ಬಿಜೆಪಿ ಸುಳ್ಳು, ಕಾಂಗ್ರೆಸ್ ಸತ್ಯ- ಕಾಂಗ್ರೆಸ್ ಅಭ್ಯರ್ಥಿ ಟಿ.ವೆಂಕಟರಮಣಯ್ಯ

ಬಿಜೆಪಿಯಿಂದ ನಗರದ ಕಚೇರಿಪಾಳ್ಯ ವಾರ್ಡ್ ಗೆ ಕೊಡುಗೆ ಏನು? ಬಿಜೆಪಿ ಎಂದರೆ ಸುಳ್ಳು, ಸುಳ್ಳು ಎಂದರೆ ಬಿಜೆಪಿ ಕೇವಲ ಭರವಸೆ ಮಾತ್ರ ಕೊಡುವ ಪಕ್ಷ ಎಂದು ಕಾಂಗ್ರೆಸ್ ಅಭ್ಯರ್ಥಿ ಟಿ.ವೆಂಕಟರಮಣಯ್ಯ ‌ಲೇವಡಿ.

ಹತ್ತು ವರ್ಷದ ಹಿಂದೆ ಕಚೇರಿಪಾಳ್ಯ ಹೇಗಿತ್ತು ಈಗ ನಾನು ಅಧಿಕಾರಕ್ಕೆ ಬಂದ ಮೇಲೆ ಯಾವ ರೀತಿ ಇದೆ. ಈ ವಾರ್ಡ್ ನ ಪ್ರತಿ ಬೀದಿಗೆ ರಸ್ತೆ ಭಾಗ್ಯ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಅಭಿವೃದ್ಧಿ ಮಾಡಲಾಗಿದೆ ಎಂದರು.

ಕಳೆದ ಹತ್ತು ವರ್ಷಗಳಿಂದ ಕ್ಷೇತ್ರದಲ್ಲಿ ಶಾಂತಿ, ನೆಮ್ಮದಿ, ಅಭಿವೃದ್ಧಿ ಮುಂದುವರಿಸಿಕೊಂಡು ಬಂದಿದ್ದೇನೆ, ಬಿಜೆಪಿಯೇ ಭರವಸೆ ಬೆಳಕು‌‌ ಎಂದು ಜನರನ್ನು ಮರಳು ಮಾಡುತ್ತಿದ್ದಾರೆ. ಬಿಜೆಪಿ ಭರವಸೆ ಬೆಳಕು ಅಲ್ಲ ಅದು ಕತ್ತಲು ಎಂದು ವ್ಯಂಗ್ಯವಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಬಂದರೆ ಬಡವರಿಗೆ ದೀನ ದಲಿತರಿಗೆ, ಹಿಂದುಳಿದವರಿಗೆ ಸಮಾನ ಶಿಕ್ಷಣ, ಉದ್ಯೋಗ, ಆರೋಗ್ಯ ಸೇವೆ, ನೀಡಲಾಗುವುದು, ಬಿಜೆಪಿ ಸರ್ಕಾರ ಅಧಿಕಾರಿಕ್ಕೆ ಬಂದರೆ ಸುಳ್ಳು ಭರವಸೆ, ಬೆಲೆ ಏರಿಕೆ, ಜಿಎಸ್ ಟಿ, ಅಶಾಂತಿ, ಭ್ರಷ್ಟಾಚಾರ ಇರುತ್ತದೆ ಎಂದು ತಿಳಿಸಿದರು.

ನಂತರ ‌ಕಸಬಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ಪಿ ವೆಂಕಟೇಶ್ ಮಾತನಾಡಿ, ಬಿಜೆಪಿ‌ಯ ಎಲ್ಲಾ ಭರವಸೆ ಇದೂವರೆಗೂ ಈಡೇರಿಲ್ಲ, ಕಾಂಗ್ರೆಸ್ ಪಕ್ಷ ಕೊಟ್ಟ ಮಾತಿನಂತೆ ಭರವಸೆ ಈಡೇರಿಸುವಲ್ಲಿ ನಿರತವಾಗಿದೆ ಎಂದರು.

ಬಿಜೆಪಿ ಯೋಜನೆಯಿಂದ ಬಡತನ ನಿರ್ಮೂಲನೆ ಆಗೋದಿಲ್ಲ, ಬದಲಿಗೆ ಬಡವರು ನಿರ್ಮೂಲನೆ ಆಗುತ್ತಿದೆ. ಕೇವಲ ಆದಾನಿ, ಅಂಬಾನಿಯರನ್ನ ಬೆಳೆಸುತ್ತಿರುವ ಬಿಜೆಪಿ, ಇಡೀ ದೇಶವನ್ನು ಲೂಟಿ ಮಾಡುತ್ತಿದ್ದಾರೆ ಇದರಿಂದ ದೇಶದಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿಯ ನಡೆ ನೋಡಿ ಹಿರಿಯ, ಮೂಲ ಬಿಜೆಪಿ ನಾಯಕರು ಪಕ್ಷ ತೊರೆಯುತ್ತಿದ್ದಾರೆ, ಬುದ್ದಿವಂತ, ಕ್ಲೀನ್ ಹ್ಯಾಂಡ್ ಇರುವವರನ್ನು ಪಕ್ಷದಲ್ಲಿ ಇರಿಸಿಕೊಳ್ಳುವುದಿಲ್ಲ, ಯಾರು ಅವರ ಮಾತನ್ನು ತಲೆ ತಗ್ಗಿಸಿ ಕೇಳಿಕೊಂಡು ಇರುತ್ತಾರೋ ಅಂತಹವರನ್ನು ಪಕ್ಷದಲ್ಲಿ ಉಳಿಯುತ್ತಾರೆ ಎಂದರು.

ಬಿಜೆಪಿ ಮತ್ತು ಜೆಡಿಎಸ್‌ ತೊರೆದು ಕಾಂಗ್ರೆಸ್ ಸೇರಿದ ಕಾರ್ಯಕರ್ತರು.

ಈ ವೇಳೆ ಮಾತನಾಡಿದ ಶ್ರೀನಿವಾಸ್ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ವಿದ್ಯಾರ್ಥಿಗಳಿಗೆ, ಮಹಿಳೆಯರಿಗೆ ಮತ್ತು ಉಚಿತ 200 ಯೂನಿಟ್ ವಿದ್ಯುತ್ ಯೋಜನೆಗಳು ಜನಪರವಾಗಿದ್ದು ಆ ಕಾರಣಕ್ಕೆ ಜೆಡಿಎಸ್ ತ್ಯಜಿಸಿ ಕಾಂಗ್ರೆಸ್ ಸೇರಿದ್ದು, ಬಿಜೆಪಿಯ ಅವದಿಯಲ್ಲಿ ಎಸ್ಸಿ ಎಸ್ಟಿ ಗಳಿಗೆ ನೇಕಾರರಿಗೆ ಯಾವುದೇ ಪ್ತಯೋಜನವಾಗಲಿಲ್ಲ, ಎಲ್ಲಾ ಜನಾಂಗದ ವಿದ್ಯಾರ್ಥಿ ವೇತನಗಳನ್ನು ಕಡಿತ ಮಾಡಿದರು, ನೇಕಾರರಿಗೆ ನೀಡುವ ಮಗ್ಗಗಳ ಮೇಲೂ ಜಿಎಸ್ಟಿ ಕಟ್ಟಬೇಕು ಎಂಬ ಕಾಯ್ದೆ ತಂದು ನೇಕಾರರಿಗೂ ದ್ರೋಹ ಬಗೆದರು ಎಂದು‌ ಆರೋಪಿಸಿದರು.

ಈ ಸಂದರ್ಭದಲ್ಲಿ ನಗರಸಭಾ ಸದಸ್ಯೆ ರೂಪಿಣಿ ಮಂಜುನಾಥ್, ಮಾಜಿ ನಗರಸಭಾ ಸದಸ್ಯ ಜಿ.ಸೋಮರುದ್ರಶರ್ಮ, ನಗರ ಬ್ಲಾಕ್ ಕಾರ್ಯಾದ್ಯಕ್ಷ‌ ಅಂಜನಮೂರ್ತಿ, ಟಿ.ಮಂಜುನಾಥ್, ಕಾಂಗ್ರೆಸ್ ಮುಖಂಡರಾದ ನಾರನಹಳ್ಳಿ ಗೋವಿಂದರಾಜು, ಮುನಿರಾಜು, ಸೇವಾದಳದ ಕಾಂತರಾಜು, ಮದ್ದೂರಪ್ಪ. ರಾಮಾಂಜಿನಪ್ಪ

Ramesh Babu

Journalist

Recent Posts

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

2 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

3 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

7 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

17 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

18 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

22 hours ago