ಬಿಜೆಪಿ ಪಕ್ಷದ ಅಭ್ಯರ್ಥಿ ಸ್ಥಾನಕ್ಕೆ ನಾನು ಸಹ ಪ್ರಬಲ ಆಕಾಂಕ್ಷಿಯಾಗಿದ್ದೇನೆ-ಟಿ.ವಿ.ಲಕ್ಷ್ಮೀನಾರಾಯಣ್

ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ರಂಗೇರಿದ ಚುನಾವಣಾ ಚದುರಂಗದ ಆಟ. ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ದಿನೇದಿನೆ ಹೆಚ್ಚುತ್ತಿದೆ.

ಇಂದು ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್ ಅವರು, ನನಗೂ ಬಿಜೆಪಿಯಿಂದ ಟಿಕೆಟ್ ನೀಡಿ ಸ್ಪರ್ಧಿಸಲು ಅವಕಾಶ ನೀಡಬೇಕೆಂದು ಹೊಸ ಬಾಣ ಬಿಟ್ಟಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷದ ಅಭ್ಯರ್ಥಿ ಸ್ಥಾನಕ್ಕೆ ನಾನು ಸಹ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ಕಳೆದ 40 ವರ್ಷಗಳಿಂದ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿದ್ದೇನೆ. ಹಿರಿಯರಾದ ಜಾಲಪ್ಪ. ರಾಮೇಗೌಡ, ಆರ್.ಜಿ.ವೆಂಕಟಾಚಲಯ್ಯ, ನರಸಿಂಹಸ್ವಾಮಿ ಅವರೊಂದಿಗೆ ವಿದ್ಯಾರ್ಥಿ ಜೀವನದಿದಂದಲೂ ರಾಜಕೀಯ ಸೇವೆ ಸಲ್ಲಿಸಿ, ತಾಲೂಕಿನ ಪ್ರತಿ ಗ್ರಾಮದ ಜನರ ಅಭಿಮಾನ ಪಡೆದಿದ್ದೇನೆ ಎಂದರು.

ತಾಲೂಕು ಸೊಸೈಟಿ, ಪಿಎಲ್ ಡಿ ಬ್ಯಾಂಕ್, ಎಪಿಎಂಸಿ, ಜಿಲ್ಲಾಪಂಚಾಯಿತಿ ಅಧ್ಯಕ್ಷನಾಗಿ, ಕೇಂದ್ರ ರೇಷ್ಮೆ ಮಂಡಲಿ ಸದಸ್ಯನಾಗಿ, ರಾಜ್ಯ ಕೃಷಿ ಮಾರುಕಟ್ಟೆ ನಿರ್ದೇಶಕನಾಗಿ, ಸಹಕಾರಿ ಯೂನಿಯನ್ ನಿರ್ದೇಶಕನಾಗಿ ಸೇವೆ ಸಲ್ಲಿಸಿದ್ದೇನೆ. ಈ ನಿಟ್ಟಿನಲ್ಲಿ ಬಿಜೆಪಿಯಿಂದ ಅಭ್ಯರ್ಥಿಯಾಗಿ ನನಗೂ ಅವಕಾಶ ನೀಡಿ ಎಂದು ವರಿಷ್ಠರು, ಮುಖಂಡರು, ಕಾರ್ಯಕರ್ತರಲ್ಲಿ ಮನವಿ ಮಾಡುತ್ತಿದ್ದೇನೆ.

ವರಿಷ್ಠರು ಟಿಕೆಟ್ ನೀಡಿದರೆ ಪ್ರತಿ ಹಳ್ಳಿಯಲ್ಲಿ ಪಕ್ಷದ ಸಂಘಟನೆ, ಶಿಸ್ತಿನ ಅನ್ವಯ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ. ಇಲ್ಲವಾದರೆ ಯಾರಿಗೆ ಟಿಕೆಟ್ ನೀಡಿದರು ಬೆಂಬಲ ನೀಡುತ್ತೇನೆ ಎಂದಿದ್ದಾರೆ.

ತಾಲೂಕಿನಲ್ಲಿ ಹೊರಗಿನವರು ಬಂದು ಟಿಕೆಟ್ ಕೇಳುತ್ತಿದ್ದಾರೆ. ಅವರಿಗೆ ಎಂಪಿ, ಎಂಎಲ್ಸಿ ಸೇರಿದಂತೆ ಬೇರೆ ಬೇರೆ ಅವಕಾಶಗಳಿವೆ. ಹೊರಗಿನವರಿಗೆ ಅವಕಾಶ ನೀಡುವ ಬದಲು ನನಗೆ ಅವಕಾಶ ನೀಡಬೇಕೆಂದು ಮನವಿ ಮಾಡಿದ್ದಾರೆ.

ಜಿಲ್ಲಾ ಬಿಜೆಪಿ ಪ್ರಕೋಷ್ಠದ ಸಂಚಾಲಕ ಧೀರಜ್ ಮುನಿರಾಜು ಅವರಿಗೆ ಲೋಕಸಭೆ ಟಿಕೆಟ್ ನೀಡಲಿ ಅಥವಾ ಈ ವಿಧಾನಸಭಾ ಚುನಾವಣೆಯಲ್ಲಿ ನನನ್ನು ಗೆಲ್ಲಿಸಿ, ಮುಂದಿನ ವಿಧಾನಸಭಾ ಚುನಾವಣೆಗೆ ಬೇಕಾದರೆ ಅವರಿಗೆ ಟಿಕೆಟ್ ನೀಡಲಿ. ಅವರು ತಾಲೂಕಿಗೆ ಬಂದು ಎರಡು ಮೂರು ವರ್ಷವಾಗಿದೆ ಅಷ್ಟೇ. ನಾನು ರಾಜಕೀಯಕ್ಕೆ ಬಂದು ಸುಮಾರು ನಲವತ್ತು ವರ್ಷವಾಗಿದೆ. ನನಗೆ ವಯಸ್ಸಾಗಿದೆ  ಆದ್ದರಿಂದ ನನಗೆ ಮೊದಲು ಅವಕಾಶ ನೀಡಬೇಕು, ಅವರಿನ್ನು ವಯಸ್ಸಿನಲ್ಲಿ ಚಿಕ್ಕವರು ಅವಕಾಶ ಇದೆ ಎಂದರು.

ಇತ್ತೀಚೆಗೆ ವಸಂತ್ ಕುಮಾರ್ ಗೌಡ ಅವರ ಕಚೇರಿ ಪೂಜೆಗೆ ತಾಲೂಕು ಅಧ್ಯಕ್ಷರ ಕರೆಯ ಮೇಲೆ ತೆರಳಿದ್ದೆ ಅಷ್ಟೆ. ಆ ವೇಳೆ ವಸಂತ್ ಕುಮಾರ್ ಗೌಡ ತಾಲೂಕಿನಲ್ಲಿ ಪಕ್ಷ ಸಂಘಟನೆಗೆ ಬಂದಿರುವೆ ಎಂದರು. ತಾಲೂಕಿನಲ್ಲಿ ಬಿಜೆಪಿ ಸಂಘಟನೆ ಚೆನ್ನಾಗಿದೆ ಎಂದು ಅಲ್ಲಿಯೇ ಹೇಳಿದ್ದೆ ಎಂದರು.

ಈ ವೇಳೆ ಮುಖಂಡರಾದ ಅಶ್ವಥ್ ನಾರಯಣಗೌಡ, ವೆಂಕಟಾಚಲಯ್ಯ, ರುದ್ರಪ್ಪ, ವೇಣುಕುಮಾರ್, ಪ್ರಕಾಶ್ ಕುಮಾರ್, ಗೋಪಾಲ್ ನಾಯಕ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

7 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

18 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

19 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

19 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

21 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

1 day ago