ಬಿಡಿಸಿಸಿ ಬ್ಯಾಂಕ್ ನಲ್ಲಿ ಕುರಿ, ಮೇಕೆ, ಹಸುಗಳಿಗೆ ಸಾಲ- ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಚುಂಚೇಗೌಡ

ಬಿಡಿಸಿಸಿ ಬ್ಯಾಂಕ್ ನಲ್ಲಿ ಕುರಿ, ಮೇಕೆ, ಹಸುಗಳಿಗೆ ಸಾಲ ನೀಡುತ್ತಿದ್ದೇವೆ. ರೈತರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಚುಂಚೇಗೌಡ ಹೇಳಿದರು.

ದೊಡ್ಡಬಳ್ಳಾಪುರ ತಾಲೂಕು ತೂಬಗೆರೆ ಹೋಬಳಿಯ ಹಾಡೋನಹಳ್ಳಿ ಗ್ರಾಮದಲ್ಲಿ ವಿವಿದ್ದೋದ್ದೇಶ ಪ್ರಾರ್ಥಮಿಕ ಸಹಕಾರ ಸಂಘದ ವಾರ್ಷಿಕ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸಂಘದ ಎಲ್ಲಾ ರೈತರಿಗೂ ಸಾಲ ಸೌಲಭ್ಯ ಇದೆ. ಎಲ್ಲರೂ ಸಾಲವನ್ನು ತೆಗೆದುಕೊಂಡು ಸಕಾಲಕ್ಕೆ ತಿರುಗಿಸಿ ಸಂಘವನ್ನು ಬೆಳೆಸಬೇಕಾಗಿದೆ. ಈ ಸಂಘಕ್ಕೆ ಮೂರು ಲಕ್ಷ ಲಾಭ ಬಂದಿದ್ದು, ಸಂಘವನ್ನು ಇನ್ನು ಚೆನ್ನಾಗಿ ಬೆಳೆಸಬೇಕು ಎಂದು ಹೇಳಿದರು.

ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ರಂಗಪ್ಪ ಮಾತನಾಡಿ, ಸಂಘ ಪ್ರಾರಂಭ ಆದಾಗಿನಿಂದ ಅಚ್ಚುಕಟ್ಟಾಗಿ ಬೆಳೆದುಕೊಂಡು ಬಂದಿದೆ. ಅದರಲ್ಲಿ ರೈತರ ಪಾಲು ಹೆಚ್ಚಾಗಿದೆಮ ಅಧ್ಯಕ್ಷರಾಗಲಿ, ಸದಸ್ಯರಾಗಲಿ, ಉಪಾಧ್ಯಕ್ಷರಾಗಲಿ ಸಂಘದಲ್ಲಿ ಉತ್ತಮವಾದ ಕೆಲಸ ಮಾಡಿಕೊಂಡು ಸಂಘವನ್ನು ಉನ್ನತಕ್ಕೆ ಬೆಳೆಸುತ್ತಿದ್ದಾರೆ ಎಂದು ಹೇಳಿದರು.

ಸಂಘದ ಮಾಜಿ ಅಧ್ಯಕ್ಷ ಶ್ರೀಧರ್ ಮಾತನಾಡಿ, ಸಂಘ ಪ್ರಾರಂಭವಾಗಿ ಮೂರು ವರ್ಷಗಳಲ್ಲಿ ಸಂಘವನ್ನು ಅಭಿವೃದ್ಧಿಪಡಿಸಿದ್ದೇವೆ, ಸಂಘಕ್ಕೆ ಮೂರು ಲಕ್ಷ ಲಾಭ ಬಂದಿದ್ದು, ಮುಂದಿನ ವರ್ಷ ಇನ್ನೂ ಲಾಭ ಬರುವ ನಿರೀಕ್ಷೆ ಇದೆ. ಸಂಘಕ್ಕೆ ಸ್ವಂತ ಕಟ್ಟಡ ಬೇಕಾಗಿರುವುದರಿಂದ ನಮಗೆ ಸ್ವಂತ ಕಟ್ಟಡ ಬೇಕೆಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಲ್ಲಿ ಮನವಿ ಮಾಡಿದ್ದೇವೆ, ಆದಷ್ಟು ಬೇಗ ಕಟ್ಟಡ ಆಗುತ್ತದೆ ಎಂಬ ನಿರೀಕ್ಷೆ ಇದೆ ಎಂದು ಹೇಳಿದರು.

2024-25 ನೇ ಜಮ ಖರ್ಚ ವೆಚ್ಚವನ್ನು ವಾರ್ಷಿಕ ಸಭೆಯಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ  ಸಂಜಯ್ ಮಂಡಿಸಿದರು.

ಈ ವೇಳೆ ಸಂಘದ ಅಧ್ಯಕ್ಷ ನಂಜೇಗೌಡ, ಮೇಳೆಕೋಟೆ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಚಿದಾನಂದ, ವಿವಿದ್ದೋದ್ದೇಶ ಪ್ರಾರ್ಥಮಿಕ ಸಹಕಾರ ಸಂಘದ ಉಪಾಧ್ಯಕ್ಷ ಅನುಸೂಯ ಶೆಟ್ಟಪ್ಪ, ಮಾಜಿ ಅಧ್ಯಕ್ಷ ಮುನೇಗೌಡ, ಸಂಘದ ನಿರ್ದೇಶಕ ವಿಜಯಕುಮಾರ್, ಪಿಳ್ಳಪ್ಪ ಹನುಮಂತರಾಯಪ್ಪ, ಮುನಿರಾಜು, ರಾಮ ನಾಯ್ಕ್, ಲೋಕನಾಥ್, ಗಂಗಲಕ್ಷ್ಮಮ್ಮ ಮನಿರಾಜು ಹಾಗು ಕಾಂಗ್ರೆಸ್ ಮುಖಂಡರಾದ ಸವಿತಾ ಸೇರಿದಂತೆ‌ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

15 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

18 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

1 day ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

1 day ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

1 day ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

1 day ago