ಬಿಜೆಪಿ ಪಕ್ಷ ಸೋಲಿಸುವ ಸಮರ್ಥ ಅಭ್ಯರ್ಥಿಗೆ ಮತಹಾಕಿ-ಬೆಳವಂಗಲ ಪ್ರಭಾ

ಕೋಮುವಾದಿ, ಜಾತಿವಾದಿ ಬಿಜೆಪಿ ಪಕ್ಷವನ್ನು ಸೋಲಿಸುವ ಸಮರ್ಥ ಅಭ್ಯರ್ಥಿಗೆ ಮತಹಾಕಿ. ಪ್ರಜಾಪ್ರಭುತ್ವದಲ್ಲಿ ಮತದಾನದಿಂದ ಮಾತ್ರ ಯಾವುದೇ ಒಂದು ಜನವಿರೋಧಿ ಆಡಳಿತವನ್ನು ಮಣಿಸಲು ಸಾಧ್ಯ ಎಂದು ರಾಷ್ಟ್ರಕವಿ ಕುವೆಂಪು ಹೋರಾಟ ವೇದಿಕೆಯ ಮುಖಂಡರಾದ ಬೆಳವಂಗಲ ಪ್ರಭಾ ಹೇಳಿದರು.

ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದೊಡ್ಡಬಳ್ಳಾಪುರ ವಿಧಾನ ಸಭಾ ಕ್ಷೇತ್ರದಲ್ಲಿ ಎಂದೂ ಸಹ ಧರ್ಮ, ಜಾತಿ ಆಧಾರದ ಮೇಲೆ ಮತದಾನ ನಡೆದಿಲ್ಲ. ಇಲ್ಲಿನ ಮತದಾರರ ಮನಸ್ಥಿತಿಯೇ ಜಾತ್ಯಾತೀತವಾಗಿದೆ.

ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಸಿದ್ದಲಿಂಗಯ್ಯ, ಎಚ್.ಮುಗುವಾಳಪ್ಪ, ವಿಶ್ವಮಟ್ಟದ ಚಿಂತಕ ಡಿ.ಆರ್.ನಾಗರಾಜ್ ಅವರಂತಹ ಮಹಾನ್ ನಾಯಕರು ಹಲವಾರು ಜನಪರವಾದ ಚಳುವಳಿಗಳನ್ನು ಕಟ್ಟಿಬೆಳೆಸಿರುವ ಕ್ಷೇತ್ರ ಇದಾಗಿದೆ. ಗ್ರಾಮಗಳಲ್ಲಿ ನೆಮ್ಮದಿ ನೆಲಸಬೇಕಿದ್ದರೆ, ಪರಸ್ಪರ ಜಗಳ ತಂದಿಡುವ ಪಕ್ಷದ ಅಭ್ಯರ್ಥಿಗೆ ಮತ ನೀಡದೆ ಪ್ರಜ್ಞಾವಂತಿಕೆಯಿಂದ ಮತದಾನ ಮಾಡಬೇಕಿದೆ. ಸುಳ್ಳನ್ನೇ ಸತ್ಯದಂತೆ ಹೇಳಿ ಜನರನ್ನು ಮೆಚ್ಚಿಸುವ ಪ್ರವೃತ್ತಿಯ ಜನರಿಗೆ ಕಡಿವಾಣ ಹಾಕಬೇಕಿದೆ ಎಂದರು.

ಪ್ರಗತಿಪರ ಚಿಂತಕ, ಲೇಖಕ ಡಾ.ಎಲ್.ಎನ್.ಮುಕುಂದರಾಜ್ ಮಾತನಾಡಿ, ನಮ್ಮೆಲ್ಲರ ಬದುಕಿನ ಪವಿತ್ರ ಗ್ರಂಥವಾಗಿರುವ ಸಂವಿಧಾನವನ್ನೇ ಬುಡಮೇಲು ಮಾಡುವಂತಹವರಿಗೆ ಮತದಾನ ಮಾಡಬಾರದು. ರಾಷ್ಟ್ರ ಕವಿ ಕುವೆಂಪು ಅವರು ರಚಿಸಿದ ನಾಡಗೀತೆಯನ್ನೇ ತಿರುಚಿ ಬರೆದಂತಹವರನ್ನು ಪಠ್ಯ ಪುಸ್ತಕ ರಚನ ಸಮಿತಿಯ ಅಧ್ಯಕ್ಷರನ್ನಾಗಿ ಮಾಡುವಂತಹ ಬಿಜೆಪಿ ಆಡಳಿತ ಮತ್ತೆ ರಾಜ್ಯದಲ್ಲಿ ಬರಬಾರದು.

ನಮ್ಮೆಲ್ಲರ ಹೆಮ್ಮೆಯ ನಂದಿನಿ ಸೇರಿದಂತೆ ಬ್ಯಾಂಕ್ಗಳನ್ನು ವಿಲೀನ ಮಾಡುವ ಮೂಲಕ ಪ್ರಾದೇಶಿಕತೆಯ ಕುರುಹನ್ನೇ ನಾಶ ಮಾಡಲು ಮುಂದಾಗಿರುವ ಪಕ್ಷಕ್ಕೆ ತಕ್ಕ ಪಾಠ ಕಲಿಸುವ ಇರುವ ಅವಕಾಶವೇ ಮತದಾನ. ಸ್ವಚ್ಛ ಭಾರತ್ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿ ಹಣ ವ್ಯರ್ಥವಾಗಿದೆ. ಆದರೆ ವಾಸ್ತದಲ್ಲಿ ಮಾತ್ರ ಏನೂ ಆಗಿಲ್ಲ. ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತ ಆಡಳಿತಕ್ಕೆ ಬರುವವರನ್ನು ತಡೆಯಬೇಕಿದೆ ಎಂದರು.

ರಾಷ್ಟ್ರಕವಿ ಕುವೆಂಪು ಹೋರಾಟ ವೇದಿಕೆಯ ಸಂಚಾಲಕ ಜಗದೀಶ್ ಮಾತನಾಡಿ, ಭ್ರಷ್ಟಾಚಾರಿಗಳಿಗಿಂತಲು ಕೋಮುವಾದಿಗಳು ಹೆಚ್ಚು ಅಪಾಯಕಾರಿ. ಅಂಬೇಡ್ಕರ್ ವಾದ,ಗಾಂಧಿ ವಾದ,ಲೋಹಿಯವಾದ ಎಲ್ಲರೂ ಒಟ್ಟಾಗಿ ಹೋರಾಟ ನಡೆಸಿದಾಗ ಮಾತ್ರ ನಾಡನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿ ಮಾಡಲು ಸಾಧ್ಯ ಎಂದರು.

ರಾಜ್ಯ ಜ್ಞಾನ ವಿಜ್ಞಾನ ಸಮಿತಿಯ ಕಾರ್ಯದರ್ಶಿ ಬಸವರಾಜ್ ಮಾತನಾಡಿ, ಪ್ರಜಾಪ್ರಭುತ್ವ ರೀತಿಯಲ್ಲಿ ಆಯ್ಕೆಯಾಗಿರುವ ಶಾಸಕರನ್ನೇ ಖರೀದಿಸುವ ವಾಮ ಮಾರ್ಗವನ್ನು ರಾಜ್ಯಕ್ಕೆ ಪರಿಚಿಯಿಸಿದವರು ಬಿಜೆಪಿ ಮುಖಂಡರು. ನೋಟುಗಳ ಅಮಾನೀಕರಣಕ್ಕೆ ನೀಡಿದ್ದ ಎಲ್ಲಾ ಕಾರಣಗಳು ಸಹ ಸುಳ್ಳಾಗಿವೆ. ಯುವಜನರಿಗೆ ಉದ್ಯೋಗ,ಕಪ್ಪು ಹಣ ತರುವುದು ಈ ಎಲ್ಲಾ ಭರವಸೆಗಳು ಹತ್ತು ವರ್ಷಗಳಲ್ಲಿ ನಮ್ಮ ಕಣ್ಣ ಮುಂದೆಯೇ ಹುಸಿಯಾಗಿವೆ ಎಂದರು.

Ramesh Babu

Journalist

Recent Posts

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ಒಣಗಿದ ದಾಸವಾಳ ಹೂ ನುಂಗಿ ಆರುವರೆ ತಿಂಗಳ ಮಗು ದಾರುಣ ಸಾವು

ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…

14 minutes ago

ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಲೋಕಾಯುಕ್ತ ಬಲೆಗೆ

ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…

2 hours ago

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

10 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

12 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

20 hours ago

ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಶ್ರೀರಾಮೋತ್ಸವ‌:‌ ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ: ಶ್ರೀರಾಮ ನಾಮದಲ್ಲಿ ಮಿಂದೆದ್ದ ಸಹಸ್ರಾರು ಜನ

ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…

1 day ago