಪಿ ಪ್ರಕೋಷ್ಠದ ಸಂಚಾಲಕ ಧೀರಜ್ ಮುನಿರಾಜು ಅವರಿಗೆ ಲೋಕಸಭೆ ಟಿಕೆಟ್ ನೀಡಲಿ ಅಥವಾ ಈ ವಿಧಾನಸಭಾ ಚುನಾವಣೆಯಲ್ಲಿ ನನನ್ನು ಗೆಲ್ಲಿಸಿ, ಮುಂದಿನ ವಿಧಾನಸಭಾ ಚುನಾವಣೆಗೆ ಬೇಕಾದರೆ ಅವರಿಗೆ ಟಿಕೆಟ್ ನೀಡಲಿ. ಅವರು ತಾಲೂಕಿಗೆ ಬಂದು ಎರಡು ಮೂರು ವರ್ಷವಾಗಿದೆ ಅಷ್ಟೇ. ನಾನು ರಾಜಕೀಯಕ್ಕೆ ಬಂದು ಸುಮಾರು ನಲವತ್ತು ವರ್ಷವಾಗಿದೆ. ನನಗೆ ವಯಸ್ಸಾಗಿದೆ  ಆದ್ದರಿಂದ ನನಗೆ ಮೊದಲು ಅವಕಾಶ ನೀಡಬೇಕು, ಅವರಿನ್ನು ವಯಸ್ಸಿನಲ್ಲಿ ಚಿಕ್ಕವರು ಅವಕಾಶ ಇದೆ ಎಂದರು.

ಇತ್ತೀಚೆಗೆ ವಸಂತ್ ಕುಮಾರ್ ಗೌಡ ಅವರ ಕಚೇರಿ ಪೂಜೆಗೆ ತಾಲೂಕು ಅಧ್ಯಕ್ಷರ ಕರೆಯ ಮೇಲೆ ತೆರಳಿದ್ದೆ ಅಷ್ಟೆ. ಆ ವೇಳೆ ವಸಂತ್ ಕುಮಾರ್ ಗೌಡ ತಾಲೂಕಿನಲ್ಲಿ ಪಕ್ಷ ಸಂಘಟನೆಗೆ ಬಂದಿರುವೆ ಎಂದರು. ತಾಲೂಕಿನಲ್ಲಿ ಬಿಜೆಪಿ ಸಂಘಟನೆ ಚೆನ್ನಾಗಿದೆ ಎಂದು ಅಲ್ಲಿಯೇ ಹೇಳಿದ್ದೆ ಎಂದರು.

ಈ ವೇಳೆ ಮುಖಂಡರಾದ ಅಶ್ವಥ್ ನಾರಯಣಗೌಡ, ವೆಂಕಟಾಚಲಯ್ಯ, ರುದ್ರಪ್ಪ, ವೇಣುಕುಮಾರ್, ಪ್ರಕಾಶ್ ಕುಮಾರ್, ಗೋಪಾಲ್ ನಾಯಕ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

1 hour ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

6 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

8 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

11 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago