ಬಿಜೆಪಿಯಿಂದ ನಗರದ ಕಚೇರಿಪಾಳ್ಯ ವಾರ್ಡ್ ಗೆ ಕೊಡುಗೆ ಏನು? ಬಿಜೆಪಿ ಎಂದರೆ ಸುಳ್ಳು, ಸುಳ್ಳು ಎಂದರೆ ಬಿಜೆಪಿ ಕೇವಲ ಭರವಸೆ ಮಾತ್ರ ಕೊಡುವ ಪಕ್ಷ ಎಂದು ಕಾಂಗ್ರೆಸ್ ಅಭ್ಯರ್ಥಿ ಟಿ.ವೆಂಕಟರಮಣಯ್ಯ ಲೇವಡಿ.
ಹತ್ತು ವರ್ಷದ ಹಿಂದೆ ಕಚೇರಿಪಾಳ್ಯ ಹೇಗಿತ್ತು ಈಗ ನಾನು ಅಧಿಕಾರಕ್ಕೆ ಬಂದ ಮೇಲೆ ಯಾವ ರೀತಿ ಇದೆ. ಈ ವಾರ್ಡ್ ನ ಪ್ರತಿ ಬೀದಿಗೆ ರಸ್ತೆ ಭಾಗ್ಯ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಅಭಿವೃದ್ಧಿ ಮಾಡಲಾಗಿದೆ ಎಂದರು.
ಕಳೆದ ಹತ್ತು ವರ್ಷಗಳಿಂದ ಕ್ಷೇತ್ರದಲ್ಲಿ ಶಾಂತಿ, ನೆಮ್ಮದಿ, ಅಭಿವೃದ್ಧಿ ಮುಂದುವರಿಸಿಕೊಂಡು ಬಂದಿದ್ದೇನೆ, ಬಿಜೆಪಿಯೇ ಭರವಸೆ ಬೆಳಕು ಎಂದು ಜನರನ್ನು ಮರಳು ಮಾಡುತ್ತಿದ್ದಾರೆ. ಬಿಜೆಪಿ ಭರವಸೆ ಬೆಳಕು ಅಲ್ಲ ಅದು ಕತ್ತಲು ಎಂದು ವ್ಯಂಗ್ಯವಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಬಂದರೆ ಬಡವರಿಗೆ ದೀನ ದಲಿತರಿಗೆ, ಹಿಂದುಳಿದವರಿಗೆ ಸಮಾನ ಶಿಕ್ಷಣ, ಉದ್ಯೋಗ, ಆರೋಗ್ಯ ಸೇವೆ, ನೀಡಲಾಗುವುದು, ಬಿಜೆಪಿ ಸರ್ಕಾರ ಅಧಿಕಾರಿಕ್ಕೆ ಬಂದರೆ ಸುಳ್ಳು ಭರವಸೆ, ಬೆಲೆ ಏರಿಕೆ, ಜಿಎಸ್ ಟಿ, ಅಶಾಂತಿ, ಭ್ರಷ್ಟಾಚಾರ ಇರುತ್ತದೆ ಎಂದು ತಿಳಿಸಿದರು.
ನಂತರ ಕಸಬಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ಪಿ ವೆಂಕಟೇಶ್ ಮಾತನಾಡಿ, ಬಿಜೆಪಿಯ ಎಲ್ಲಾ ಭರವಸೆ ಇದೂವರೆಗೂ ಈಡೇರಿಲ್ಲ, ಕಾಂಗ್ರೆಸ್ ಪಕ್ಷ ಕೊಟ್ಟ ಮಾತಿನಂತೆ ಭರವಸೆ ಈಡೇರಿಸುವಲ್ಲಿ ನಿರತವಾಗಿದೆ ಎಂದರು.
ಬಿಜೆಪಿ ಯೋಜನೆಯಿಂದ ಬಡತನ ನಿರ್ಮೂಲನೆ ಆಗೋದಿಲ್ಲ, ಬದಲಿಗೆ ಬಡವರು ನಿರ್ಮೂಲನೆ ಆಗುತ್ತಿದೆ. ಕೇವಲ ಆದಾನಿ, ಅಂಬಾನಿಯರನ್ನ ಬೆಳೆಸುತ್ತಿರುವ ಬಿಜೆಪಿ, ಇಡೀ ದೇಶವನ್ನು ಲೂಟಿ ಮಾಡುತ್ತಿದ್ದಾರೆ ಇದರಿಂದ ದೇಶದಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿಯ ನಡೆ ನೋಡಿ ಹಿರಿಯ, ಮೂಲ ಬಿಜೆಪಿ ನಾಯಕರು ಪಕ್ಷ ತೊರೆಯುತ್ತಿದ್ದಾರೆ, ಬುದ್ದಿವಂತ, ಕ್ಲೀನ್ ಹ್ಯಾಂಡ್ ಇರುವವರನ್ನು ಪಕ್ಷದಲ್ಲಿ ಇರಿಸಿಕೊಳ್ಳುವುದಿಲ್ಲ, ಯಾರು ಅವರ ಮಾತನ್ನು ತಲೆ ತಗ್ಗಿಸಿ ಕೇಳಿಕೊಂಡು ಇರುತ್ತಾರೋ ಅಂತಹವರನ್ನು ಪಕ್ಷದಲ್ಲಿ ಉಳಿಯುತ್ತಾರೆ ಎಂದರು.
ಬಿಜೆಪಿ ಮತ್ತು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಕಾರ್ಯಕರ್ತರು.
ಈ ವೇಳೆ ಮಾತನಾಡಿದ ಶ್ರೀನಿವಾಸ್ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ವಿದ್ಯಾರ್ಥಿಗಳಿಗೆ, ಮಹಿಳೆಯರಿಗೆ ಮತ್ತು ಉಚಿತ 200 ಯೂನಿಟ್ ವಿದ್ಯುತ್ ಯೋಜನೆಗಳು ಜನಪರವಾಗಿದ್ದು ಆ ಕಾರಣಕ್ಕೆ ಜೆಡಿಎಸ್ ತ್ಯಜಿಸಿ ಕಾಂಗ್ರೆಸ್ ಸೇರಿದ್ದು, ಬಿಜೆಪಿಯ ಅವದಿಯಲ್ಲಿ ಎಸ್ಸಿ ಎಸ್ಟಿ ಗಳಿಗೆ ನೇಕಾರರಿಗೆ ಯಾವುದೇ ಪ್ತಯೋಜನವಾಗಲಿಲ್ಲ, ಎಲ್ಲಾ ಜನಾಂಗದ ವಿದ್ಯಾರ್ಥಿ ವೇತನಗಳನ್ನು ಕಡಿತ ಮಾಡಿದರು, ನೇಕಾರರಿಗೆ ನೀಡುವ ಮಗ್ಗಗಳ ಮೇಲೂ ಜಿಎಸ್ಟಿ ಕಟ್ಟಬೇಕು ಎಂಬ ಕಾಯ್ದೆ ತಂದು ನೇಕಾರರಿಗೂ ದ್ರೋಹ ಬಗೆದರು ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ನಗರಸಭಾ ಸದಸ್ಯೆ ರೂಪಿಣಿ ಮಂಜುನಾಥ್, ಮಾಜಿ ನಗರಸಭಾ ಸದಸ್ಯ ಜಿ.ಸೋಮರುದ್ರಶರ್ಮ, ನಗರ ಬ್ಲಾಕ್ ಕಾರ್ಯಾದ್ಯಕ್ಷ ಅಂಜನಮೂರ್ತಿ, ಟಿ.ಮಂಜುನಾಥ್, ಕಾಂಗ್ರೆಸ್ ಮುಖಂಡರಾದ ನಾರನಹಳ್ಳಿ ಗೋವಿಂದರಾಜು, ಮುನಿರಾಜು, ಸೇವಾದಳದ ಕಾಂತರಾಜು, ಮದ್ದೂರಪ್ಪ. ರಾಮಾಂಜಿನಪ್ಪ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…