ಬಿಜೆಪಿ ಮಾಡಿದ್ದ ಸ್ಮಾರ್ಟ್ ಮೀಟರ್ ಟೆಂಡರ್ ಹಗರಣ ಆರೋಪ ವಿಚಾರವಾಗಿ ಸಚಿವ ಕೆ.ಜೆ.ಜಾರ್ಜ್ಗೆ ರಿಲೀಫ್ ಸಿಕ್ಕಿದೆ. ಸಚಿವ ಜಾರ್ಜ್ ವಿರುದ್ಧ ದಾಖಲಾಗಿದ್ದ ಖಾಸಗಿ ದೂರನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ.
ಬಿಜೆಪಿ ನಾಯಕರು ದಾಖಲಿಸಿದ್ದ ಪ್ರಕರಣ ರದ್ದುಪಡಿಸಿ ನ್ಯಾ.ಎಂ.ಐ.ಅರುಣ್ ಅವರಿದ್ದ ಹೈಕೋರ್ಟ್ ಪೀಠ ಆದೇಶಿಸಿದೆ. ಆ ಮೂಲಕ ಅಧಿಕಾರಿಗಳಾದ ಗೌರವ್ ಗುಪ್ತಾ, ಮಹಾಂತೇಶ ಬೀಳಗಿ, ಹೆಚ್.ಜೆ.ರಮೇಶ್ ವಿರುದ್ಧದ ಕೇಸ್ ಕೂಡ ರದ್ದಾಗಿದೆ.
ಸ್ಮಾರ್ಟ್ ವಿದ್ಯುತ್ ಮೀಟರ್ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಇಂಧನ ಇಲಾಖೆ ವಿರುದ್ಧ ಬಿಜೆಪಿ ಸಮರ ಸಾರಿತ್ತು. ಸ್ಮಾರ್ಟ್ ಮೀಟರ್ ಖರೀದಿಯಲ್ಲಿ ಭಾರೀ ಅವ್ಯವಹಾರ ನಡೆದಿದೆ. ಇತರೆ ಕಂಪೆನಿಗಳನ್ನು ಕೈಬಿಟ್ಟು ದಾವಣಗೆರೆಯ ರಾಜಶ್ರೀ ಎಲೆಕ್ಟ್ರಿಕಲ್ಸ್ಗೆ ಗುತ್ತಿಗೆ ನೀಡಲಾಗಿದೆ. ಈ ಕಂಪೆನಿಗಾಗಿ ಇತರೆ ಕಂಪೆನಿಗಳು ಟೆಂಡರ್ನಲ್ಲಿ ಭಾಗವಹಿಸದಂತೆ ನೋಡಿಕೊಳ್ಳಲಾಗಿದೆ ಎಂದು ಬಿಜೆಪಿ ಆರೋಪಿಸಿತ್ತು.
ಬೇರೆ ರಾಜ್ಯಗಳಲ್ಲಿ 900 ರೂಪಾಯಿಗಳಿಗೆ ಸಿಗುವ ಸ್ಮಾರ್ಟ್ ಮೀಟರ್ ಅನ್ನು 5 ಸಾವಿರದಿಂದ 10 ಸಾವಿರ ರೂಪಾಯಿಗಳಿಗೆ ಗ್ರಾಹಕರಿಗೆ ನೀಡಲಾಗುತ್ತಿದೆ. ಹೀಗಾಗಿ ಇದೊಂದು ದೊಡ್ಡ ಹಗರಣ ಎಂದು ಬಿಜೆಪಿ ಆರೋಪಿಸಲಾಗಿತ್ತು.
ಸ್ಮಾರ್ಟ್ ಮೀಟರ್ ಟೆಂಡರ್ ಸುಮಾರ್ 10 ಸಾವಿರ ಕೋಟಿ ರೂಪಾಯಿ ಮೊತ್ತದ್ದಾಗಿರುವ ಕಾರಣ ಜಾಗತಿಕ ಟೆಂಡರ್ ಕರೆಯಬೇಕಿತ್ತು. ಆದರೆ ಕೇವಲ 354 ಕೋಟಿ ರೂ. ವ್ಯವಹಾರ ನಡೆಸುವ ರಾಜಶ್ರೀ ಎಲೆಕ್ಟ್ರಿಕಲ್ಸ್ಗೆ ಟೆಂಡರ್ ನೀಡಲಾಗಿದೆ. 10 ವರ್ಷಕ್ಕೆ 5296 ಕೋಟಿ ರೂಪಾಯಿಗೆ ನೀಡಲಾಗಿರುವ ಟೆಂಡರ್ ಅನ್ನು ಬೇಕೆಂದೇ 997 ಕೋಟಿ ರೂ. ಟೆಂಡರ್ ಎಂಬಂತೆ ಬಿಂಬಿಸಲಾಗಿದೆ. ಬೆಸ್ಕಾಂ ವ್ಯಾಪ್ತಿಗೆ ಮಾತ್ರ ಈ ಟೆಂಡರ್ ಅನ್ವಯವಾದರೂ ಇತರೆ ಎಸ್ಕಾಂಗಳಿಗೂ ಇದೇ ಸ್ಮಾರ್ಟ್ ಮೀಟರ್ ಖರೀದಿಸಿರುವಂತೆ ಸೂಚಿಸಲಾಗಿದೆ. ಇದು ಸಂಪೂರ್ಣ ಕಾನೂನು ಬಾಹಿರ. ಕೇಂದ್ರದ ಆರ್ಡಿಎಸ್ಎಸ್ ಯೋಜನೆಯಡಿ 900 ರೂ.ಗೆ ಸಿಗುವ ಮೀಟರ್ ಅನ್ನು 5 ಸಾವಿರದಿಂದ 8,800 ರೂಪಾಯಿಗಳಿಗೆ ಗ್ರಾಹಕರು ಖರೀದಿಸಬೇಕಾಗಿದೆ. ಇದಕ್ಕೆ ಇದಕ್ಕೆಲ್ಲಾ ಬೆಸ್ಕಾಂ ಅಧ್ಯಕ್ಷ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್ ಹಾಗೂ ಇತರೆ ಅಧಿಕಾರಿಗಳೇ ಹೊಣೆ ಎಂದು ಬಿಜೆಪಿ ಆರೋಪ ಮಾಡಿತ್ತು. ಆದರೆ, ಬಿಜೆಪಿ ನಾಯಕರು ದಾಖಲಿಸಿದ್ದ ಪ್ರಕರಣ ರದ್ದುಪಡಿಸಿ ಹೈಕೋರ್ಟ್ ಆದೇಶಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…