Categories: ಕೋಲಾರ

ಬಿಜೆಪಿ ಯುವ ಮೋರ್ಚಾದಿಂದ ಸೋಮೇಶ್ವರ ದೇವಾಲಯದಲ್ಲಿ ಅನ್ನಸಂತರ್ಪಣೆ

ಕೋಲಾರ: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತವಾಗಿ ನಗರದಲ್ಲಿರುವ ಸೋಮೇಶ್ವರ ದೇವಾಲಯದಲ್ಲಿ ಬಿಜೆಪಿ ಯುವ ಮೋರ್ಚಾ ಗ್ರಾಮಾಂತರ ಘಟಕದ ವತಿಯಿಂದ ಬುಧವಾರ ಅನ್ನಸಂತರ್ಪಣೆ ಹಾಗೂ ಸಂಜೆ ನಾಗರಕುಂಟೆಯಲ್ಲಿ ದೀಪೋತ್ಸವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಓಂ ಶಕ್ತಿ ಚಲಪತಿ ಮಾತನಾಡಿ, ಹಿಂದುಗಳ ಪವಿತ್ರ ಹಬ್ಬವಾಗಿರುವ ಮಹಾಶಿವರಾತ್ರಿ ಪ್ರಯುಕ್ತ ಬಿಜೆಪಿ ಯುವ ಮೋರ್ಚಾ ವತಿಯಿಂದ ದೇಶಾದ್ಯಂತ ವಿಶೇಷ ಮತ್ತು ವಿಭಿನ್ನವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಅದರ ಭಾಗವಾಗಿ ನಗರದಲ್ಲಿರುವ ಶಿವನ ದೇವಾಲಯದಲ್ಲಿ ವಿಶೇಷ ಪೂಜೆ ಮಾಡಿ ರೈತರಿಗೆ ಒಳ್ಳೆಯ ಮಳೆಯಾಗಿ ಬೆಳೆ ತಂದು ಜನತೆಗೆ ನೆಮ್ಮದಿ ಪಾಲಿಸುವಂತೆ ಮಾಡಲಿ ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ತೇಜಸ್ ರಾಜ್ ಮಾತನಾಡಿ ಬಿಜೆಪಿ ಪಕ್ಷವು ಹಬ್ಬದ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು ಶಿವನ ದೇವಾಲಯಗಳಲ್ಲಿ ಪ್ರಸಾದ ವಿತರಣೆ ಅನ್ನಸಂತರ್ಪಣೆಯ ಜೊತೆಗೆ ಸುಮಾರು 10 ಸಾವಿರ ದೀಪೋತ್ಸವನ್ನು ಯುವಕ ನೇತೃತ್ವದಲ್ಲಿ ನಡೆಯಲಿದೆ ಎಂದು ವಿವರಿಸಿದರು.

ಬಿಜೆಪಿ ಯುವ ಮೋರ್ಚಾ ಗ್ರಾಮಾಂತರ ಅಧ್ಯಕ್ಷ ಅಭಿಭಾರದ್ವಾಜ್ ನಾಯ್ಡು ಮಾತನಾಡಿ ಬಿಜೆಪಿ ಪಕ್ಷದಲ್ಲಿ ಯುವಕರ ಸಹಕಾರದಿಂದ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಮುಂದೆಯೂ ಸಂಘಟನೆ ಮತ್ತ ಧಾರ್ಮಿಕ ಚಟುವಟಿಕೆಗಳಿಗೆ ಹೆಚ್ಚಿನ ಸಹಕಾರ ನೀಡಲಾಗುತ್ತದೆ ಸ್ವಚ್ಚತೆ ಪರಿಸರ ಸ್ನೇಹಿ ಚಟುವಟಿಕೆಗಳಿಗೆ ಎಲ್ಲರೂ ಸಹಕರಿಸುವಂತೆ ಮನವಿ ಮಾಡಿದರು.

ಅನ್ನಸಂತರ್ಪಣೆಯ ನಂತರ ದೇವಾಲಯಗಳ ಸುತ್ತ ಸ್ವಚ್ಚತೆ ಮಾಡಿದರು ಬಿಜೆಪಿ ಎಸ್ಸಿ ಮೋರ್ಚಾ ನಗರ ಅಧ್ಯಕ್ಷ ಆನಂದ್, ಯುವ ಮೋರ್ಚಾ ಅಧ್ಯಕ್ಷ ಬಿ.ಸಾಯಿಮೌಳಿ, ಗ್ರಾಮಾಂತರ ಪ್ರಧಾನ ಕಾರ್ಯದರ್ಶಿ ನವೀನ ಕುಮಾರ್. ಮುಂತಾದವರು ಇದ್ದರು

Ramesh Babu

Journalist

Recent Posts

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

3 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

8 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

1 day ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

1 day ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

2 days ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

2 days ago