ಬಿಜೆಪಿ ಸುಳ್ಳು, ಕಾಂಗ್ರೆಸ್ ಸತ್ಯ- ಕಾಂಗ್ರೆಸ್ ಅಭ್ಯರ್ಥಿ ಟಿ.ವೆಂಕಟರಮಣಯ್ಯ

ಬಿಜೆಪಿಯಿಂದ ನಗರದ ಕಚೇರಿಪಾಳ್ಯ ವಾರ್ಡ್ ಗೆ ಕೊಡುಗೆ ಏನು? ಬಿಜೆಪಿ ಎಂದರೆ ಸುಳ್ಳು, ಸುಳ್ಳು ಎಂದರೆ ಬಿಜೆಪಿ ಕೇವಲ ಭರವಸೆ ಮಾತ್ರ ಕೊಡುವ ಪಕ್ಷ ಎಂದು ಕಾಂಗ್ರೆಸ್ ಅಭ್ಯರ್ಥಿ ಟಿ.ವೆಂಕಟರಮಣಯ್ಯ ‌ಲೇವಡಿ.

ಹತ್ತು ವರ್ಷದ ಹಿಂದೆ ಕಚೇರಿಪಾಳ್ಯ ಹೇಗಿತ್ತು ಈಗ ನಾನು ಅಧಿಕಾರಕ್ಕೆ ಬಂದ ಮೇಲೆ ಯಾವ ರೀತಿ ಇದೆ. ಈ ವಾರ್ಡ್ ನ ಪ್ರತಿ ಬೀದಿಗೆ ರಸ್ತೆ ಭಾಗ್ಯ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಅಭಿವೃದ್ಧಿ ಮಾಡಲಾಗಿದೆ ಎಂದರು.

ಕಳೆದ ಹತ್ತು ವರ್ಷಗಳಿಂದ ಕ್ಷೇತ್ರದಲ್ಲಿ ಶಾಂತಿ, ನೆಮ್ಮದಿ, ಅಭಿವೃದ್ಧಿ ಮುಂದುವರಿಸಿಕೊಂಡು ಬಂದಿದ್ದೇನೆ, ಬಿಜೆಪಿಯೇ ಭರವಸೆ ಬೆಳಕು‌‌ ಎಂದು ಜನರನ್ನು ಮರಳು ಮಾಡುತ್ತಿದ್ದಾರೆ. ಬಿಜೆಪಿ ಭರವಸೆ ಬೆಳಕು ಅಲ್ಲ ಅದು ಕತ್ತಲು ಎಂದು ವ್ಯಂಗ್ಯವಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಬಂದರೆ ಬಡವರಿಗೆ ದೀನ ದಲಿತರಿಗೆ, ಹಿಂದುಳಿದವರಿಗೆ ಸಮಾನ ಶಿಕ್ಷಣ, ಉದ್ಯೋಗ, ಆರೋಗ್ಯ ಸೇವೆ, ನೀಡಲಾಗುವುದು, ಬಿಜೆಪಿ ಸರ್ಕಾರ ಅಧಿಕಾರಿಕ್ಕೆ ಬಂದರೆ ಸುಳ್ಳು ಭರವಸೆ, ಬೆಲೆ ಏರಿಕೆ, ಜಿಎಸ್ ಟಿ, ಅಶಾಂತಿ, ಭ್ರಷ್ಟಾಚಾರ ಇರುತ್ತದೆ ಎಂದು ತಿಳಿಸಿದರು.

ನಂತರ ‌ಕಸಬಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ಪಿ ವೆಂಕಟೇಶ್ ಮಾತನಾಡಿ, ಬಿಜೆಪಿ‌ಯ ಎಲ್ಲಾ ಭರವಸೆ ಇದೂವರೆಗೂ ಈಡೇರಿಲ್ಲ, ಕಾಂಗ್ರೆಸ್ ಪಕ್ಷ ಕೊಟ್ಟ ಮಾತಿನಂತೆ ಭರವಸೆ ಈಡೇರಿಸುವಲ್ಲಿ ನಿರತವಾಗಿದೆ ಎಂದರು.

ಬಿಜೆಪಿ ಯೋಜನೆಯಿಂದ ಬಡತನ ನಿರ್ಮೂಲನೆ ಆಗೋದಿಲ್ಲ, ಬದಲಿಗೆ ಬಡವರು ನಿರ್ಮೂಲನೆ ಆಗುತ್ತಿದೆ. ಕೇವಲ ಆದಾನಿ, ಅಂಬಾನಿಯರನ್ನ ಬೆಳೆಸುತ್ತಿರುವ ಬಿಜೆಪಿ, ಇಡೀ ದೇಶವನ್ನು ಲೂಟಿ ಮಾಡುತ್ತಿದ್ದಾರೆ ಇದರಿಂದ ದೇಶದಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿಯ ನಡೆ ನೋಡಿ ಹಿರಿಯ, ಮೂಲ ಬಿಜೆಪಿ ನಾಯಕರು ಪಕ್ಷ ತೊರೆಯುತ್ತಿದ್ದಾರೆ, ಬುದ್ದಿವಂತ, ಕ್ಲೀನ್ ಹ್ಯಾಂಡ್ ಇರುವವರನ್ನು ಪಕ್ಷದಲ್ಲಿ ಇರಿಸಿಕೊಳ್ಳುವುದಿಲ್ಲ, ಯಾರು ಅವರ ಮಾತನ್ನು ತಲೆ ತಗ್ಗಿಸಿ ಕೇಳಿಕೊಂಡು ಇರುತ್ತಾರೋ ಅಂತಹವರನ್ನು ಪಕ್ಷದಲ್ಲಿ ಉಳಿಯುತ್ತಾರೆ ಎಂದರು.

ಬಿಜೆಪಿ ಮತ್ತು ಜೆಡಿಎಸ್‌ ತೊರೆದು ಕಾಂಗ್ರೆಸ್ ಸೇರಿದ ಕಾರ್ಯಕರ್ತರು.

ಈ ವೇಳೆ ಮಾತನಾಡಿದ ಶ್ರೀನಿವಾಸ್ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ವಿದ್ಯಾರ್ಥಿಗಳಿಗೆ, ಮಹಿಳೆಯರಿಗೆ ಮತ್ತು ಉಚಿತ 200 ಯೂನಿಟ್ ವಿದ್ಯುತ್ ಯೋಜನೆಗಳು ಜನಪರವಾಗಿದ್ದು ಆ ಕಾರಣಕ್ಕೆ ಜೆಡಿಎಸ್ ತ್ಯಜಿಸಿ ಕಾಂಗ್ರೆಸ್ ಸೇರಿದ್ದು, ಬಿಜೆಪಿಯ ಅವದಿಯಲ್ಲಿ ಎಸ್ಸಿ ಎಸ್ಟಿ ಗಳಿಗೆ ನೇಕಾರರಿಗೆ ಯಾವುದೇ ಪ್ತಯೋಜನವಾಗಲಿಲ್ಲ, ಎಲ್ಲಾ ಜನಾಂಗದ ವಿದ್ಯಾರ್ಥಿ ವೇತನಗಳನ್ನು ಕಡಿತ ಮಾಡಿದರು, ನೇಕಾರರಿಗೆ ನೀಡುವ ಮಗ್ಗಗಳ ಮೇಲೂ ಜಿಎಸ್ಟಿ ಕಟ್ಟಬೇಕು ಎಂಬ ಕಾಯ್ದೆ ತಂದು ನೇಕಾರರಿಗೂ ದ್ರೋಹ ಬಗೆದರು ಎಂದು‌ ಆರೋಪಿಸಿದರು.

ಈ ಸಂದರ್ಭದಲ್ಲಿ ನಗರಸಭಾ ಸದಸ್ಯೆ ರೂಪಿಣಿ ಮಂಜುನಾಥ್, ಮಾಜಿ ನಗರಸಭಾ ಸದಸ್ಯ ಜಿ.ಸೋಮರುದ್ರಶರ್ಮ, ನಗರ ಬ್ಲಾಕ್ ಕಾರ್ಯಾದ್ಯಕ್ಷ‌ ಅಂಜನಮೂರ್ತಿ, ಟಿ.ಮಂಜುನಾಥ್, ಕಾಂಗ್ರೆಸ್ ಮುಖಂಡರಾದ ನಾರನಹಳ್ಳಿ ಗೋವಿಂದರಾಜು, ಮುನಿರಾಜು, ಸೇವಾದಳದ ಕಾಂತರಾಜು, ಮದ್ದೂರಪ್ಪ. ರಾಮಾಂಜಿನಪ್ಪ

Ramesh Babu

Journalist

Recent Posts

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

6 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

7 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

1 day ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

1 day ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

1 day ago