ಕೋಲಾರ: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತವಾಗಿ ನಗರದಲ್ಲಿರುವ ಸೋಮೇಶ್ವರ ದೇವಾಲಯದಲ್ಲಿ ಬಿಜೆಪಿ ಯುವ ಮೋರ್ಚಾ ಗ್ರಾಮಾಂತರ ಘಟಕದ ವತಿಯಿಂದ ಬುಧವಾರ ಅನ್ನಸಂತರ್ಪಣೆ ಹಾಗೂ ಸಂಜೆ ನಾಗರಕುಂಟೆಯಲ್ಲಿ ದೀಪೋತ್ಸವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಓಂ ಶಕ್ತಿ ಚಲಪತಿ ಮಾತನಾಡಿ, ಹಿಂದುಗಳ ಪವಿತ್ರ ಹಬ್ಬವಾಗಿರುವ ಮಹಾಶಿವರಾತ್ರಿ ಪ್ರಯುಕ್ತ ಬಿಜೆಪಿ ಯುವ ಮೋರ್ಚಾ ವತಿಯಿಂದ ದೇಶಾದ್ಯಂತ ವಿಶೇಷ ಮತ್ತು ವಿಭಿನ್ನವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಅದರ ಭಾಗವಾಗಿ ನಗರದಲ್ಲಿರುವ ಶಿವನ ದೇವಾಲಯದಲ್ಲಿ ವಿಶೇಷ ಪೂಜೆ ಮಾಡಿ ರೈತರಿಗೆ ಒಳ್ಳೆಯ ಮಳೆಯಾಗಿ ಬೆಳೆ ತಂದು ಜನತೆಗೆ ನೆಮ್ಮದಿ ಪಾಲಿಸುವಂತೆ ಮಾಡಲಿ ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ತೇಜಸ್ ರಾಜ್ ಮಾತನಾಡಿ ಬಿಜೆಪಿ ಪಕ್ಷವು ಹಬ್ಬದ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು ಶಿವನ ದೇವಾಲಯಗಳಲ್ಲಿ ಪ್ರಸಾದ ವಿತರಣೆ ಅನ್ನಸಂತರ್ಪಣೆಯ ಜೊತೆಗೆ ಸುಮಾರು 10 ಸಾವಿರ ದೀಪೋತ್ಸವನ್ನು ಯುವಕ ನೇತೃತ್ವದಲ್ಲಿ ನಡೆಯಲಿದೆ ಎಂದು ವಿವರಿಸಿದರು.
ಬಿಜೆಪಿ ಯುವ ಮೋರ್ಚಾ ಗ್ರಾಮಾಂತರ ಅಧ್ಯಕ್ಷ ಅಭಿಭಾರದ್ವಾಜ್ ನಾಯ್ಡು ಮಾತನಾಡಿ ಬಿಜೆಪಿ ಪಕ್ಷದಲ್ಲಿ ಯುವಕರ ಸಹಕಾರದಿಂದ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಮುಂದೆಯೂ ಸಂಘಟನೆ ಮತ್ತ ಧಾರ್ಮಿಕ ಚಟುವಟಿಕೆಗಳಿಗೆ ಹೆಚ್ಚಿನ ಸಹಕಾರ ನೀಡಲಾಗುತ್ತದೆ ಸ್ವಚ್ಚತೆ ಪರಿಸರ ಸ್ನೇಹಿ ಚಟುವಟಿಕೆಗಳಿಗೆ ಎಲ್ಲರೂ ಸಹಕರಿಸುವಂತೆ ಮನವಿ ಮಾಡಿದರು.
ಅನ್ನಸಂತರ್ಪಣೆಯ ನಂತರ ದೇವಾಲಯಗಳ ಸುತ್ತ ಸ್ವಚ್ಚತೆ ಮಾಡಿದರು ಬಿಜೆಪಿ ಎಸ್ಸಿ ಮೋರ್ಚಾ ನಗರ ಅಧ್ಯಕ್ಷ ಆನಂದ್, ಯುವ ಮೋರ್ಚಾ ಅಧ್ಯಕ್ಷ ಬಿ.ಸಾಯಿಮೌಳಿ, ಗ್ರಾಮಾಂತರ ಪ್ರಧಾನ ಕಾರ್ಯದರ್ಶಿ ನವೀನ ಕುಮಾರ್. ಮುಂತಾದವರು ಇದ್ದರು
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…