ಬಿಜೆಪಿ ಪಕ್ಷ ಸೋಲಿಸುವ ಸಮರ್ಥ ಅಭ್ಯರ್ಥಿಗೆ ಮತಹಾಕಿ-ಬೆಳವಂಗಲ ಪ್ರಭಾ

ಕೋಮುವಾದಿ, ಜಾತಿವಾದಿ ಬಿಜೆಪಿ ಪಕ್ಷವನ್ನು ಸೋಲಿಸುವ ಸಮರ್ಥ ಅಭ್ಯರ್ಥಿಗೆ ಮತಹಾಕಿ. ಪ್ರಜಾಪ್ರಭುತ್ವದಲ್ಲಿ ಮತದಾನದಿಂದ ಮಾತ್ರ ಯಾವುದೇ ಒಂದು ಜನವಿರೋಧಿ ಆಡಳಿತವನ್ನು ಮಣಿಸಲು ಸಾಧ್ಯ ಎಂದು ರಾಷ್ಟ್ರಕವಿ ಕುವೆಂಪು ಹೋರಾಟ ವೇದಿಕೆಯ ಮುಖಂಡರಾದ ಬೆಳವಂಗಲ ಪ್ರಭಾ ಹೇಳಿದರು.

ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದೊಡ್ಡಬಳ್ಳಾಪುರ ವಿಧಾನ ಸಭಾ ಕ್ಷೇತ್ರದಲ್ಲಿ ಎಂದೂ ಸಹ ಧರ್ಮ, ಜಾತಿ ಆಧಾರದ ಮೇಲೆ ಮತದಾನ ನಡೆದಿಲ್ಲ. ಇಲ್ಲಿನ ಮತದಾರರ ಮನಸ್ಥಿತಿಯೇ ಜಾತ್ಯಾತೀತವಾಗಿದೆ.

ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಸಿದ್ದಲಿಂಗಯ್ಯ, ಎಚ್.ಮುಗುವಾಳಪ್ಪ, ವಿಶ್ವಮಟ್ಟದ ಚಿಂತಕ ಡಿ.ಆರ್.ನಾಗರಾಜ್ ಅವರಂತಹ ಮಹಾನ್ ನಾಯಕರು ಹಲವಾರು ಜನಪರವಾದ ಚಳುವಳಿಗಳನ್ನು ಕಟ್ಟಿಬೆಳೆಸಿರುವ ಕ್ಷೇತ್ರ ಇದಾಗಿದೆ. ಗ್ರಾಮಗಳಲ್ಲಿ ನೆಮ್ಮದಿ ನೆಲಸಬೇಕಿದ್ದರೆ, ಪರಸ್ಪರ ಜಗಳ ತಂದಿಡುವ ಪಕ್ಷದ ಅಭ್ಯರ್ಥಿಗೆ ಮತ ನೀಡದೆ ಪ್ರಜ್ಞಾವಂತಿಕೆಯಿಂದ ಮತದಾನ ಮಾಡಬೇಕಿದೆ. ಸುಳ್ಳನ್ನೇ ಸತ್ಯದಂತೆ ಹೇಳಿ ಜನರನ್ನು ಮೆಚ್ಚಿಸುವ ಪ್ರವೃತ್ತಿಯ ಜನರಿಗೆ ಕಡಿವಾಣ ಹಾಕಬೇಕಿದೆ ಎಂದರು.

ಪ್ರಗತಿಪರ ಚಿಂತಕ, ಲೇಖಕ ಡಾ.ಎಲ್.ಎನ್.ಮುಕುಂದರಾಜ್ ಮಾತನಾಡಿ, ನಮ್ಮೆಲ್ಲರ ಬದುಕಿನ ಪವಿತ್ರ ಗ್ರಂಥವಾಗಿರುವ ಸಂವಿಧಾನವನ್ನೇ ಬುಡಮೇಲು ಮಾಡುವಂತಹವರಿಗೆ ಮತದಾನ ಮಾಡಬಾರದು. ರಾಷ್ಟ್ರ ಕವಿ ಕುವೆಂಪು ಅವರು ರಚಿಸಿದ ನಾಡಗೀತೆಯನ್ನೇ ತಿರುಚಿ ಬರೆದಂತಹವರನ್ನು ಪಠ್ಯ ಪುಸ್ತಕ ರಚನ ಸಮಿತಿಯ ಅಧ್ಯಕ್ಷರನ್ನಾಗಿ ಮಾಡುವಂತಹ ಬಿಜೆಪಿ ಆಡಳಿತ ಮತ್ತೆ ರಾಜ್ಯದಲ್ಲಿ ಬರಬಾರದು.

ನಮ್ಮೆಲ್ಲರ ಹೆಮ್ಮೆಯ ನಂದಿನಿ ಸೇರಿದಂತೆ ಬ್ಯಾಂಕ್ಗಳನ್ನು ವಿಲೀನ ಮಾಡುವ ಮೂಲಕ ಪ್ರಾದೇಶಿಕತೆಯ ಕುರುಹನ್ನೇ ನಾಶ ಮಾಡಲು ಮುಂದಾಗಿರುವ ಪಕ್ಷಕ್ಕೆ ತಕ್ಕ ಪಾಠ ಕಲಿಸುವ ಇರುವ ಅವಕಾಶವೇ ಮತದಾನ. ಸ್ವಚ್ಛ ಭಾರತ್ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿ ಹಣ ವ್ಯರ್ಥವಾಗಿದೆ. ಆದರೆ ವಾಸ್ತದಲ್ಲಿ ಮಾತ್ರ ಏನೂ ಆಗಿಲ್ಲ. ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತ ಆಡಳಿತಕ್ಕೆ ಬರುವವರನ್ನು ತಡೆಯಬೇಕಿದೆ ಎಂದರು.

ರಾಷ್ಟ್ರಕವಿ ಕುವೆಂಪು ಹೋರಾಟ ವೇದಿಕೆಯ ಸಂಚಾಲಕ ಜಗದೀಶ್ ಮಾತನಾಡಿ, ಭ್ರಷ್ಟಾಚಾರಿಗಳಿಗಿಂತಲು ಕೋಮುವಾದಿಗಳು ಹೆಚ್ಚು ಅಪಾಯಕಾರಿ. ಅಂಬೇಡ್ಕರ್ ವಾದ,ಗಾಂಧಿ ವಾದ,ಲೋಹಿಯವಾದ ಎಲ್ಲರೂ ಒಟ್ಟಾಗಿ ಹೋರಾಟ ನಡೆಸಿದಾಗ ಮಾತ್ರ ನಾಡನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿ ಮಾಡಲು ಸಾಧ್ಯ ಎಂದರು.

ರಾಜ್ಯ ಜ್ಞಾನ ವಿಜ್ಞಾನ ಸಮಿತಿಯ ಕಾರ್ಯದರ್ಶಿ ಬಸವರಾಜ್ ಮಾತನಾಡಿ, ಪ್ರಜಾಪ್ರಭುತ್ವ ರೀತಿಯಲ್ಲಿ ಆಯ್ಕೆಯಾಗಿರುವ ಶಾಸಕರನ್ನೇ ಖರೀದಿಸುವ ವಾಮ ಮಾರ್ಗವನ್ನು ರಾಜ್ಯಕ್ಕೆ ಪರಿಚಿಯಿಸಿದವರು ಬಿಜೆಪಿ ಮುಖಂಡರು. ನೋಟುಗಳ ಅಮಾನೀಕರಣಕ್ಕೆ ನೀಡಿದ್ದ ಎಲ್ಲಾ ಕಾರಣಗಳು ಸಹ ಸುಳ್ಳಾಗಿವೆ. ಯುವಜನರಿಗೆ ಉದ್ಯೋಗ,ಕಪ್ಪು ಹಣ ತರುವುದು ಈ ಎಲ್ಲಾ ಭರವಸೆಗಳು ಹತ್ತು ವರ್ಷಗಳಲ್ಲಿ ನಮ್ಮ ಕಣ್ಣ ಮುಂದೆಯೇ ಹುಸಿಯಾಗಿವೆ ಎಂದರು.

Ramesh Babu

Journalist

Recent Posts

“ರೆಕಾರ್ಡ್ ಮಾಡಲು ನೀಡಿದ ಒಪ್ಪಿಗೆಯು ಪ್ರಸಾರ ಮಾಡಲು ನೀಡಿದ ಒಪ್ಪಿಗೆಯಲ್ಲ” – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್‌ಟಾರ್ಷನ್ ಹಾಗೂ ಬ್ಲ್ಯಾಕ್‌ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…

11 hours ago

ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ನೋಂದಣಿಗೆ ಕರೆ

ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…

1 day ago

ತಮ್ಮನ ಮೇಲೆ ಅಣ್ಣನಿಂದ ಗುಂಡಿನ ದಾಳಿ..?

ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲು ಮ್ಯಾರಥಾನ್: ಎಸ್‌ಪಿ ಚಂದ್ರಕಾಂತ್ ಎಂ.ವಿ

ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…

1 day ago

ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…

2 days ago

ಬೈಕ್ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು; ಲಕ್ಷಾಂತರ ಮೌಲ್ಯದ 42 ದ್ವಿಚಕ್ರ ವಾಹನ ವಶ

ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…

2 days ago