ಬಿಡಿಸಿಸಿ ಬ್ಯಾಂಕ್ ನಲ್ಲಿ ಕುರಿ, ಮೇಕೆ, ಹಸುಗಳಿಗೆ ಸಾಲ ನೀಡುತ್ತಿದ್ದೇವೆ. ರೈತರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಚುಂಚೇಗೌಡ ಹೇಳಿದರು.
ದೊಡ್ಡಬಳ್ಳಾಪುರ ತಾಲೂಕು ತೂಬಗೆರೆ ಹೋಬಳಿಯ ಹಾಡೋನಹಳ್ಳಿ ಗ್ರಾಮದಲ್ಲಿ ವಿವಿದ್ದೋದ್ದೇಶ ಪ್ರಾರ್ಥಮಿಕ ಸಹಕಾರ ಸಂಘದ ವಾರ್ಷಿಕ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಸಂಘದ ಎಲ್ಲಾ ರೈತರಿಗೂ ಸಾಲ ಸೌಲಭ್ಯ ಇದೆ. ಎಲ್ಲರೂ ಸಾಲವನ್ನು ತೆಗೆದುಕೊಂಡು ಸಕಾಲಕ್ಕೆ ತಿರುಗಿಸಿ ಸಂಘವನ್ನು ಬೆಳೆಸಬೇಕಾಗಿದೆ. ಈ ಸಂಘಕ್ಕೆ ಮೂರು ಲಕ್ಷ ಲಾಭ ಬಂದಿದ್ದು, ಸಂಘವನ್ನು ಇನ್ನು ಚೆನ್ನಾಗಿ ಬೆಳೆಸಬೇಕು ಎಂದು ಹೇಳಿದರು.
ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ರಂಗಪ್ಪ ಮಾತನಾಡಿ, ಸಂಘ ಪ್ರಾರಂಭ ಆದಾಗಿನಿಂದ ಅಚ್ಚುಕಟ್ಟಾಗಿ ಬೆಳೆದುಕೊಂಡು ಬಂದಿದೆ. ಅದರಲ್ಲಿ ರೈತರ ಪಾಲು ಹೆಚ್ಚಾಗಿದೆಮ ಅಧ್ಯಕ್ಷರಾಗಲಿ, ಸದಸ್ಯರಾಗಲಿ, ಉಪಾಧ್ಯಕ್ಷರಾಗಲಿ ಸಂಘದಲ್ಲಿ ಉತ್ತಮವಾದ ಕೆಲಸ ಮಾಡಿಕೊಂಡು ಸಂಘವನ್ನು ಉನ್ನತಕ್ಕೆ ಬೆಳೆಸುತ್ತಿದ್ದಾರೆ ಎಂದು ಹೇಳಿದರು.
ಸಂಘದ ಮಾಜಿ ಅಧ್ಯಕ್ಷ ಶ್ರೀಧರ್ ಮಾತನಾಡಿ, ಸಂಘ ಪ್ರಾರಂಭವಾಗಿ ಮೂರು ವರ್ಷಗಳಲ್ಲಿ ಸಂಘವನ್ನು ಅಭಿವೃದ್ಧಿಪಡಿಸಿದ್ದೇವೆ, ಸಂಘಕ್ಕೆ ಮೂರು ಲಕ್ಷ ಲಾಭ ಬಂದಿದ್ದು, ಮುಂದಿನ ವರ್ಷ ಇನ್ನೂ ಲಾಭ ಬರುವ ನಿರೀಕ್ಷೆ ಇದೆ. ಸಂಘಕ್ಕೆ ಸ್ವಂತ ಕಟ್ಟಡ ಬೇಕಾಗಿರುವುದರಿಂದ ನಮಗೆ ಸ್ವಂತ ಕಟ್ಟಡ ಬೇಕೆಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಲ್ಲಿ ಮನವಿ ಮಾಡಿದ್ದೇವೆ, ಆದಷ್ಟು ಬೇಗ ಕಟ್ಟಡ ಆಗುತ್ತದೆ ಎಂಬ ನಿರೀಕ್ಷೆ ಇದೆ ಎಂದು ಹೇಳಿದರು.
2024-25 ನೇ ಜಮ ಖರ್ಚ ವೆಚ್ಚವನ್ನು ವಾರ್ಷಿಕ ಸಭೆಯಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಂಜಯ್ ಮಂಡಿಸಿದರು.
ಈ ವೇಳೆ ಸಂಘದ ಅಧ್ಯಕ್ಷ ನಂಜೇಗೌಡ, ಮೇಳೆಕೋಟೆ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಚಿದಾನಂದ, ವಿವಿದ್ದೋದ್ದೇಶ ಪ್ರಾರ್ಥಮಿಕ ಸಹಕಾರ ಸಂಘದ ಉಪಾಧ್ಯಕ್ಷ ಅನುಸೂಯ ಶೆಟ್ಟಪ್ಪ, ಮಾಜಿ ಅಧ್ಯಕ್ಷ ಮುನೇಗೌಡ, ಸಂಘದ ನಿರ್ದೇಶಕ ವಿಜಯಕುಮಾರ್, ಪಿಳ್ಳಪ್ಪ ಹನುಮಂತರಾಯಪ್ಪ, ಮುನಿರಾಜು, ರಾಮ ನಾಯ್ಕ್, ಲೋಕನಾಥ್, ಗಂಗಲಕ್ಷ್ಮಮ್ಮ ಮನಿರಾಜು ಹಾಗು ಕಾಂಗ್ರೆಸ್ ಮುಖಂಡರಾದ ಸವಿತಾ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…
ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…