ಬಿಜೆಪಿ ಸುಳ್ಳು, ಕಾಂಗ್ರೆಸ್ ಸತ್ಯ- ಕಾಂಗ್ರೆಸ್ ಅಭ್ಯರ್ಥಿ ಟಿ.ವೆಂಕಟರಮಣಯ್ಯ

ಬಿಜೆಪಿಯಿಂದ ನಗರದ ಕಚೇರಿಪಾಳ್ಯ ವಾರ್ಡ್ ಗೆ ಕೊಡುಗೆ ಏನು? ಬಿಜೆಪಿ ಎಂದರೆ ಸುಳ್ಳು, ಸುಳ್ಳು ಎಂದರೆ ಬಿಜೆಪಿ ಕೇವಲ ಭರವಸೆ ಮಾತ್ರ ಕೊಡುವ ಪಕ್ಷ ಎಂದು ಕಾಂಗ್ರೆಸ್ ಅಭ್ಯರ್ಥಿ ಟಿ.ವೆಂಕಟರಮಣಯ್ಯ ‌ಲೇವಡಿ.

ಹತ್ತು ವರ್ಷದ ಹಿಂದೆ ಕಚೇರಿಪಾಳ್ಯ ಹೇಗಿತ್ತು ಈಗ ನಾನು ಅಧಿಕಾರಕ್ಕೆ ಬಂದ ಮೇಲೆ ಯಾವ ರೀತಿ ಇದೆ. ಈ ವಾರ್ಡ್ ನ ಪ್ರತಿ ಬೀದಿಗೆ ರಸ್ತೆ ಭಾಗ್ಯ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಅಭಿವೃದ್ಧಿ ಮಾಡಲಾಗಿದೆ ಎಂದರು.

ಕಳೆದ ಹತ್ತು ವರ್ಷಗಳಿಂದ ಕ್ಷೇತ್ರದಲ್ಲಿ ಶಾಂತಿ, ನೆಮ್ಮದಿ, ಅಭಿವೃದ್ಧಿ ಮುಂದುವರಿಸಿಕೊಂಡು ಬಂದಿದ್ದೇನೆ, ಬಿಜೆಪಿಯೇ ಭರವಸೆ ಬೆಳಕು‌‌ ಎಂದು ಜನರನ್ನು ಮರಳು ಮಾಡುತ್ತಿದ್ದಾರೆ. ಬಿಜೆಪಿ ಭರವಸೆ ಬೆಳಕು ಅಲ್ಲ ಅದು ಕತ್ತಲು ಎಂದು ವ್ಯಂಗ್ಯವಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಬಂದರೆ ಬಡವರಿಗೆ ದೀನ ದಲಿತರಿಗೆ, ಹಿಂದುಳಿದವರಿಗೆ ಸಮಾನ ಶಿಕ್ಷಣ, ಉದ್ಯೋಗ, ಆರೋಗ್ಯ ಸೇವೆ, ನೀಡಲಾಗುವುದು, ಬಿಜೆಪಿ ಸರ್ಕಾರ ಅಧಿಕಾರಿಕ್ಕೆ ಬಂದರೆ ಸುಳ್ಳು ಭರವಸೆ, ಬೆಲೆ ಏರಿಕೆ, ಜಿಎಸ್ ಟಿ, ಅಶಾಂತಿ, ಭ್ರಷ್ಟಾಚಾರ ಇರುತ್ತದೆ ಎಂದು ತಿಳಿಸಿದರು.

ನಂತರ ‌ಕಸಬಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ಪಿ ವೆಂಕಟೇಶ್ ಮಾತನಾಡಿ, ಬಿಜೆಪಿ‌ಯ ಎಲ್ಲಾ ಭರವಸೆ ಇದೂವರೆಗೂ ಈಡೇರಿಲ್ಲ, ಕಾಂಗ್ರೆಸ್ ಪಕ್ಷ ಕೊಟ್ಟ ಮಾತಿನಂತೆ ಭರವಸೆ ಈಡೇರಿಸುವಲ್ಲಿ ನಿರತವಾಗಿದೆ ಎಂದರು.

ಬಿಜೆಪಿ ಯೋಜನೆಯಿಂದ ಬಡತನ ನಿರ್ಮೂಲನೆ ಆಗೋದಿಲ್ಲ, ಬದಲಿಗೆ ಬಡವರು ನಿರ್ಮೂಲನೆ ಆಗುತ್ತಿದೆ. ಕೇವಲ ಆದಾನಿ, ಅಂಬಾನಿಯರನ್ನ ಬೆಳೆಸುತ್ತಿರುವ ಬಿಜೆಪಿ, ಇಡೀ ದೇಶವನ್ನು ಲೂಟಿ ಮಾಡುತ್ತಿದ್ದಾರೆ ಇದರಿಂದ ದೇಶದಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿಯ ನಡೆ ನೋಡಿ ಹಿರಿಯ, ಮೂಲ ಬಿಜೆಪಿ ನಾಯಕರು ಪಕ್ಷ ತೊರೆಯುತ್ತಿದ್ದಾರೆ, ಬುದ್ದಿವಂತ, ಕ್ಲೀನ್ ಹ್ಯಾಂಡ್ ಇರುವವರನ್ನು ಪಕ್ಷದಲ್ಲಿ ಇರಿಸಿಕೊಳ್ಳುವುದಿಲ್ಲ, ಯಾರು ಅವರ ಮಾತನ್ನು ತಲೆ ತಗ್ಗಿಸಿ ಕೇಳಿಕೊಂಡು ಇರುತ್ತಾರೋ ಅಂತಹವರನ್ನು ಪಕ್ಷದಲ್ಲಿ ಉಳಿಯುತ್ತಾರೆ ಎಂದರು.

ಬಿಜೆಪಿ ಮತ್ತು ಜೆಡಿಎಸ್‌ ತೊರೆದು ಕಾಂಗ್ರೆಸ್ ಸೇರಿದ ಕಾರ್ಯಕರ್ತರು.

ಈ ವೇಳೆ ಮಾತನಾಡಿದ ಶ್ರೀನಿವಾಸ್ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ವಿದ್ಯಾರ್ಥಿಗಳಿಗೆ, ಮಹಿಳೆಯರಿಗೆ ಮತ್ತು ಉಚಿತ 200 ಯೂನಿಟ್ ವಿದ್ಯುತ್ ಯೋಜನೆಗಳು ಜನಪರವಾಗಿದ್ದು ಆ ಕಾರಣಕ್ಕೆ ಜೆಡಿಎಸ್ ತ್ಯಜಿಸಿ ಕಾಂಗ್ರೆಸ್ ಸೇರಿದ್ದು, ಬಿಜೆಪಿಯ ಅವದಿಯಲ್ಲಿ ಎಸ್ಸಿ ಎಸ್ಟಿ ಗಳಿಗೆ ನೇಕಾರರಿಗೆ ಯಾವುದೇ ಪ್ತಯೋಜನವಾಗಲಿಲ್ಲ, ಎಲ್ಲಾ ಜನಾಂಗದ ವಿದ್ಯಾರ್ಥಿ ವೇತನಗಳನ್ನು ಕಡಿತ ಮಾಡಿದರು, ನೇಕಾರರಿಗೆ ನೀಡುವ ಮಗ್ಗಗಳ ಮೇಲೂ ಜಿಎಸ್ಟಿ ಕಟ್ಟಬೇಕು ಎಂಬ ಕಾಯ್ದೆ ತಂದು ನೇಕಾರರಿಗೂ ದ್ರೋಹ ಬಗೆದರು ಎಂದು‌ ಆರೋಪಿಸಿದರು.

ಈ ಸಂದರ್ಭದಲ್ಲಿ ನಗರಸಭಾ ಸದಸ್ಯೆ ರೂಪಿಣಿ ಮಂಜುನಾಥ್, ಮಾಜಿ ನಗರಸಭಾ ಸದಸ್ಯ ಜಿ.ಸೋಮರುದ್ರಶರ್ಮ, ನಗರ ಬ್ಲಾಕ್ ಕಾರ್ಯಾದ್ಯಕ್ಷ‌ ಅಂಜನಮೂರ್ತಿ, ಟಿ.ಮಂಜುನಾಥ್, ಕಾಂಗ್ರೆಸ್ ಮುಖಂಡರಾದ ನಾರನಹಳ್ಳಿ ಗೋವಿಂದರಾಜು, ಮುನಿರಾಜು, ಸೇವಾದಳದ ಕಾಂತರಾಜು, ಮದ್ದೂರಪ್ಪ. ರಾಮಾಂಜಿನಪ್ಪ

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

8 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

3 days ago