ಬಿಜೆಪಿ ಸರ್ಕಾರದ ಹಗರಣಗಳ ಆರೋಪಗಳಿಗೆ ಮತ್ತಷ್ಟು ಬಿಗಿ ಮಾಡಲು ಹೊರಟಿರುವ ಕಾಂಗ್ರೆಸ್. ಎಸ್.ಐ.ಟಿ ರಚನೆ ಬಗ್ಗೆ ಕ್ಯಾಬಿನೇಟ್ ನಲ್ಲಿ ಮಹತ್ವದ ಚರ್ಚೆ ನಡೆಯಿತು. ಪಿಎಸ್ಐ ನೇಮಕಾತಿ ಅಕ್ರಮ, ವಿವಿಧ ನೇಮಕಾತಿ ಅಕ್ರಮಗಳ ತನಿಖೆಗೆ ಎಸ್ ಐ ಟಿ ರಚನೆ ಮಾಡಲು ಸಿಎಂಗೆ ಸಲಹೆ.
ಹಿಂದೆ ನಾವು ಹಗರಣಗಳ ಬಗ್ಗೆ ಧ್ವನಿ ಎತ್ತಿದ್ದೇವೆ, ಈಗ ತನಿಖೆ ಸೂಕ್ತವಾಗಿ ಮಾಡದಿದ್ದರೆ ಹೊಂದಾಣಿಕೆ ರಾಜಕಾರಣ ಎನ್ನುತ್ತಾರೆ. ಹೀಗಾಗಿ ತಕ್ಷಣವೇ ವಿಶೇಷ ತನಿಖಾ ತಂಡ ಮಾಡಿ ತನಿಖೆ ನಡೆಸುವಂತೆ ಕ್ಯಾಬಿನೇಟ್ ನಲ್ಲಿ ಪ್ರಸ್ತಾಪ ಮಾಡಿದ ಸಚಿವ ಪ್ರಿಯಾಂಕ ಖರ್ಗೆ ಹಾಗೂ ಸಚಿವ ಕೃಷ್ಣ ಭೈರೇಗೌಡ. ಸಚಿವರಿಬ್ಬರ ಮಾತಿಗೆ ದನಿಗೂಡಿಸಿದ ದಿನೇಶ್ ಗುಂಡೂರಾವ್.
ಮುಂದಿನ ಕ್ಯಾಬಿನೇಟ್ ನಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ. ಗಂಗಾ ಕಲ್ಯಾಣ ಯೋಜನೆ ಅಕ್ರಮ ಬಗ್ಗೆಯೂ ತನಿಖೆಗೆ ತೀರ್ಮಾನ ಮಾಡುವಂತೆ ಸಿಎಂಗೆ ಸಲಹೆ.