ಬಿಜೆಪಿ ಸುಳ್ಳು, ಕಾಂಗ್ರೆಸ್ ಸತ್ಯ- ಕಾಂಗ್ರೆಸ್ ಅಭ್ಯರ್ಥಿ ಟಿ.ವೆಂಕಟರಮಣಯ್ಯ

ಬಿಜೆಪಿಯಿಂದ ನಗರದ ಕಚೇರಿಪಾಳ್ಯ ವಾರ್ಡ್ ಗೆ ಕೊಡುಗೆ ಏನು? ಬಿಜೆಪಿ ಎಂದರೆ ಸುಳ್ಳು, ಸುಳ್ಳು ಎಂದರೆ ಬಿಜೆಪಿ ಕೇವಲ ಭರವಸೆ ಮಾತ್ರ ಕೊಡುವ ಪಕ್ಷ ಎಂದು ಕಾಂಗ್ರೆಸ್ ಅಭ್ಯರ್ಥಿ ಟಿ.ವೆಂಕಟರಮಣಯ್ಯ ‌ಲೇವಡಿ.

ಹತ್ತು ವರ್ಷದ ಹಿಂದೆ ಕಚೇರಿಪಾಳ್ಯ ಹೇಗಿತ್ತು ಈಗ ನಾನು ಅಧಿಕಾರಕ್ಕೆ ಬಂದ ಮೇಲೆ ಯಾವ ರೀತಿ ಇದೆ. ಈ ವಾರ್ಡ್ ನ ಪ್ರತಿ ಬೀದಿಗೆ ರಸ್ತೆ ಭಾಗ್ಯ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಅಭಿವೃದ್ಧಿ ಮಾಡಲಾಗಿದೆ ಎಂದರು.

ಕಳೆದ ಹತ್ತು ವರ್ಷಗಳಿಂದ ಕ್ಷೇತ್ರದಲ್ಲಿ ಶಾಂತಿ, ನೆಮ್ಮದಿ, ಅಭಿವೃದ್ಧಿ ಮುಂದುವರಿಸಿಕೊಂಡು ಬಂದಿದ್ದೇನೆ, ಬಿಜೆಪಿಯೇ ಭರವಸೆ ಬೆಳಕು‌‌ ಎಂದು ಜನರನ್ನು ಮರಳು ಮಾಡುತ್ತಿದ್ದಾರೆ. ಬಿಜೆಪಿ ಭರವಸೆ ಬೆಳಕು ಅಲ್ಲ ಅದು ಕತ್ತಲು ಎಂದು ವ್ಯಂಗ್ಯವಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಬಂದರೆ ಬಡವರಿಗೆ ದೀನ ದಲಿತರಿಗೆ, ಹಿಂದುಳಿದವರಿಗೆ ಸಮಾನ ಶಿಕ್ಷಣ, ಉದ್ಯೋಗ, ಆರೋಗ್ಯ ಸೇವೆ, ನೀಡಲಾಗುವುದು, ಬಿಜೆಪಿ ಸರ್ಕಾರ ಅಧಿಕಾರಿಕ್ಕೆ ಬಂದರೆ ಸುಳ್ಳು ಭರವಸೆ, ಬೆಲೆ ಏರಿಕೆ, ಜಿಎಸ್ ಟಿ, ಅಶಾಂತಿ, ಭ್ರಷ್ಟಾಚಾರ ಇರುತ್ತದೆ ಎಂದು ತಿಳಿಸಿದರು.

ನಂತರ ‌ಕಸಬಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ಪಿ ವೆಂಕಟೇಶ್ ಮಾತನಾಡಿ, ಬಿಜೆಪಿ‌ಯ ಎಲ್ಲಾ ಭರವಸೆ ಇದೂವರೆಗೂ ಈಡೇರಿಲ್ಲ, ಕಾಂಗ್ರೆಸ್ ಪಕ್ಷ ಕೊಟ್ಟ ಮಾತಿನಂತೆ ಭರವಸೆ ಈಡೇರಿಸುವಲ್ಲಿ ನಿರತವಾಗಿದೆ ಎಂದರು.

ಬಿಜೆಪಿ ಯೋಜನೆಯಿಂದ ಬಡತನ ನಿರ್ಮೂಲನೆ ಆಗೋದಿಲ್ಲ, ಬದಲಿಗೆ ಬಡವರು ನಿರ್ಮೂಲನೆ ಆಗುತ್ತಿದೆ. ಕೇವಲ ಆದಾನಿ, ಅಂಬಾನಿಯರನ್ನ ಬೆಳೆಸುತ್ತಿರುವ ಬಿಜೆಪಿ, ಇಡೀ ದೇಶವನ್ನು ಲೂಟಿ ಮಾಡುತ್ತಿದ್ದಾರೆ ಇದರಿಂದ ದೇಶದಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿಯ ನಡೆ ನೋಡಿ ಹಿರಿಯ, ಮೂಲ ಬಿಜೆಪಿ ನಾಯಕರು ಪಕ್ಷ ತೊರೆಯುತ್ತಿದ್ದಾರೆ, ಬುದ್ದಿವಂತ, ಕ್ಲೀನ್ ಹ್ಯಾಂಡ್ ಇರುವವರನ್ನು ಪಕ್ಷದಲ್ಲಿ ಇರಿಸಿಕೊಳ್ಳುವುದಿಲ್ಲ, ಯಾರು ಅವರ ಮಾತನ್ನು ತಲೆ ತಗ್ಗಿಸಿ ಕೇಳಿಕೊಂಡು ಇರುತ್ತಾರೋ ಅಂತಹವರನ್ನು ಪಕ್ಷದಲ್ಲಿ ಉಳಿಯುತ್ತಾರೆ ಎಂದರು.

ಬಿಜೆಪಿ ಮತ್ತು ಜೆಡಿಎಸ್‌ ತೊರೆದು ಕಾಂಗ್ರೆಸ್ ಸೇರಿದ ಕಾರ್ಯಕರ್ತರು.

ಈ ವೇಳೆ ಮಾತನಾಡಿದ ಶ್ರೀನಿವಾಸ್ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ವಿದ್ಯಾರ್ಥಿಗಳಿಗೆ, ಮಹಿಳೆಯರಿಗೆ ಮತ್ತು ಉಚಿತ 200 ಯೂನಿಟ್ ವಿದ್ಯುತ್ ಯೋಜನೆಗಳು ಜನಪರವಾಗಿದ್ದು ಆ ಕಾರಣಕ್ಕೆ ಜೆಡಿಎಸ್ ತ್ಯಜಿಸಿ ಕಾಂಗ್ರೆಸ್ ಸೇರಿದ್ದು, ಬಿಜೆಪಿಯ ಅವದಿಯಲ್ಲಿ ಎಸ್ಸಿ ಎಸ್ಟಿ ಗಳಿಗೆ ನೇಕಾರರಿಗೆ ಯಾವುದೇ ಪ್ತಯೋಜನವಾಗಲಿಲ್ಲ, ಎಲ್ಲಾ ಜನಾಂಗದ ವಿದ್ಯಾರ್ಥಿ ವೇತನಗಳನ್ನು ಕಡಿತ ಮಾಡಿದರು, ನೇಕಾರರಿಗೆ ನೀಡುವ ಮಗ್ಗಗಳ ಮೇಲೂ ಜಿಎಸ್ಟಿ ಕಟ್ಟಬೇಕು ಎಂಬ ಕಾಯ್ದೆ ತಂದು ನೇಕಾರರಿಗೂ ದ್ರೋಹ ಬಗೆದರು ಎಂದು‌ ಆರೋಪಿಸಿದರು.

ಈ ಸಂದರ್ಭದಲ್ಲಿ ನಗರಸಭಾ ಸದಸ್ಯೆ ರೂಪಿಣಿ ಮಂಜುನಾಥ್, ಮಾಜಿ ನಗರಸಭಾ ಸದಸ್ಯ ಜಿ.ಸೋಮರುದ್ರಶರ್ಮ, ನಗರ ಬ್ಲಾಕ್ ಕಾರ್ಯಾದ್ಯಕ್ಷ‌ ಅಂಜನಮೂರ್ತಿ, ಟಿ.ಮಂಜುನಾಥ್, ಕಾಂಗ್ರೆಸ್ ಮುಖಂಡರಾದ ನಾರನಹಳ್ಳಿ ಗೋವಿಂದರಾಜು, ಮುನಿರಾಜು, ಸೇವಾದಳದ ಕಾಂತರಾಜು, ಮದ್ದೂರಪ್ಪ. ರಾಮಾಂಜಿನಪ್ಪ

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

8 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

11 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

23 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

1 day ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

1 day ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

1 day ago