ಬಿಜೆಪಿ ಸುಳ್ಳು, ಕಾಂಗ್ರೆಸ್ ಸತ್ಯ- ಕಾಂಗ್ರೆಸ್ ಅಭ್ಯರ್ಥಿ ಟಿ.ವೆಂಕಟರಮಣಯ್ಯ

ಬಿಜೆಪಿಯಿಂದ ನಗರದ ಕಚೇರಿಪಾಳ್ಯ ವಾರ್ಡ್ ಗೆ ಕೊಡುಗೆ ಏನು? ಬಿಜೆಪಿ ಎಂದರೆ ಸುಳ್ಳು, ಸುಳ್ಳು ಎಂದರೆ ಬಿಜೆಪಿ ಕೇವಲ ಭರವಸೆ ಮಾತ್ರ ಕೊಡುವ ಪಕ್ಷ ಎಂದು ಕಾಂಗ್ರೆಸ್ ಅಭ್ಯರ್ಥಿ ಟಿ.ವೆಂಕಟರಮಣಯ್ಯ ‌ಲೇವಡಿ.

ಹತ್ತು ವರ್ಷದ ಹಿಂದೆ ಕಚೇರಿಪಾಳ್ಯ ಹೇಗಿತ್ತು ಈಗ ನಾನು ಅಧಿಕಾರಕ್ಕೆ ಬಂದ ಮೇಲೆ ಯಾವ ರೀತಿ ಇದೆ. ಈ ವಾರ್ಡ್ ನ ಪ್ರತಿ ಬೀದಿಗೆ ರಸ್ತೆ ಭಾಗ್ಯ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಅಭಿವೃದ್ಧಿ ಮಾಡಲಾಗಿದೆ ಎಂದರು.

ಕಳೆದ ಹತ್ತು ವರ್ಷಗಳಿಂದ ಕ್ಷೇತ್ರದಲ್ಲಿ ಶಾಂತಿ, ನೆಮ್ಮದಿ, ಅಭಿವೃದ್ಧಿ ಮುಂದುವರಿಸಿಕೊಂಡು ಬಂದಿದ್ದೇನೆ, ಬಿಜೆಪಿಯೇ ಭರವಸೆ ಬೆಳಕು‌‌ ಎಂದು ಜನರನ್ನು ಮರಳು ಮಾಡುತ್ತಿದ್ದಾರೆ. ಬಿಜೆಪಿ ಭರವಸೆ ಬೆಳಕು ಅಲ್ಲ ಅದು ಕತ್ತಲು ಎಂದು ವ್ಯಂಗ್ಯವಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಬಂದರೆ ಬಡವರಿಗೆ ದೀನ ದಲಿತರಿಗೆ, ಹಿಂದುಳಿದವರಿಗೆ ಸಮಾನ ಶಿಕ್ಷಣ, ಉದ್ಯೋಗ, ಆರೋಗ್ಯ ಸೇವೆ, ನೀಡಲಾಗುವುದು, ಬಿಜೆಪಿ ಸರ್ಕಾರ ಅಧಿಕಾರಿಕ್ಕೆ ಬಂದರೆ ಸುಳ್ಳು ಭರವಸೆ, ಬೆಲೆ ಏರಿಕೆ, ಜಿಎಸ್ ಟಿ, ಅಶಾಂತಿ, ಭ್ರಷ್ಟಾಚಾರ ಇರುತ್ತದೆ ಎಂದು ತಿಳಿಸಿದರು.

ನಂತರ ‌ಕಸಬಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ಪಿ ವೆಂಕಟೇಶ್ ಮಾತನಾಡಿ, ಬಿಜೆಪಿ‌ಯ ಎಲ್ಲಾ ಭರವಸೆ ಇದೂವರೆಗೂ ಈಡೇರಿಲ್ಲ, ಕಾಂಗ್ರೆಸ್ ಪಕ್ಷ ಕೊಟ್ಟ ಮಾತಿನಂತೆ ಭರವಸೆ ಈಡೇರಿಸುವಲ್ಲಿ ನಿರತವಾಗಿದೆ ಎಂದರು.

ಬಿಜೆಪಿ ಯೋಜನೆಯಿಂದ ಬಡತನ ನಿರ್ಮೂಲನೆ ಆಗೋದಿಲ್ಲ, ಬದಲಿಗೆ ಬಡವರು ನಿರ್ಮೂಲನೆ ಆಗುತ್ತಿದೆ. ಕೇವಲ ಆದಾನಿ, ಅಂಬಾನಿಯರನ್ನ ಬೆಳೆಸುತ್ತಿರುವ ಬಿಜೆಪಿ, ಇಡೀ ದೇಶವನ್ನು ಲೂಟಿ ಮಾಡುತ್ತಿದ್ದಾರೆ ಇದರಿಂದ ದೇಶದಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿಯ ನಡೆ ನೋಡಿ ಹಿರಿಯ, ಮೂಲ ಬಿಜೆಪಿ ನಾಯಕರು ಪಕ್ಷ ತೊರೆಯುತ್ತಿದ್ದಾರೆ, ಬುದ್ದಿವಂತ, ಕ್ಲೀನ್ ಹ್ಯಾಂಡ್ ಇರುವವರನ್ನು ಪಕ್ಷದಲ್ಲಿ ಇರಿಸಿಕೊಳ್ಳುವುದಿಲ್ಲ, ಯಾರು ಅವರ ಮಾತನ್ನು ತಲೆ ತಗ್ಗಿಸಿ ಕೇಳಿಕೊಂಡು ಇರುತ್ತಾರೋ ಅಂತಹವರನ್ನು ಪಕ್ಷದಲ್ಲಿ ಉಳಿಯುತ್ತಾರೆ ಎಂದರು.

ಬಿಜೆಪಿ ಮತ್ತು ಜೆಡಿಎಸ್‌ ತೊರೆದು ಕಾಂಗ್ರೆಸ್ ಸೇರಿದ ಕಾರ್ಯಕರ್ತರು.

ಈ ವೇಳೆ ಮಾತನಾಡಿದ ಶ್ರೀನಿವಾಸ್ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ವಿದ್ಯಾರ್ಥಿಗಳಿಗೆ, ಮಹಿಳೆಯರಿಗೆ ಮತ್ತು ಉಚಿತ 200 ಯೂನಿಟ್ ವಿದ್ಯುತ್ ಯೋಜನೆಗಳು ಜನಪರವಾಗಿದ್ದು ಆ ಕಾರಣಕ್ಕೆ ಜೆಡಿಎಸ್ ತ್ಯಜಿಸಿ ಕಾಂಗ್ರೆಸ್ ಸೇರಿದ್ದು, ಬಿಜೆಪಿಯ ಅವದಿಯಲ್ಲಿ ಎಸ್ಸಿ ಎಸ್ಟಿ ಗಳಿಗೆ ನೇಕಾರರಿಗೆ ಯಾವುದೇ ಪ್ತಯೋಜನವಾಗಲಿಲ್ಲ, ಎಲ್ಲಾ ಜನಾಂಗದ ವಿದ್ಯಾರ್ಥಿ ವೇತನಗಳನ್ನು ಕಡಿತ ಮಾಡಿದರು, ನೇಕಾರರಿಗೆ ನೀಡುವ ಮಗ್ಗಗಳ ಮೇಲೂ ಜಿಎಸ್ಟಿ ಕಟ್ಟಬೇಕು ಎಂಬ ಕಾಯ್ದೆ ತಂದು ನೇಕಾರರಿಗೂ ದ್ರೋಹ ಬಗೆದರು ಎಂದು‌ ಆರೋಪಿಸಿದರು.

ಈ ಸಂದರ್ಭದಲ್ಲಿ ನಗರಸಭಾ ಸದಸ್ಯೆ ರೂಪಿಣಿ ಮಂಜುನಾಥ್, ಮಾಜಿ ನಗರಸಭಾ ಸದಸ್ಯ ಜಿ.ಸೋಮರುದ್ರಶರ್ಮ, ನಗರ ಬ್ಲಾಕ್ ಕಾರ್ಯಾದ್ಯಕ್ಷ‌ ಅಂಜನಮೂರ್ತಿ, ಟಿ.ಮಂಜುನಾಥ್, ಕಾಂಗ್ರೆಸ್ ಮುಖಂಡರಾದ ನಾರನಹಳ್ಳಿ ಗೋವಿಂದರಾಜು, ಮುನಿರಾಜು, ಸೇವಾದಳದ ಕಾಂತರಾಜು, ಮದ್ದೂರಪ್ಪ. ರಾಮಾಂಜಿನಪ್ಪ

Ramesh Babu

Journalist

Recent Posts

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

3 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

5 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

7 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

8 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

20 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

20 hours ago