ಬಿಜೆಪಿ ಪಕ್ಷ ಸೋಲಿಸುವ ಸಮರ್ಥ ಅಭ್ಯರ್ಥಿಗೆ ಮತಹಾಕಿ-ಬೆಳವಂಗಲ ಪ್ರಭಾ

ಕೋಮುವಾದಿ, ಜಾತಿವಾದಿ ಬಿಜೆಪಿ ಪಕ್ಷವನ್ನು ಸೋಲಿಸುವ ಸಮರ್ಥ ಅಭ್ಯರ್ಥಿಗೆ ಮತಹಾಕಿ. ಪ್ರಜಾಪ್ರಭುತ್ವದಲ್ಲಿ ಮತದಾನದಿಂದ ಮಾತ್ರ ಯಾವುದೇ ಒಂದು ಜನವಿರೋಧಿ ಆಡಳಿತವನ್ನು ಮಣಿಸಲು ಸಾಧ್ಯ ಎಂದು ರಾಷ್ಟ್ರಕವಿ ಕುವೆಂಪು ಹೋರಾಟ ವೇದಿಕೆಯ ಮುಖಂಡರಾದ ಬೆಳವಂಗಲ ಪ್ರಭಾ ಹೇಳಿದರು.

ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದೊಡ್ಡಬಳ್ಳಾಪುರ ವಿಧಾನ ಸಭಾ ಕ್ಷೇತ್ರದಲ್ಲಿ ಎಂದೂ ಸಹ ಧರ್ಮ, ಜಾತಿ ಆಧಾರದ ಮೇಲೆ ಮತದಾನ ನಡೆದಿಲ್ಲ. ಇಲ್ಲಿನ ಮತದಾರರ ಮನಸ್ಥಿತಿಯೇ ಜಾತ್ಯಾತೀತವಾಗಿದೆ.

ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಸಿದ್ದಲಿಂಗಯ್ಯ, ಎಚ್.ಮುಗುವಾಳಪ್ಪ, ವಿಶ್ವಮಟ್ಟದ ಚಿಂತಕ ಡಿ.ಆರ್.ನಾಗರಾಜ್ ಅವರಂತಹ ಮಹಾನ್ ನಾಯಕರು ಹಲವಾರು ಜನಪರವಾದ ಚಳುವಳಿಗಳನ್ನು ಕಟ್ಟಿಬೆಳೆಸಿರುವ ಕ್ಷೇತ್ರ ಇದಾಗಿದೆ. ಗ್ರಾಮಗಳಲ್ಲಿ ನೆಮ್ಮದಿ ನೆಲಸಬೇಕಿದ್ದರೆ, ಪರಸ್ಪರ ಜಗಳ ತಂದಿಡುವ ಪಕ್ಷದ ಅಭ್ಯರ್ಥಿಗೆ ಮತ ನೀಡದೆ ಪ್ರಜ್ಞಾವಂತಿಕೆಯಿಂದ ಮತದಾನ ಮಾಡಬೇಕಿದೆ. ಸುಳ್ಳನ್ನೇ ಸತ್ಯದಂತೆ ಹೇಳಿ ಜನರನ್ನು ಮೆಚ್ಚಿಸುವ ಪ್ರವೃತ್ತಿಯ ಜನರಿಗೆ ಕಡಿವಾಣ ಹಾಕಬೇಕಿದೆ ಎಂದರು.

ಪ್ರಗತಿಪರ ಚಿಂತಕ, ಲೇಖಕ ಡಾ.ಎಲ್.ಎನ್.ಮುಕುಂದರಾಜ್ ಮಾತನಾಡಿ, ನಮ್ಮೆಲ್ಲರ ಬದುಕಿನ ಪವಿತ್ರ ಗ್ರಂಥವಾಗಿರುವ ಸಂವಿಧಾನವನ್ನೇ ಬುಡಮೇಲು ಮಾಡುವಂತಹವರಿಗೆ ಮತದಾನ ಮಾಡಬಾರದು. ರಾಷ್ಟ್ರ ಕವಿ ಕುವೆಂಪು ಅವರು ರಚಿಸಿದ ನಾಡಗೀತೆಯನ್ನೇ ತಿರುಚಿ ಬರೆದಂತಹವರನ್ನು ಪಠ್ಯ ಪುಸ್ತಕ ರಚನ ಸಮಿತಿಯ ಅಧ್ಯಕ್ಷರನ್ನಾಗಿ ಮಾಡುವಂತಹ ಬಿಜೆಪಿ ಆಡಳಿತ ಮತ್ತೆ ರಾಜ್ಯದಲ್ಲಿ ಬರಬಾರದು.

ನಮ್ಮೆಲ್ಲರ ಹೆಮ್ಮೆಯ ನಂದಿನಿ ಸೇರಿದಂತೆ ಬ್ಯಾಂಕ್ಗಳನ್ನು ವಿಲೀನ ಮಾಡುವ ಮೂಲಕ ಪ್ರಾದೇಶಿಕತೆಯ ಕುರುಹನ್ನೇ ನಾಶ ಮಾಡಲು ಮುಂದಾಗಿರುವ ಪಕ್ಷಕ್ಕೆ ತಕ್ಕ ಪಾಠ ಕಲಿಸುವ ಇರುವ ಅವಕಾಶವೇ ಮತದಾನ. ಸ್ವಚ್ಛ ಭಾರತ್ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿ ಹಣ ವ್ಯರ್ಥವಾಗಿದೆ. ಆದರೆ ವಾಸ್ತದಲ್ಲಿ ಮಾತ್ರ ಏನೂ ಆಗಿಲ್ಲ. ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತ ಆಡಳಿತಕ್ಕೆ ಬರುವವರನ್ನು ತಡೆಯಬೇಕಿದೆ ಎಂದರು.

ರಾಷ್ಟ್ರಕವಿ ಕುವೆಂಪು ಹೋರಾಟ ವೇದಿಕೆಯ ಸಂಚಾಲಕ ಜಗದೀಶ್ ಮಾತನಾಡಿ, ಭ್ರಷ್ಟಾಚಾರಿಗಳಿಗಿಂತಲು ಕೋಮುವಾದಿಗಳು ಹೆಚ್ಚು ಅಪಾಯಕಾರಿ. ಅಂಬೇಡ್ಕರ್ ವಾದ,ಗಾಂಧಿ ವಾದ,ಲೋಹಿಯವಾದ ಎಲ್ಲರೂ ಒಟ್ಟಾಗಿ ಹೋರಾಟ ನಡೆಸಿದಾಗ ಮಾತ್ರ ನಾಡನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿ ಮಾಡಲು ಸಾಧ್ಯ ಎಂದರು.

ರಾಜ್ಯ ಜ್ಞಾನ ವಿಜ್ಞಾನ ಸಮಿತಿಯ ಕಾರ್ಯದರ್ಶಿ ಬಸವರಾಜ್ ಮಾತನಾಡಿ, ಪ್ರಜಾಪ್ರಭುತ್ವ ರೀತಿಯಲ್ಲಿ ಆಯ್ಕೆಯಾಗಿರುವ ಶಾಸಕರನ್ನೇ ಖರೀದಿಸುವ ವಾಮ ಮಾರ್ಗವನ್ನು ರಾಜ್ಯಕ್ಕೆ ಪರಿಚಿಯಿಸಿದವರು ಬಿಜೆಪಿ ಮುಖಂಡರು. ನೋಟುಗಳ ಅಮಾನೀಕರಣಕ್ಕೆ ನೀಡಿದ್ದ ಎಲ್ಲಾ ಕಾರಣಗಳು ಸಹ ಸುಳ್ಳಾಗಿವೆ. ಯುವಜನರಿಗೆ ಉದ್ಯೋಗ,ಕಪ್ಪು ಹಣ ತರುವುದು ಈ ಎಲ್ಲಾ ಭರವಸೆಗಳು ಹತ್ತು ವರ್ಷಗಳಲ್ಲಿ ನಮ್ಮ ಕಣ್ಣ ಮುಂದೆಯೇ ಹುಸಿಯಾಗಿವೆ ಎಂದರು.

Ramesh Babu

Journalist

Recent Posts

ಎಂಎಸ್ ಜಿಪಿ ಘಟಕಕ್ಕೆ ಬಂದ ಹೆಚ್ಚುವರಿ ಕಸದ ಲಾರಿಗಳು: ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ಲಾರಿಗಳಿಗೆ ತಡೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…

9 hours ago

40 ಸಾವಿರ ಲಂಚ ಪಡೆಯುವಾಗ ವಿಶೇಷ ಭೂಸ್ವಾಧೀನಾಧಿಕಾರಿ ಸೇರಿದಂತೆ ಇಬ್ಬರು ಲೋಕಾಯುಕ್ತ ಬಲೆಗೆ.!

ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…

10 hours ago

Accident Update: ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ‌ ಪ್ರಕರಣ: ಬೈಕ್ ಸವಾರ ಸಾವು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…

10 hours ago

ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…

10 hours ago

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟ

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…

12 hours ago

ಗೀತಂ ಯೂನಿವರ್ಸಿಟಿಯಲ್ಲಿ ಯುವತಿ ಆತ್ಮಹತ್ಯೆ ಪ್ರಕರಣ: ಸ್ಥಳಕ್ಕೆ ಎಸ್ಪಿ‌ ಚಂದ್ರಕಾಂತ್ ಭೇಟಿ, ಪರಿಶೀಲನೆ, ಪ್ರತಿಕ್ರಿಯೆ

ಆಕೆ ತಂದೆ ತಾಯಿಗೆ ಇದ್ದ ಏಕೈಕ‌ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ‌. ಮಗಳು ಚೆನ್ನಾಗಿ…

14 hours ago