ಬಿಜೆಪಿ ಪಕ್ಷದ ಅಭ್ಯರ್ಥಿ ಸ್ಥಾನಕ್ಕೆ ನಾನು ಸಹ ಪ್ರಬಲ ಆಕಾಂಕ್ಷಿಯಾಗಿದ್ದೇನೆ-ಟಿ.ವಿ.ಲಕ್ಷ್ಮೀನಾರಾಯಣ್

ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ರಂಗೇರಿದ ಚುನಾವಣಾ ಚದುರಂಗದ ಆಟ. ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ದಿನೇದಿನೆ ಹೆಚ್ಚುತ್ತಿದೆ.

ಇಂದು ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್ ಅವರು, ನನಗೂ ಬಿಜೆಪಿಯಿಂದ ಟಿಕೆಟ್ ನೀಡಿ ಸ್ಪರ್ಧಿಸಲು ಅವಕಾಶ ನೀಡಬೇಕೆಂದು ಹೊಸ ಬಾಣ ಬಿಟ್ಟಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷದ ಅಭ್ಯರ್ಥಿ ಸ್ಥಾನಕ್ಕೆ ನಾನು ಸಹ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ಕಳೆದ 40 ವರ್ಷಗಳಿಂದ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿದ್ದೇನೆ. ಹಿರಿಯರಾದ ಜಾಲಪ್ಪ. ರಾಮೇಗೌಡ, ಆರ್.ಜಿ.ವೆಂಕಟಾಚಲಯ್ಯ, ನರಸಿಂಹಸ್ವಾಮಿ ಅವರೊಂದಿಗೆ ವಿದ್ಯಾರ್ಥಿ ಜೀವನದಿದಂದಲೂ ರಾಜಕೀಯ ಸೇವೆ ಸಲ್ಲಿಸಿ, ತಾಲೂಕಿನ ಪ್ರತಿ ಗ್ರಾಮದ ಜನರ ಅಭಿಮಾನ ಪಡೆದಿದ್ದೇನೆ ಎಂದರು.

ತಾಲೂಕು ಸೊಸೈಟಿ, ಪಿಎಲ್ ಡಿ ಬ್ಯಾಂಕ್, ಎಪಿಎಂಸಿ, ಜಿಲ್ಲಾಪಂಚಾಯಿತಿ ಅಧ್ಯಕ್ಷನಾಗಿ, ಕೇಂದ್ರ ರೇಷ್ಮೆ ಮಂಡಲಿ ಸದಸ್ಯನಾಗಿ, ರಾಜ್ಯ ಕೃಷಿ ಮಾರುಕಟ್ಟೆ ನಿರ್ದೇಶಕನಾಗಿ, ಸಹಕಾರಿ ಯೂನಿಯನ್ ನಿರ್ದೇಶಕನಾಗಿ ಸೇವೆ ಸಲ್ಲಿಸಿದ್ದೇನೆ. ಈ ನಿಟ್ಟಿನಲ್ಲಿ ಬಿಜೆಪಿಯಿಂದ ಅಭ್ಯರ್ಥಿಯಾಗಿ ನನಗೂ ಅವಕಾಶ ನೀಡಿ ಎಂದು ವರಿಷ್ಠರು, ಮುಖಂಡರು, ಕಾರ್ಯಕರ್ತರಲ್ಲಿ ಮನವಿ ಮಾಡುತ್ತಿದ್ದೇನೆ.

ವರಿಷ್ಠರು ಟಿಕೆಟ್ ನೀಡಿದರೆ ಪ್ರತಿ ಹಳ್ಳಿಯಲ್ಲಿ ಪಕ್ಷದ ಸಂಘಟನೆ, ಶಿಸ್ತಿನ ಅನ್ವಯ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ. ಇಲ್ಲವಾದರೆ ಯಾರಿಗೆ ಟಿಕೆಟ್ ನೀಡಿದರು ಬೆಂಬಲ ನೀಡುತ್ತೇನೆ ಎಂದಿದ್ದಾರೆ.

ತಾಲೂಕಿನಲ್ಲಿ ಹೊರಗಿನವರು ಬಂದು ಟಿಕೆಟ್ ಕೇಳುತ್ತಿದ್ದಾರೆ. ಅವರಿಗೆ ಎಂಪಿ, ಎಂಎಲ್ಸಿ ಸೇರಿದಂತೆ ಬೇರೆ ಬೇರೆ ಅವಕಾಶಗಳಿವೆ. ಹೊರಗಿನವರಿಗೆ ಅವಕಾಶ ನೀಡುವ ಬದಲು ನನಗೆ ಅವಕಾಶ ನೀಡಬೇಕೆಂದು ಮನವಿ ಮಾಡಿದ್ದಾರೆ.

ಜಿಲ್ಲಾ ಬಿಜೆಪಿ ಪ್ರಕೋಷ್ಠದ ಸಂಚಾಲಕ ಧೀರಜ್ ಮುನಿರಾಜು ಅವರಿಗೆ ಲೋಕಸಭೆ ಟಿಕೆಟ್ ನೀಡಲಿ ಅಥವಾ ಈ ವಿಧಾನಸಭಾ ಚುನಾವಣೆಯಲ್ಲಿ ನನನ್ನು ಗೆಲ್ಲಿಸಿ, ಮುಂದಿನ ವಿಧಾನಸಭಾ ಚುನಾವಣೆಗೆ ಬೇಕಾದರೆ ಅವರಿಗೆ ಟಿಕೆಟ್ ನೀಡಲಿ. ಅವರು ತಾಲೂಕಿಗೆ ಬಂದು ಎರಡು ಮೂರು ವರ್ಷವಾಗಿದೆ ಅಷ್ಟೇ. ನಾನು ರಾಜಕೀಯಕ್ಕೆ ಬಂದು ಸುಮಾರು ನಲವತ್ತು ವರ್ಷವಾಗಿದೆ. ನನಗೆ ವಯಸ್ಸಾಗಿದೆ  ಆದ್ದರಿಂದ ನನಗೆ ಮೊದಲು ಅವಕಾಶ ನೀಡಬೇಕು, ಅವರಿನ್ನು ವಯಸ್ಸಿನಲ್ಲಿ ಚಿಕ್ಕವರು ಅವಕಾಶ ಇದೆ ಎಂದರು.

ಇತ್ತೀಚೆಗೆ ವಸಂತ್ ಕುಮಾರ್ ಗೌಡ ಅವರ ಕಚೇರಿ ಪೂಜೆಗೆ ತಾಲೂಕು ಅಧ್ಯಕ್ಷರ ಕರೆಯ ಮೇಲೆ ತೆರಳಿದ್ದೆ ಅಷ್ಟೆ. ಆ ವೇಳೆ ವಸಂತ್ ಕುಮಾರ್ ಗೌಡ ತಾಲೂಕಿನಲ್ಲಿ ಪಕ್ಷ ಸಂಘಟನೆಗೆ ಬಂದಿರುವೆ ಎಂದರು. ತಾಲೂಕಿನಲ್ಲಿ ಬಿಜೆಪಿ ಸಂಘಟನೆ ಚೆನ್ನಾಗಿದೆ ಎಂದು ಅಲ್ಲಿಯೇ ಹೇಳಿದ್ದೆ ಎಂದರು.

ಈ ವೇಳೆ ಮುಖಂಡರಾದ ಅಶ್ವಥ್ ನಾರಯಣಗೌಡ, ವೆಂಕಟಾಚಲಯ್ಯ, ರುದ್ರಪ್ಪ, ವೇಣುಕುಮಾರ್, ಪ್ರಕಾಶ್ ಕುಮಾರ್, ಗೋಪಾಲ್ ನಾಯಕ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

10 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

13 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

14 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

17 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago