ಬಿಜೆಪಿ ಸುಳ್ಳು, ಕಾಂಗ್ರೆಸ್ ಸತ್ಯ- ಕಾಂಗ್ರೆಸ್ ಅಭ್ಯರ್ಥಿ ಟಿ.ವೆಂಕಟರಮಣಯ್ಯ

ಬಿಜೆಪಿಯಿಂದ ನಗರದ ಕಚೇರಿಪಾಳ್ಯ ವಾರ್ಡ್ ಗೆ ಕೊಡುಗೆ ಏನು? ಬಿಜೆಪಿ ಎಂದರೆ ಸುಳ್ಳು, ಸುಳ್ಳು ಎಂದರೆ ಬಿಜೆಪಿ ಕೇವಲ ಭರವಸೆ ಮಾತ್ರ ಕೊಡುವ ಪಕ್ಷ ಎಂದು ಕಾಂಗ್ರೆಸ್ ಅಭ್ಯರ್ಥಿ ಟಿ.ವೆಂಕಟರಮಣಯ್ಯ ‌ಲೇವಡಿ.

ಹತ್ತು ವರ್ಷದ ಹಿಂದೆ ಕಚೇರಿಪಾಳ್ಯ ಹೇಗಿತ್ತು ಈಗ ನಾನು ಅಧಿಕಾರಕ್ಕೆ ಬಂದ ಮೇಲೆ ಯಾವ ರೀತಿ ಇದೆ. ಈ ವಾರ್ಡ್ ನ ಪ್ರತಿ ಬೀದಿಗೆ ರಸ್ತೆ ಭಾಗ್ಯ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಅಭಿವೃದ್ಧಿ ಮಾಡಲಾಗಿದೆ ಎಂದರು.

ಕಳೆದ ಹತ್ತು ವರ್ಷಗಳಿಂದ ಕ್ಷೇತ್ರದಲ್ಲಿ ಶಾಂತಿ, ನೆಮ್ಮದಿ, ಅಭಿವೃದ್ಧಿ ಮುಂದುವರಿಸಿಕೊಂಡು ಬಂದಿದ್ದೇನೆ, ಬಿಜೆಪಿಯೇ ಭರವಸೆ ಬೆಳಕು‌‌ ಎಂದು ಜನರನ್ನು ಮರಳು ಮಾಡುತ್ತಿದ್ದಾರೆ. ಬಿಜೆಪಿ ಭರವಸೆ ಬೆಳಕು ಅಲ್ಲ ಅದು ಕತ್ತಲು ಎಂದು ವ್ಯಂಗ್ಯವಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಬಂದರೆ ಬಡವರಿಗೆ ದೀನ ದಲಿತರಿಗೆ, ಹಿಂದುಳಿದವರಿಗೆ ಸಮಾನ ಶಿಕ್ಷಣ, ಉದ್ಯೋಗ, ಆರೋಗ್ಯ ಸೇವೆ, ನೀಡಲಾಗುವುದು, ಬಿಜೆಪಿ ಸರ್ಕಾರ ಅಧಿಕಾರಿಕ್ಕೆ ಬಂದರೆ ಸುಳ್ಳು ಭರವಸೆ, ಬೆಲೆ ಏರಿಕೆ, ಜಿಎಸ್ ಟಿ, ಅಶಾಂತಿ, ಭ್ರಷ್ಟಾಚಾರ ಇರುತ್ತದೆ ಎಂದು ತಿಳಿಸಿದರು.

ನಂತರ ‌ಕಸಬಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ಪಿ ವೆಂಕಟೇಶ್ ಮಾತನಾಡಿ, ಬಿಜೆಪಿ‌ಯ ಎಲ್ಲಾ ಭರವಸೆ ಇದೂವರೆಗೂ ಈಡೇರಿಲ್ಲ, ಕಾಂಗ್ರೆಸ್ ಪಕ್ಷ ಕೊಟ್ಟ ಮಾತಿನಂತೆ ಭರವಸೆ ಈಡೇರಿಸುವಲ್ಲಿ ನಿರತವಾಗಿದೆ ಎಂದರು.

ಬಿಜೆಪಿ ಯೋಜನೆಯಿಂದ ಬಡತನ ನಿರ್ಮೂಲನೆ ಆಗೋದಿಲ್ಲ, ಬದಲಿಗೆ ಬಡವರು ನಿರ್ಮೂಲನೆ ಆಗುತ್ತಿದೆ. ಕೇವಲ ಆದಾನಿ, ಅಂಬಾನಿಯರನ್ನ ಬೆಳೆಸುತ್ತಿರುವ ಬಿಜೆಪಿ, ಇಡೀ ದೇಶವನ್ನು ಲೂಟಿ ಮಾಡುತ್ತಿದ್ದಾರೆ ಇದರಿಂದ ದೇಶದಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿಯ ನಡೆ ನೋಡಿ ಹಿರಿಯ, ಮೂಲ ಬಿಜೆಪಿ ನಾಯಕರು ಪಕ್ಷ ತೊರೆಯುತ್ತಿದ್ದಾರೆ, ಬುದ್ದಿವಂತ, ಕ್ಲೀನ್ ಹ್ಯಾಂಡ್ ಇರುವವರನ್ನು ಪಕ್ಷದಲ್ಲಿ ಇರಿಸಿಕೊಳ್ಳುವುದಿಲ್ಲ, ಯಾರು ಅವರ ಮಾತನ್ನು ತಲೆ ತಗ್ಗಿಸಿ ಕೇಳಿಕೊಂಡು ಇರುತ್ತಾರೋ ಅಂತಹವರನ್ನು ಪಕ್ಷದಲ್ಲಿ ಉಳಿಯುತ್ತಾರೆ ಎಂದರು.

ಬಿಜೆಪಿ ಮತ್ತು ಜೆಡಿಎಸ್‌ ತೊರೆದು ಕಾಂಗ್ರೆಸ್ ಸೇರಿದ ಕಾರ್ಯಕರ್ತರು.

ಈ ವೇಳೆ ಮಾತನಾಡಿದ ಶ್ರೀನಿವಾಸ್ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ವಿದ್ಯಾರ್ಥಿಗಳಿಗೆ, ಮಹಿಳೆಯರಿಗೆ ಮತ್ತು ಉಚಿತ 200 ಯೂನಿಟ್ ವಿದ್ಯುತ್ ಯೋಜನೆಗಳು ಜನಪರವಾಗಿದ್ದು ಆ ಕಾರಣಕ್ಕೆ ಜೆಡಿಎಸ್ ತ್ಯಜಿಸಿ ಕಾಂಗ್ರೆಸ್ ಸೇರಿದ್ದು, ಬಿಜೆಪಿಯ ಅವದಿಯಲ್ಲಿ ಎಸ್ಸಿ ಎಸ್ಟಿ ಗಳಿಗೆ ನೇಕಾರರಿಗೆ ಯಾವುದೇ ಪ್ತಯೋಜನವಾಗಲಿಲ್ಲ, ಎಲ್ಲಾ ಜನಾಂಗದ ವಿದ್ಯಾರ್ಥಿ ವೇತನಗಳನ್ನು ಕಡಿತ ಮಾಡಿದರು, ನೇಕಾರರಿಗೆ ನೀಡುವ ಮಗ್ಗಗಳ ಮೇಲೂ ಜಿಎಸ್ಟಿ ಕಟ್ಟಬೇಕು ಎಂಬ ಕಾಯ್ದೆ ತಂದು ನೇಕಾರರಿಗೂ ದ್ರೋಹ ಬಗೆದರು ಎಂದು‌ ಆರೋಪಿಸಿದರು.

ಈ ಸಂದರ್ಭದಲ್ಲಿ ನಗರಸಭಾ ಸದಸ್ಯೆ ರೂಪಿಣಿ ಮಂಜುನಾಥ್, ಮಾಜಿ ನಗರಸಭಾ ಸದಸ್ಯ ಜಿ.ಸೋಮರುದ್ರಶರ್ಮ, ನಗರ ಬ್ಲಾಕ್ ಕಾರ್ಯಾದ್ಯಕ್ಷ‌ ಅಂಜನಮೂರ್ತಿ, ಟಿ.ಮಂಜುನಾಥ್, ಕಾಂಗ್ರೆಸ್ ಮುಖಂಡರಾದ ನಾರನಹಳ್ಳಿ ಗೋವಿಂದರಾಜು, ಮುನಿರಾಜು, ಸೇವಾದಳದ ಕಾಂತರಾಜು, ಮದ್ದೂರಪ್ಪ. ರಾಮಾಂಜಿನಪ್ಪ

Ramesh Babu

Journalist

Recent Posts

“ರೆಕಾರ್ಡ್ ಮಾಡಲು ನೀಡಿದ ಒಪ್ಪಿಗೆಯು ಪ್ರಸಾರ ಮಾಡಲು ನೀಡಿದ ಒಪ್ಪಿಗೆಯಲ್ಲ” – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್‌ಟಾರ್ಷನ್ ಹಾಗೂ ಬ್ಲ್ಯಾಕ್‌ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…

16 hours ago

ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ನೋಂದಣಿಗೆ ಕರೆ

ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…

1 day ago

ತಮ್ಮನ ಮೇಲೆ ಅಣ್ಣನಿಂದ ಗುಂಡಿನ ದಾಳಿ..?

ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸಲು ಮ್ಯಾರಥಾನ್: ಎಸ್‌ಪಿ ಚಂದ್ರಕಾಂತ್ ಎಂ.ವಿ

ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…

1 day ago

ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…

2 days ago

ಬೈಕ್ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು; ಲಕ್ಷಾಂತರ ಮೌಲ್ಯದ 42 ದ್ವಿಚಕ್ರ ವಾಹನ ವಶ

ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…

2 days ago