ಬಿಜೆಪಿ ಪಕ್ಷದ ಅಭ್ಯರ್ಥಿ ಸ್ಥಾನಕ್ಕೆ ನಾನು ಸಹ ಪ್ರಬಲ ಆಕಾಂಕ್ಷಿಯಾಗಿದ್ದೇನೆ-ಟಿ.ವಿ.ಲಕ್ಷ್ಮೀನಾರಾಯಣ್

ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ರಂಗೇರಿದ ಚುನಾವಣಾ ಚದುರಂಗದ ಆಟ. ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ದಿನೇದಿನೆ ಹೆಚ್ಚುತ್ತಿದೆ.

ಇಂದು ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್ ಅವರು, ನನಗೂ ಬಿಜೆಪಿಯಿಂದ ಟಿಕೆಟ್ ನೀಡಿ ಸ್ಪರ್ಧಿಸಲು ಅವಕಾಶ ನೀಡಬೇಕೆಂದು ಹೊಸ ಬಾಣ ಬಿಟ್ಟಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷದ ಅಭ್ಯರ್ಥಿ ಸ್ಥಾನಕ್ಕೆ ನಾನು ಸಹ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ಕಳೆದ 40 ವರ್ಷಗಳಿಂದ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿದ್ದೇನೆ. ಹಿರಿಯರಾದ ಜಾಲಪ್ಪ. ರಾಮೇಗೌಡ, ಆರ್.ಜಿ.ವೆಂಕಟಾಚಲಯ್ಯ, ನರಸಿಂಹಸ್ವಾಮಿ ಅವರೊಂದಿಗೆ ವಿದ್ಯಾರ್ಥಿ ಜೀವನದಿದಂದಲೂ ರಾಜಕೀಯ ಸೇವೆ ಸಲ್ಲಿಸಿ, ತಾಲೂಕಿನ ಪ್ರತಿ ಗ್ರಾಮದ ಜನರ ಅಭಿಮಾನ ಪಡೆದಿದ್ದೇನೆ ಎಂದರು.

ತಾಲೂಕು ಸೊಸೈಟಿ, ಪಿಎಲ್ ಡಿ ಬ್ಯಾಂಕ್, ಎಪಿಎಂಸಿ, ಜಿಲ್ಲಾಪಂಚಾಯಿತಿ ಅಧ್ಯಕ್ಷನಾಗಿ, ಕೇಂದ್ರ ರೇಷ್ಮೆ ಮಂಡಲಿ ಸದಸ್ಯನಾಗಿ, ರಾಜ್ಯ ಕೃಷಿ ಮಾರುಕಟ್ಟೆ ನಿರ್ದೇಶಕನಾಗಿ, ಸಹಕಾರಿ ಯೂನಿಯನ್ ನಿರ್ದೇಶಕನಾಗಿ ಸೇವೆ ಸಲ್ಲಿಸಿದ್ದೇನೆ. ಈ ನಿಟ್ಟಿನಲ್ಲಿ ಬಿಜೆಪಿಯಿಂದ ಅಭ್ಯರ್ಥಿಯಾಗಿ ನನಗೂ ಅವಕಾಶ ನೀಡಿ ಎಂದು ವರಿಷ್ಠರು, ಮುಖಂಡರು, ಕಾರ್ಯಕರ್ತರಲ್ಲಿ ಮನವಿ ಮಾಡುತ್ತಿದ್ದೇನೆ.

ವರಿಷ್ಠರು ಟಿಕೆಟ್ ನೀಡಿದರೆ ಪ್ರತಿ ಹಳ್ಳಿಯಲ್ಲಿ ಪಕ್ಷದ ಸಂಘಟನೆ, ಶಿಸ್ತಿನ ಅನ್ವಯ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ. ಇಲ್ಲವಾದರೆ ಯಾರಿಗೆ ಟಿಕೆಟ್ ನೀಡಿದರು ಬೆಂಬಲ ನೀಡುತ್ತೇನೆ ಎಂದಿದ್ದಾರೆ.

ತಾಲೂಕಿನಲ್ಲಿ ಹೊರಗಿನವರು ಬಂದು ಟಿಕೆಟ್ ಕೇಳುತ್ತಿದ್ದಾರೆ. ಅವರಿಗೆ ಎಂಪಿ, ಎಂಎಲ್ಸಿ ಸೇರಿದಂತೆ ಬೇರೆ ಬೇರೆ ಅವಕಾಶಗಳಿವೆ. ಹೊರಗಿನವರಿಗೆ ಅವಕಾಶ ನೀಡುವ ಬದಲು ನನಗೆ ಅವಕಾಶ ನೀಡಬೇಕೆಂದು ಮನವಿ ಮಾಡಿದ್ದಾರೆ.

ಜಿಲ್ಲಾ ಬಿಜೆಪಿ ಪ್ರಕೋಷ್ಠದ ಸಂಚಾಲಕ ಧೀರಜ್ ಮುನಿರಾಜು ಅವರಿಗೆ ಲೋಕಸಭೆ ಟಿಕೆಟ್ ನೀಡಲಿ ಅಥವಾ ಈ ವಿಧಾನಸಭಾ ಚುನಾವಣೆಯಲ್ಲಿ ನನನ್ನು ಗೆಲ್ಲಿಸಿ, ಮುಂದಿನ ವಿಧಾನಸಭಾ ಚುನಾವಣೆಗೆ ಬೇಕಾದರೆ ಅವರಿಗೆ ಟಿಕೆಟ್ ನೀಡಲಿ. ಅವರು ತಾಲೂಕಿಗೆ ಬಂದು ಎರಡು ಮೂರು ವರ್ಷವಾಗಿದೆ ಅಷ್ಟೇ. ನಾನು ರಾಜಕೀಯಕ್ಕೆ ಬಂದು ಸುಮಾರು ನಲವತ್ತು ವರ್ಷವಾಗಿದೆ. ನನಗೆ ವಯಸ್ಸಾಗಿದೆ  ಆದ್ದರಿಂದ ನನಗೆ ಮೊದಲು ಅವಕಾಶ ನೀಡಬೇಕು, ಅವರಿನ್ನು ವಯಸ್ಸಿನಲ್ಲಿ ಚಿಕ್ಕವರು ಅವಕಾಶ ಇದೆ ಎಂದರು.

ಇತ್ತೀಚೆಗೆ ವಸಂತ್ ಕುಮಾರ್ ಗೌಡ ಅವರ ಕಚೇರಿ ಪೂಜೆಗೆ ತಾಲೂಕು ಅಧ್ಯಕ್ಷರ ಕರೆಯ ಮೇಲೆ ತೆರಳಿದ್ದೆ ಅಷ್ಟೆ. ಆ ವೇಳೆ ವಸಂತ್ ಕುಮಾರ್ ಗೌಡ ತಾಲೂಕಿನಲ್ಲಿ ಪಕ್ಷ ಸಂಘಟನೆಗೆ ಬಂದಿರುವೆ ಎಂದರು. ತಾಲೂಕಿನಲ್ಲಿ ಬಿಜೆಪಿ ಸಂಘಟನೆ ಚೆನ್ನಾಗಿದೆ ಎಂದು ಅಲ್ಲಿಯೇ ಹೇಳಿದ್ದೆ ಎಂದರು.

ಈ ವೇಳೆ ಮುಖಂಡರಾದ ಅಶ್ವಥ್ ನಾರಯಣಗೌಡ, ವೆಂಕಟಾಚಲಯ್ಯ, ರುದ್ರಪ್ಪ, ವೇಣುಕುಮಾರ್, ಪ್ರಕಾಶ್ ಕುಮಾರ್, ಗೋಪಾಲ್ ನಾಯಕ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಜು.7 ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…

10 minutes ago

ಬ್ಲಾಕ್‌ಸ್ಪಾಟ್‌ಗಳೀಗ ಸುಂದರ ತಾಣ: ಕಸ ಸುರಿಯುತ್ತಿದ್ದ ಪ್ರದೇಶಗಳಿಗೆ ಸುಣ್ಣ ಬಣ್ಣ ಬಳಿದು ಅಲಂಕಾರ: ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ

ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…

23 minutes ago

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

13 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

14 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

16 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

1 day ago