Categories: ಕೋಲಾರ

ಬಿಜೆಪಿ ರೈತ ಪರ, ಕಾಂಗ್ರೆಸ್ ರೈತ ವಿರೋಧಿ ಸರಕಾರದ ವಿರುದ್ದ ಕೊಮ್ಮನಹಳ್ಳಿ ಆನಂದ್ ವಾಗ್ದಾಳಿ

ಕೋಲಾರ: ರಾಜ್ಯದಲ್ಲಿ ಹಿಂದೆ ಅಧಿಕಾರ ನಡೆಸಿದ ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರವು ರೈತಪರ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ರೈತರ ಹಿತ ಕಾಪಾಡಿದೆ. ಇವತ್ತಿನ ಕಾಂಗ್ರೆಸ್ ಸರಕಾರವು ರೈತ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದು ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಕೊಮ್ಮನಹಳ್ಳಿ ಆನಂದ್ ವಾಗ್ದಾಳಿ ನಡೆಸಿದರು.

ನಗರದ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಶನಿವಾರ ಬಿಜೆಪಿ ರೈತ ಮೋರ್ಚಾ ನಗರ ಘಟಕದ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರೈತ ಪರವಾದ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದರು. ಅಲ್ಲದೇ, ರೈತರ ಪ್ರತ್ಯೇಕ ಬಜೆಟ್‌ ಸಹ ಮಂಡಿಸಿದ್ದರು. ಆದರೆ ಆ ನಂತರದ ಬಂದ ಕಾಂಗ್ರೆಸ್ ಸರಕಾರವು ಹೆಜ್ಜೆ ಹೆಜ್ಜೆಗೂ ಹಗರಣಗಳಲ್ಲಿ ಭಾಗಿಯಾಗಿದ್ದಾರೆ. ರಾಜ್ಯದಲ್ಲಿ ಪ್ರಮುಖವಾಗಿ ರೈತರ ಹಿತ ಕಾಯುವಲ್ಲಿ ವಿಫಲವಾಗಿದೆ. ರೈತರು ಸಂಕಷ್ಟಕ್ಕೆ ಸಿಲುಕಲು ಕಾರಣವಾಗಿದೆ. ಆ ನಿಟ್ಟಿನಲ್ಲಿ ಬಿಜೆಪಿ ಕಾರ್ಯಕರ್ತರು ಬಿಜೆಪಿ ಸರಕಾರದ ಅಭಿವೃದ್ಧಿ ಕಾರ್ಯಕ್ರಮ ಹಾಗೂ ಜನಪರ ಯೋಜನೆಗಳನ್ನು ಜನರಿಗೆ ತಿಳಿಸುವ ಮೂಲಕ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು. ಜತೆಗೆ ಮುಂದಿನ ದಿನಗಳಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮಿಸಬೇಕು ಎಂದು ತಿಳಿಸಿದರು.

ದೇಶದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅನೇಕ ಉತ್ತಮ ಕೆಲಸಗಳನ್ನು ರೈತರ ಏಳಿಗೆಗಾಗಿ ರೂಪಿಸಿದ್ದಾರೆ. ಆದರೆ, ಕಾಂಗ್ರೆಸ್ ಸರಕಾರವು ಪ್ರತಿ ಹಂತದಲ್ಲೂ ರಾಜಕಾರಣವನ್ನು ಮಾಡತ್ತಿದೆ ಅಭಿವೃದ್ಧಿಯ ಬಗ್ಗೆ ಕಾಳಜಿಯಿಲ್ಲವಾಗಿದೆ. ವಿರೋಧ ಪಕ್ಷಗಳು ಪ್ರಶ್ನೆ ಮಾಡಿದರೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅನಗತ್ಯವಾಗಿ ಕೇಂದ್ರ ಸತಕಾರದ ಮೇಲೆ ಗೂಬೆ ಕೂರಿಸುಲು ಹೊರಟಿದ್ದಾರೆ ಎಂದು ಆರೋಪಿಸಿದರು.

ಸಭೆಯಲ್ಲಿ ರೈತ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿಜೆಪಿ ಶಿವಣ್ಣ ಮಾತನಾಡಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಹಾಲು ಉತ್ಪಾದಕರ ಖರೀದಿ ಧರ ಕಡಿಮೆ, ಗೃಹ ಜ್ಯೋತಿ ಹೆಸರಿನಲ್ಲಿ ವಿದ್ಯುತ್‌ ಧರ ಏರಿಕೆ ಸೇರಿದಂತೆ ನಿಗಮಗಳಲ್ಲಿ ದಲಿತರ ಹಣವನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ರೈತರ ಪಂಪ್ ಸೆಟ್ ಗಳ ಹೊಸ ಸಂಪರ್ಕಕ್ಕಾಗಿ 2.50 ಲಕ್ಷ ಲಂಚ ಕೊಡಬೇಕಾಗಿದೆ. ನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದಾರೆ. ಇವತ್ತು ರಾಜ್ಯದಲ್ಲಿ ಸಾಮಾನ್ಯ ಜನತೆಯ ಸರಕಾರವಾಗಿ ಕಾಂಗ್ರೆಸ್ ಉಳಿದಿಲ್ಲ ವಾಲ್ಮೀಕಿ ಮತ್ತು ಮುಡಾ ಹಗರಣದ ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಮೈಸೂರಿನ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲಾಗುತ್ತದೆ ಇದರಲ್ಲಿ ಜಿಲ್ಲೆಯಿಂದ ಹೆಚ್ಚಿನ ಕಾರ್ಯಕರ್ತರು ಭಾಗವಹಿಸಬೇಕು ಎಂದರು

ಸಭೆಯಲ್ಲಿ ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಲಕ್ಷ್ಮಣಗೌಡ, ನಾರಾಯಣಶೆಟ್ಟಿ, ನಗರ ಅಧ್ಯಕ್ಷ ನಟರಾಜ್ ಪ್ರಧಾನ ಕಾರ್ಯದರ್ಶಿ ಮಂಜುನಾಥಗೌಡ ಸೇರಿದಂತೆ ಮುಂತಾದವರು ಸಭೆಯಲ್ಲಿ ಇದ್ದರು.

Ramesh Babu

Journalist

Recent Posts

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

16 minutes ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

23 minutes ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

3 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

6 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

6 hours ago

ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಸಿಮೆಂಟ್ ಲಾರಿ; ಚಾಲಕ ಸ್ಥಳದಲ್ಲೇ ಸಾವು ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಮುಂಜಾನೆ ದುರಂತ | ರಸ್ತೆಗೆ ಚೆಲ್ಲಾಪಿಲ್ಲಿಯಾದ ಸಿಮೆಂಟ್ ಮೂಟೆಗಳು

  ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…

10 hours ago