ಬಿಜೆಪಿಯ 18 ಶಾಸಕರ ಅಮಾನತು ವಾಪಸ್ ಪಡೆಯಲಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ನೇತೃತ್ವದಲ್ಲಿ ನಡೆದ ಸಂಧಾನ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಹನಿಟ್ರ್ಯಾಪ್ ಮತ್ತು ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ವಿಚಾರವಾಗಿ ವಿಧಾನಸಭೆಯಲ್ಲಿ ಚರ್ಚೆ ವೇಳೆ ಭಾರೀ ಗಲಾಟೆ ನಡೆದಿತ್ತು. ಆ ವೇಳೆ ಬಿಜೆಪಿ ಶಾಸಕರು ಸ್ಪೀಕರ್ ಯು.ಟಿ ಖಾದರ್ ಅವರ ಮೇಲೆ ಪೇಪರ್ ತೂರಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಮೂಲಕ ಪೀಠಕ್ಕೆ ಅಗೌರವ ತೋರಿದ ಆರೋಪದ ಮೇಲೆ ಬಿಜೆಪಿಯ 18 ಶಾಸಕರನ್ನು 6 ತಿಂಗಳು ಕಾಲ ಅಮಾನತು ಮಾಡಿ ಖಾದರ್ ಆದೇಶಿಸಿದ್ದರು. ಆದರೆ, ಇದೀಗ ಶಾಸಕ ಅಮಾನತು ಆದೇಶವನ್ನು ಹಿಂಪಡೆಯಲು ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.
ಬಿಜೆಪಿ ಶಾಸಕರ ಅಮಾನತು ಸಂಬಂಧ ಚರ್ಚಿಸಲು ವಿಧಾನಸಭೆ ಅಧ್ಯಕ್ಷರಾದ ಯು.ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಾನೂನು ಸಚಿವ ಎಚ್.ಕೆ. ಪಾಟೀಲ್, ಪ್ರತಿಪಕ್ಷ ನಾಯಕ ಆರ್.ಅಶೋಕ್, ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಹಾಜರಿದ್ದರು.
ಅಮಾನತು ಆಗಿದ್ದವರು ಯಾರು?
ಶಾಸಕರಾದ ದೊಡ್ಡನಗೌಡ ಪಾಟೀಲ್, ಡಾ. ಅಶ್ವಥ್ ನಾರಾಯಣ, ಬೈರತಿ ಬಸವರಾಜ, ಡಾ. ಶೈಲೇಂದ್ರ ಬೆಲ್ದಾಳೆ, ಮುನಿರತ್ನ, ಧೀರಜ್ ಮುನಿರಾಜು, ಬಿ.ಪಿ. ಹರೀಶ್, ಡಾ. ಭರತ್ ಶೆಟ್ಟಿ, ಚಂದ್ರು ಲಮಾಣಿ, ಉಮಾನಾಥ ಕೋಟ್ಯಾನ್, ಸಿ.ಕೆ. ರಾಮಮೂರ್ತಿ, ಯಶಪಾಲ್ ಸುವರ್ಣ, ಬಿ. ಸುರೇಶ್ ಗೌಡ, ಶರಣು ಸಲಗಾರ್, ಚನ್ನಬಸಪ್ಪ, ಬಸವರಾಜ ಮತ್ತಿಮೂಡ, ಎಸ್. ಆರ್. ವಿಶ್ವನಾಥ್, ಎಂ.ಆರ್. ಪಾಟೀಲ್ ಅವರನ್ನು ವಿಧಾನಸಭೆ ಕಲಾಪದಿಂದ ಆರು ತಿಂಗಳುಗಳ ಕಾಲ ಅಮಾನತು ಮಾಡಿ ಸ್ಪೀಕರ್ ಯುಟಿ ಖಾದರ್ ರೂಲಿಂಗ್ ಹೊರಡಿಸಿದ್ದರು.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…