ಬಿಜೆಪಿ ಸುಳ್ಳು, ಕಾಂಗ್ರೆಸ್ ಸತ್ಯ- ಕಾಂಗ್ರೆಸ್ ಅಭ್ಯರ್ಥಿ ಟಿ.ವೆಂಕಟರಮಣಯ್ಯ

ಬಿಜೆಪಿಯಿಂದ ನಗರದ ಕಚೇರಿಪಾಳ್ಯ ವಾರ್ಡ್ ಗೆ ಕೊಡುಗೆ ಏನು? ಬಿಜೆಪಿ ಎಂದರೆ ಸುಳ್ಳು, ಸುಳ್ಳು ಎಂದರೆ ಬಿಜೆಪಿ ಕೇವಲ ಭರವಸೆ ಮಾತ್ರ ಕೊಡುವ ಪಕ್ಷ ಎಂದು ಕಾಂಗ್ರೆಸ್ ಅಭ್ಯರ್ಥಿ ಟಿ.ವೆಂಕಟರಮಣಯ್ಯ ‌ಲೇವಡಿ.

ಹತ್ತು ವರ್ಷದ ಹಿಂದೆ ಕಚೇರಿಪಾಳ್ಯ ಹೇಗಿತ್ತು ಈಗ ನಾನು ಅಧಿಕಾರಕ್ಕೆ ಬಂದ ಮೇಲೆ ಯಾವ ರೀತಿ ಇದೆ. ಈ ವಾರ್ಡ್ ನ ಪ್ರತಿ ಬೀದಿಗೆ ರಸ್ತೆ ಭಾಗ್ಯ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಅಭಿವೃದ್ಧಿ ಮಾಡಲಾಗಿದೆ ಎಂದರು.

ಕಳೆದ ಹತ್ತು ವರ್ಷಗಳಿಂದ ಕ್ಷೇತ್ರದಲ್ಲಿ ಶಾಂತಿ, ನೆಮ್ಮದಿ, ಅಭಿವೃದ್ಧಿ ಮುಂದುವರಿಸಿಕೊಂಡು ಬಂದಿದ್ದೇನೆ, ಬಿಜೆಪಿಯೇ ಭರವಸೆ ಬೆಳಕು‌‌ ಎಂದು ಜನರನ್ನು ಮರಳು ಮಾಡುತ್ತಿದ್ದಾರೆ. ಬಿಜೆಪಿ ಭರವಸೆ ಬೆಳಕು ಅಲ್ಲ ಅದು ಕತ್ತಲು ಎಂದು ವ್ಯಂಗ್ಯವಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಬಂದರೆ ಬಡವರಿಗೆ ದೀನ ದಲಿತರಿಗೆ, ಹಿಂದುಳಿದವರಿಗೆ ಸಮಾನ ಶಿಕ್ಷಣ, ಉದ್ಯೋಗ, ಆರೋಗ್ಯ ಸೇವೆ, ನೀಡಲಾಗುವುದು, ಬಿಜೆಪಿ ಸರ್ಕಾರ ಅಧಿಕಾರಿಕ್ಕೆ ಬಂದರೆ ಸುಳ್ಳು ಭರವಸೆ, ಬೆಲೆ ಏರಿಕೆ, ಜಿಎಸ್ ಟಿ, ಅಶಾಂತಿ, ಭ್ರಷ್ಟಾಚಾರ ಇರುತ್ತದೆ ಎಂದು ತಿಳಿಸಿದರು.

ನಂತರ ‌ಕಸಬಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ಪಿ ವೆಂಕಟೇಶ್ ಮಾತನಾಡಿ, ಬಿಜೆಪಿ‌ಯ ಎಲ್ಲಾ ಭರವಸೆ ಇದೂವರೆಗೂ ಈಡೇರಿಲ್ಲ, ಕಾಂಗ್ರೆಸ್ ಪಕ್ಷ ಕೊಟ್ಟ ಮಾತಿನಂತೆ ಭರವಸೆ ಈಡೇರಿಸುವಲ್ಲಿ ನಿರತವಾಗಿದೆ ಎಂದರು.

ಬಿಜೆಪಿ ಯೋಜನೆಯಿಂದ ಬಡತನ ನಿರ್ಮೂಲನೆ ಆಗೋದಿಲ್ಲ, ಬದಲಿಗೆ ಬಡವರು ನಿರ್ಮೂಲನೆ ಆಗುತ್ತಿದೆ. ಕೇವಲ ಆದಾನಿ, ಅಂಬಾನಿಯರನ್ನ ಬೆಳೆಸುತ್ತಿರುವ ಬಿಜೆಪಿ, ಇಡೀ ದೇಶವನ್ನು ಲೂಟಿ ಮಾಡುತ್ತಿದ್ದಾರೆ ಇದರಿಂದ ದೇಶದಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿಯ ನಡೆ ನೋಡಿ ಹಿರಿಯ, ಮೂಲ ಬಿಜೆಪಿ ನಾಯಕರು ಪಕ್ಷ ತೊರೆಯುತ್ತಿದ್ದಾರೆ, ಬುದ್ದಿವಂತ, ಕ್ಲೀನ್ ಹ್ಯಾಂಡ್ ಇರುವವರನ್ನು ಪಕ್ಷದಲ್ಲಿ ಇರಿಸಿಕೊಳ್ಳುವುದಿಲ್ಲ, ಯಾರು ಅವರ ಮಾತನ್ನು ತಲೆ ತಗ್ಗಿಸಿ ಕೇಳಿಕೊಂಡು ಇರುತ್ತಾರೋ ಅಂತಹವರನ್ನು ಪಕ್ಷದಲ್ಲಿ ಉಳಿಯುತ್ತಾರೆ ಎಂದರು.

ಬಿಜೆಪಿ ಮತ್ತು ಜೆಡಿಎಸ್‌ ತೊರೆದು ಕಾಂಗ್ರೆಸ್ ಸೇರಿದ ಕಾರ್ಯಕರ್ತರು.

ಈ ವೇಳೆ ಮಾತನಾಡಿದ ಶ್ರೀನಿವಾಸ್ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ವಿದ್ಯಾರ್ಥಿಗಳಿಗೆ, ಮಹಿಳೆಯರಿಗೆ ಮತ್ತು ಉಚಿತ 200 ಯೂನಿಟ್ ವಿದ್ಯುತ್ ಯೋಜನೆಗಳು ಜನಪರವಾಗಿದ್ದು ಆ ಕಾರಣಕ್ಕೆ ಜೆಡಿಎಸ್ ತ್ಯಜಿಸಿ ಕಾಂಗ್ರೆಸ್ ಸೇರಿದ್ದು, ಬಿಜೆಪಿಯ ಅವದಿಯಲ್ಲಿ ಎಸ್ಸಿ ಎಸ್ಟಿ ಗಳಿಗೆ ನೇಕಾರರಿಗೆ ಯಾವುದೇ ಪ್ತಯೋಜನವಾಗಲಿಲ್ಲ, ಎಲ್ಲಾ ಜನಾಂಗದ ವಿದ್ಯಾರ್ಥಿ ವೇತನಗಳನ್ನು ಕಡಿತ ಮಾಡಿದರು, ನೇಕಾರರಿಗೆ ನೀಡುವ ಮಗ್ಗಗಳ ಮೇಲೂ ಜಿಎಸ್ಟಿ ಕಟ್ಟಬೇಕು ಎಂಬ ಕಾಯ್ದೆ ತಂದು ನೇಕಾರರಿಗೂ ದ್ರೋಹ ಬಗೆದರು ಎಂದು‌ ಆರೋಪಿಸಿದರು.

ಈ ಸಂದರ್ಭದಲ್ಲಿ ನಗರಸಭಾ ಸದಸ್ಯೆ ರೂಪಿಣಿ ಮಂಜುನಾಥ್, ಮಾಜಿ ನಗರಸಭಾ ಸದಸ್ಯ ಜಿ.ಸೋಮರುದ್ರಶರ್ಮ, ನಗರ ಬ್ಲಾಕ್ ಕಾರ್ಯಾದ್ಯಕ್ಷ‌ ಅಂಜನಮೂರ್ತಿ, ಟಿ.ಮಂಜುನಾಥ್, ಕಾಂಗ್ರೆಸ್ ಮುಖಂಡರಾದ ನಾರನಹಳ್ಳಿ ಗೋವಿಂದರಾಜು, ಮುನಿರಾಜು, ಸೇವಾದಳದ ಕಾಂತರಾಜು, ಮದ್ದೂರಪ್ಪ. ರಾಮಾಂಜಿನಪ್ಪ

Ramesh Babu

Journalist

Recent Posts

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

6 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

8 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

8 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

9 hours ago

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

13 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

14 hours ago