ಬಿಡಿಸಿಸಿ ಬ್ಯಾಂಕ್ ನಲ್ಲಿ ಕುರಿ, ಮೇಕೆ, ಹಸುಗಳಿಗೆ ಸಾಲ- ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಚುಂಚೇಗೌಡ

ಬಿಡಿಸಿಸಿ ಬ್ಯಾಂಕ್ ನಲ್ಲಿ ಕುರಿ, ಮೇಕೆ, ಹಸುಗಳಿಗೆ ಸಾಲ ನೀಡುತ್ತಿದ್ದೇವೆ. ರೈತರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಚುಂಚೇಗೌಡ ಹೇಳಿದರು.

ದೊಡ್ಡಬಳ್ಳಾಪುರ ತಾಲೂಕು ತೂಬಗೆರೆ ಹೋಬಳಿಯ ಹಾಡೋನಹಳ್ಳಿ ಗ್ರಾಮದಲ್ಲಿ ವಿವಿದ್ದೋದ್ದೇಶ ಪ್ರಾರ್ಥಮಿಕ ಸಹಕಾರ ಸಂಘದ ವಾರ್ಷಿಕ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸಂಘದ ಎಲ್ಲಾ ರೈತರಿಗೂ ಸಾಲ ಸೌಲಭ್ಯ ಇದೆ. ಎಲ್ಲರೂ ಸಾಲವನ್ನು ತೆಗೆದುಕೊಂಡು ಸಕಾಲಕ್ಕೆ ತಿರುಗಿಸಿ ಸಂಘವನ್ನು ಬೆಳೆಸಬೇಕಾಗಿದೆ. ಈ ಸಂಘಕ್ಕೆ ಮೂರು ಲಕ್ಷ ಲಾಭ ಬಂದಿದ್ದು, ಸಂಘವನ್ನು ಇನ್ನು ಚೆನ್ನಾಗಿ ಬೆಳೆಸಬೇಕು ಎಂದು ಹೇಳಿದರು.

ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ರಂಗಪ್ಪ ಮಾತನಾಡಿ, ಸಂಘ ಪ್ರಾರಂಭ ಆದಾಗಿನಿಂದ ಅಚ್ಚುಕಟ್ಟಾಗಿ ಬೆಳೆದುಕೊಂಡು ಬಂದಿದೆ. ಅದರಲ್ಲಿ ರೈತರ ಪಾಲು ಹೆಚ್ಚಾಗಿದೆಮ ಅಧ್ಯಕ್ಷರಾಗಲಿ, ಸದಸ್ಯರಾಗಲಿ, ಉಪಾಧ್ಯಕ್ಷರಾಗಲಿ ಸಂಘದಲ್ಲಿ ಉತ್ತಮವಾದ ಕೆಲಸ ಮಾಡಿಕೊಂಡು ಸಂಘವನ್ನು ಉನ್ನತಕ್ಕೆ ಬೆಳೆಸುತ್ತಿದ್ದಾರೆ ಎಂದು ಹೇಳಿದರು.

ಸಂಘದ ಮಾಜಿ ಅಧ್ಯಕ್ಷ ಶ್ರೀಧರ್ ಮಾತನಾಡಿ, ಸಂಘ ಪ್ರಾರಂಭವಾಗಿ ಮೂರು ವರ್ಷಗಳಲ್ಲಿ ಸಂಘವನ್ನು ಅಭಿವೃದ್ಧಿಪಡಿಸಿದ್ದೇವೆ, ಸಂಘಕ್ಕೆ ಮೂರು ಲಕ್ಷ ಲಾಭ ಬಂದಿದ್ದು, ಮುಂದಿನ ವರ್ಷ ಇನ್ನೂ ಲಾಭ ಬರುವ ನಿರೀಕ್ಷೆ ಇದೆ. ಸಂಘಕ್ಕೆ ಸ್ವಂತ ಕಟ್ಟಡ ಬೇಕಾಗಿರುವುದರಿಂದ ನಮಗೆ ಸ್ವಂತ ಕಟ್ಟಡ ಬೇಕೆಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಲ್ಲಿ ಮನವಿ ಮಾಡಿದ್ದೇವೆ, ಆದಷ್ಟು ಬೇಗ ಕಟ್ಟಡ ಆಗುತ್ತದೆ ಎಂಬ ನಿರೀಕ್ಷೆ ಇದೆ ಎಂದು ಹೇಳಿದರು.

2024-25 ನೇ ಜಮ ಖರ್ಚ ವೆಚ್ಚವನ್ನು ವಾರ್ಷಿಕ ಸಭೆಯಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ  ಸಂಜಯ್ ಮಂಡಿಸಿದರು.

ಈ ವೇಳೆ ಸಂಘದ ಅಧ್ಯಕ್ಷ ನಂಜೇಗೌಡ, ಮೇಳೆಕೋಟೆ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಚಿದಾನಂದ, ವಿವಿದ್ದೋದ್ದೇಶ ಪ್ರಾರ್ಥಮಿಕ ಸಹಕಾರ ಸಂಘದ ಉಪಾಧ್ಯಕ್ಷ ಅನುಸೂಯ ಶೆಟ್ಟಪ್ಪ, ಮಾಜಿ ಅಧ್ಯಕ್ಷ ಮುನೇಗೌಡ, ಸಂಘದ ನಿರ್ದೇಶಕ ವಿಜಯಕುಮಾರ್, ಪಿಳ್ಳಪ್ಪ ಹನುಮಂತರಾಯಪ್ಪ, ಮುನಿರಾಜು, ರಾಮ ನಾಯ್ಕ್, ಲೋಕನಾಥ್, ಗಂಗಲಕ್ಷ್ಮಮ್ಮ ಮನಿರಾಜು ಹಾಗು ಕಾಂಗ್ರೆಸ್ ಮುಖಂಡರಾದ ಸವಿತಾ ಸೇರಿದಂತೆ‌ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

1 hour ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

22 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 day ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago