ಕೋಲಾರ: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತವಾಗಿ ನಗರದಲ್ಲಿರುವ ಸೋಮೇಶ್ವರ ದೇವಾಲಯದಲ್ಲಿ ಬಿಜೆಪಿ ಯುವ ಮೋರ್ಚಾ ಗ್ರಾಮಾಂತರ ಘಟಕದ ವತಿಯಿಂದ ಬುಧವಾರ ಅನ್ನಸಂತರ್ಪಣೆ ಹಾಗೂ ಸಂಜೆ ನಾಗರಕುಂಟೆಯಲ್ಲಿ ದೀಪೋತ್ಸವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಓಂ ಶಕ್ತಿ ಚಲಪತಿ ಮಾತನಾಡಿ, ಹಿಂದುಗಳ ಪವಿತ್ರ ಹಬ್ಬವಾಗಿರುವ ಮಹಾಶಿವರಾತ್ರಿ ಪ್ರಯುಕ್ತ ಬಿಜೆಪಿ ಯುವ ಮೋರ್ಚಾ ವತಿಯಿಂದ ದೇಶಾದ್ಯಂತ ವಿಶೇಷ ಮತ್ತು ವಿಭಿನ್ನವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಅದರ ಭಾಗವಾಗಿ ನಗರದಲ್ಲಿರುವ ಶಿವನ ದೇವಾಲಯದಲ್ಲಿ ವಿಶೇಷ ಪೂಜೆ ಮಾಡಿ ರೈತರಿಗೆ ಒಳ್ಳೆಯ ಮಳೆಯಾಗಿ ಬೆಳೆ ತಂದು ಜನತೆಗೆ ನೆಮ್ಮದಿ ಪಾಲಿಸುವಂತೆ ಮಾಡಲಿ ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ತೇಜಸ್ ರಾಜ್ ಮಾತನಾಡಿ ಬಿಜೆಪಿ ಪಕ್ಷವು ಹಬ್ಬದ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು ಶಿವನ ದೇವಾಲಯಗಳಲ್ಲಿ ಪ್ರಸಾದ ವಿತರಣೆ ಅನ್ನಸಂತರ್ಪಣೆಯ ಜೊತೆಗೆ ಸುಮಾರು 10 ಸಾವಿರ ದೀಪೋತ್ಸವನ್ನು ಯುವಕ ನೇತೃತ್ವದಲ್ಲಿ ನಡೆಯಲಿದೆ ಎಂದು ವಿವರಿಸಿದರು.
ಬಿಜೆಪಿ ಯುವ ಮೋರ್ಚಾ ಗ್ರಾಮಾಂತರ ಅಧ್ಯಕ್ಷ ಅಭಿಭಾರದ್ವಾಜ್ ನಾಯ್ಡು ಮಾತನಾಡಿ ಬಿಜೆಪಿ ಪಕ್ಷದಲ್ಲಿ ಯುವಕರ ಸಹಕಾರದಿಂದ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಮುಂದೆಯೂ ಸಂಘಟನೆ ಮತ್ತ ಧಾರ್ಮಿಕ ಚಟುವಟಿಕೆಗಳಿಗೆ ಹೆಚ್ಚಿನ ಸಹಕಾರ ನೀಡಲಾಗುತ್ತದೆ ಸ್ವಚ್ಚತೆ ಪರಿಸರ ಸ್ನೇಹಿ ಚಟುವಟಿಕೆಗಳಿಗೆ ಎಲ್ಲರೂ ಸಹಕರಿಸುವಂತೆ ಮನವಿ ಮಾಡಿದರು.
ಅನ್ನಸಂತರ್ಪಣೆಯ ನಂತರ ದೇವಾಲಯಗಳ ಸುತ್ತ ಸ್ವಚ್ಚತೆ ಮಾಡಿದರು ಬಿಜೆಪಿ ಎಸ್ಸಿ ಮೋರ್ಚಾ ನಗರ ಅಧ್ಯಕ್ಷ ಆನಂದ್, ಯುವ ಮೋರ್ಚಾ ಅಧ್ಯಕ್ಷ ಬಿ.ಸಾಯಿಮೌಳಿ, ಗ್ರಾಮಾಂತರ ಪ್ರಧಾನ ಕಾರ್ಯದರ್ಶಿ ನವೀನ ಕುಮಾರ್. ಮುಂತಾದವರು ಇದ್ದರು
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…