Categories: ರಾಜ್ಯ

ಬಿಡಿಎ ಅಧ್ಯಕ್ಷರಾಗಿ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ನೇಮಕ: ಬಿಡಿಎ ಮೇಲೆ ಕಣ್ಣಿಟ್ಟಿದ್ದ ರಾಜಕಾರಣಿಗಳಿಗೆ ನಿರಾಸೆ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಐಎಎಸ್​ ಅಧಿಕಾರಿ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬಿಡಿಎ ಅಧ್ಯಕ್ಷ ಸ್ಥಾನಕ್ಕೆ ರಾಜಕಾರಣಿಗಳ ಪೈಪೋಟಿ ಹಿನ್ನೆಲೆಯಲ್ಲಿ ಐಎಎಸ್​ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಕಾಂಗ್ರೆಸ್ ಶಾಸಕರಾದ ಟಿ.ಬಿ.ಜಯಚಂದ್ರ, ಎನ್.ಎ ಹ್ಯಾರಿಸ್, ಎಂ.ಕೃಷ್ಣಪ್ಪ, ಪ್ರಿಯಾಕೃಷ್ಣ ಸೇರಿದಂತೆ ಹಲವರು ತೀವ್ರ ಲಾಬಿ ನಡೆಸಿದ್ದರು.

ಈ ಹಿನ್ನೆಲೆಯಲ್ಲಿ ಸರ್ಕಾರ ರಾಜಕಾರಣಿಗಳಿಗೆ ಮಣೆಹಾಕದೆ ಬಿಡಿಎ ಅಧ್ಯಕ್ಷ ಹುದ್ದೆಗೆ IAS ಅಧಿಕಾರಿ ರಾಕೇಶ್ ಸಿಂಗ್ ಅವರನ್ನು ನೇಮಿಸಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್​​ನ ಕೆಲ ಶಾಸಕರಿಗೆ ಭಾರೀ ನಿರಾಸೆಯಾಗಿದೆ.

ಬಿಡಿಎ ಸೇರಿದಂತೆ ರಾಮನಗರ ಹಾಗೂ ಗ್ರಾಮಾಂತರ ಮತ್ತು ಕರ್ನಾಟಕದ ಒಟ್ಟು 10 ಯೋಜನಾ ಪ್ರಾಧಿಕಾರಗಳ ಅಧ್ಯಕ್ಷರಾಗಿ ರಾಖೇಶ್ ಸಿಂಗ್ ಅವರನ್ನು ನೇಮಕ ಮಾಡಿದ್ದು, ಇದು ಅಚ್ಚರಿಕೆ ಕಾರಣವಾಗಿದೆ.

ಸಹಜವಾಗಿ ಬಿಡಿಎ ಹಾಗೂ ಇತರೆ ಯೋಜನಾ ಪ್ರಾಧಿಕಾರ ಅಧ್ಯಕ್ಷರ ಹುದ್ದೆಗೆ ಆಡಳಿತ ಪಕ್ಷದ ನಾಯಕರನ್ನು ನೇಮಕ ಮಾಡುವುದು ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ಆದರೆ, ಇದೀಗ ಅಚ್ಚರಿ ಎಂಬಂತೆ ಸರ್ಕಾರ ಪಕ್ಷದ ನಾಯಕರನ್ನು ಬಿಟ್ಟು ಐಎಎಸ್​ ಅಧಿಕಾರಿಯನ್ನು ನೇಮಕ ಮಾಡಿ ಅಚ್ಚರಿ ಮೂಡಿಸಿದೆ.

Ramesh Babu

Journalist

Recent Posts

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

6 hours ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

7 hours ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

10 hours ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…

10 hours ago

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

19 hours ago