ಬಿಜೆಪಿ ಮಾಡಿದ್ದ ಸ್ಮಾರ್ಟ್ ಮೀಟರ್ ಟೆಂಡರ್ ಹಗರಣ ಆರೋಪ ವಿಚಾರವಾಗಿ ಸಚಿವ ಕೆ.ಜೆ.ಜಾರ್ಜ್ಗೆ ರಿಲೀಫ್ ಸಿಕ್ಕಿದೆ. ಸಚಿವ ಜಾರ್ಜ್ ವಿರುದ್ಧ ದಾಖಲಾಗಿದ್ದ ಖಾಸಗಿ ದೂರನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ.
ಬಿಜೆಪಿ ನಾಯಕರು ದಾಖಲಿಸಿದ್ದ ಪ್ರಕರಣ ರದ್ದುಪಡಿಸಿ ನ್ಯಾ.ಎಂ.ಐ.ಅರುಣ್ ಅವರಿದ್ದ ಹೈಕೋರ್ಟ್ ಪೀಠ ಆದೇಶಿಸಿದೆ. ಆ ಮೂಲಕ ಅಧಿಕಾರಿಗಳಾದ ಗೌರವ್ ಗುಪ್ತಾ, ಮಹಾಂತೇಶ ಬೀಳಗಿ, ಹೆಚ್.ಜೆ.ರಮೇಶ್ ವಿರುದ್ಧದ ಕೇಸ್ ಕೂಡ ರದ್ದಾಗಿದೆ.
ಸ್ಮಾರ್ಟ್ ವಿದ್ಯುತ್ ಮೀಟರ್ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಇಂಧನ ಇಲಾಖೆ ವಿರುದ್ಧ ಬಿಜೆಪಿ ಸಮರ ಸಾರಿತ್ತು. ಸ್ಮಾರ್ಟ್ ಮೀಟರ್ ಖರೀದಿಯಲ್ಲಿ ಭಾರೀ ಅವ್ಯವಹಾರ ನಡೆದಿದೆ. ಇತರೆ ಕಂಪೆನಿಗಳನ್ನು ಕೈಬಿಟ್ಟು ದಾವಣಗೆರೆಯ ರಾಜಶ್ರೀ ಎಲೆಕ್ಟ್ರಿಕಲ್ಸ್ಗೆ ಗುತ್ತಿಗೆ ನೀಡಲಾಗಿದೆ. ಈ ಕಂಪೆನಿಗಾಗಿ ಇತರೆ ಕಂಪೆನಿಗಳು ಟೆಂಡರ್ನಲ್ಲಿ ಭಾಗವಹಿಸದಂತೆ ನೋಡಿಕೊಳ್ಳಲಾಗಿದೆ ಎಂದು ಬಿಜೆಪಿ ಆರೋಪಿಸಿತ್ತು.
ಬೇರೆ ರಾಜ್ಯಗಳಲ್ಲಿ 900 ರೂಪಾಯಿಗಳಿಗೆ ಸಿಗುವ ಸ್ಮಾರ್ಟ್ ಮೀಟರ್ ಅನ್ನು 5 ಸಾವಿರದಿಂದ 10 ಸಾವಿರ ರೂಪಾಯಿಗಳಿಗೆ ಗ್ರಾಹಕರಿಗೆ ನೀಡಲಾಗುತ್ತಿದೆ. ಹೀಗಾಗಿ ಇದೊಂದು ದೊಡ್ಡ ಹಗರಣ ಎಂದು ಬಿಜೆಪಿ ಆರೋಪಿಸಲಾಗಿತ್ತು.
ಸ್ಮಾರ್ಟ್ ಮೀಟರ್ ಟೆಂಡರ್ ಸುಮಾರ್ 10 ಸಾವಿರ ಕೋಟಿ ರೂಪಾಯಿ ಮೊತ್ತದ್ದಾಗಿರುವ ಕಾರಣ ಜಾಗತಿಕ ಟೆಂಡರ್ ಕರೆಯಬೇಕಿತ್ತು. ಆದರೆ ಕೇವಲ 354 ಕೋಟಿ ರೂ. ವ್ಯವಹಾರ ನಡೆಸುವ ರಾಜಶ್ರೀ ಎಲೆಕ್ಟ್ರಿಕಲ್ಸ್ಗೆ ಟೆಂಡರ್ ನೀಡಲಾಗಿದೆ. 10 ವರ್ಷಕ್ಕೆ 5296 ಕೋಟಿ ರೂಪಾಯಿಗೆ ನೀಡಲಾಗಿರುವ ಟೆಂಡರ್ ಅನ್ನು ಬೇಕೆಂದೇ 997 ಕೋಟಿ ರೂ. ಟೆಂಡರ್ ಎಂಬಂತೆ ಬಿಂಬಿಸಲಾಗಿದೆ. ಬೆಸ್ಕಾಂ ವ್ಯಾಪ್ತಿಗೆ ಮಾತ್ರ ಈ ಟೆಂಡರ್ ಅನ್ವಯವಾದರೂ ಇತರೆ ಎಸ್ಕಾಂಗಳಿಗೂ ಇದೇ ಸ್ಮಾರ್ಟ್ ಮೀಟರ್ ಖರೀದಿಸಿರುವಂತೆ ಸೂಚಿಸಲಾಗಿದೆ. ಇದು ಸಂಪೂರ್ಣ ಕಾನೂನು ಬಾಹಿರ. ಕೇಂದ್ರದ ಆರ್ಡಿಎಸ್ಎಸ್ ಯೋಜನೆಯಡಿ 900 ರೂ.ಗೆ ಸಿಗುವ ಮೀಟರ್ ಅನ್ನು 5 ಸಾವಿರದಿಂದ 8,800 ರೂಪಾಯಿಗಳಿಗೆ ಗ್ರಾಹಕರು ಖರೀದಿಸಬೇಕಾಗಿದೆ. ಇದಕ್ಕೆ ಇದಕ್ಕೆಲ್ಲಾ ಬೆಸ್ಕಾಂ ಅಧ್ಯಕ್ಷ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್ ಹಾಗೂ ಇತರೆ ಅಧಿಕಾರಿಗಳೇ ಹೊಣೆ ಎಂದು ಬಿಜೆಪಿ ಆರೋಪ ಮಾಡಿತ್ತು. ಆದರೆ, ಬಿಜೆಪಿ ನಾಯಕರು ದಾಖಲಿಸಿದ್ದ ಪ್ರಕರಣ ರದ್ದುಪಡಿಸಿ ಹೈಕೋರ್ಟ್ ಆದೇಶಿಸಿದೆ.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…