Categories: ಕೋಲಾರ

ಬಿತ್ತನೆ ಬೀಜ, ರಸಗೊಬ್ಬರ ಬೆಲೆ ಇಳಿಕೆಗೆ ಒತ್ತಾಯಿಸಿ ಪ್ರಾಂತ ರೈತ ಸಂಘ ಪ್ರತಿಭಟನೆ

ಕೋಲಾರ: ರಾಜ್ಯಾದ್ಯಂತ ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಬಿತ್ತನೆ ಬೀಜ, ರಸಗೊಬ್ಬರ ಬೆಲೆಯನ್ನು ಇಳಿಸಿ ನಕಲಿ ಕಳಪೆ ವಸ್ತುಗಳ ಮಾರಾಟ ಜಾಲವನ್ನು ತಡೆಗಟ್ಟುವಂತೆ ಒತ್ತಾಯಿಸಿ ಕೆ.ಪಿ.ಆರ್.ಎಸ್ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಶುಕ್ರವಾರ ಕೃಷಿ ಇಲಾಖೆ ಮುಂದೆ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ, ಈ ಶತಮಾನದಲ್ಲೇ ಕಂಡರಿಯದ ಭೀಕರ ಬರಗಾಲವನ್ನು ಈ ವರ್ಷ ರಾಜ್ಯ ಅನುಭವಿಸಿದೆ. ಯಾವುದೇ ಅರ್ಥ ಪೂರ್ಣವಾದ ಬರಪರಿಹಾರದ ಕ್ರಮಗಳಿಲ್ಲದೇ ದೊಡ್ಡ ಪ್ರಮಾಣದ ಸಂಕಷ್ಟಕ್ಕೆ ಸಿಲುಕಿ ನರಳುತ್ತಿರುವ ರೈತಾಪಿ ಸಮುದಾಯವನ್ನು ಬಿತ್ತನೆ ಬೀಜ, ರಸಗೊಬ್ಬರ ಬೆಲೆಗಳ ಏರಿಕೆಯು ಗಾಯದ ಮೇಲೆ ಬರೆ ಎಳೆದಂತಾಗಿದೆ. ಈ ಕೂಡಲೇ ಬೆಲೆಗಳನ್ನು ಇಳಿಸಬೇಕು. ಉತ್ತಮ ಮಳೆಯ ನಿರೀಕ್ಷೆಯಲ್ಲಿ ಕೃಷಿ ಚಟುವಟಿಕೆಗಳನ್ನು ನಡೆಸುವ ರೈತರನ್ನು ಬೀಜ ಗೊಬ್ಬರಗಳ ವ್ಯಾಪಾರಿಗಳು ಶೋಷಣೆ ಮಾಡದಂತೆ ಕ್ರಮ ವಹಿಸಬೇಕು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದರು.

ರಾಜ್ಯ ಸೇರಿದಂತೆ ಜಿಲ್ಲೆಯಾದ್ಯಂತ ರಸಗೊಬ್ಬರಗಳ ಕೃತಕ ಅಭಾವ ಸೃಷ್ಟಿಸಿ, ಕಾಳಸಂತೆಯಲ್ಲಿನ ಮಾರಾಟವನ್ನು ತಡೆಗಟ್ಟಬೇಕು, ಬಲವಂತದ ಸಾಲ ವಸೂಲಾತಿ ವಿರುದ್ಧ ರೈತರಿಗೆ ರಕ್ಷಣೆ ಒದಗಿಸಬೇಕು. ರಾಜ್ಯಾದ್ಯಂತ ನಡೆಯುತ್ತಿರುವ ವ್ಯಾಪಕ ರೈತರ ಆತ್ಮಹತ್ಯೆಗಳನ್ನು ತಡೆಗಟ್ಟಲು ಅಗತ್ಯ ಕ್ರಮ ವಹಿಸಬೇಕು ಸಾಲಕ್ಕೆ ಬರ ಪರಿಹಾರದ ಹಣ ಕಳೆದುಕೊಂಡಿರುವ ರೈತರ ಖಾತೆಗೆ ಹಣ ಮರಳಿಸಲು ಕ್ರಮ ಕೈಗೊಳ್ಳಬೇಕು. ಕೃಷಿ ಚಟುವಟಿಕೆಗಳು ಪ್ರಾರಂಭವಾಗಿದ್ದು, ಕೃಷಿಗೆ ಸಂಬಂಧಿಸಿದ ಅಗತ್ಯ ಬೆಂಬಲವನ್ನು ಒದಗಿಸಬೇಕು ಬೆಳೆ ವಿಮೆ ಪರಿಹಾರ ಇತ್ಯರ್ಥಕ್ಕೆ ಕ್ರಮ ವಹಿಸಬೇಕು ಎಂದು ಮನವಿ ಮಾಡಿದರು.

ರೈತರಿಗೆ ತುಂಬಾ ಅನುಕೂಲವಾಗಿರುವ ಬ್ಯಾಟರಿ ಸ್ಪೈಯರ್ ಗಳನ್ನು ಸಬ್ಸಿಡಿ ದರದಲ್ಲಿ ನೀಡುವುದು ಮುಂದುವರಿಸಬೇಕು. ಹನಿ ನೀರಾವರಿ ಸಾಮಗ್ರಿಗಳನ್ನು ಸಹಾಯ ಧನ ಅಡಿಯಲ್ಲಿ ಏಳು ವರ್ಷಕ್ಕೊಮ್ಮೆ ಎಸ್ ಸಿ ಎಸ್ ಟಿ ಜನಾಂಗಕ್ಕೆ ನೀಡುತ್ತಿದ್ದು, ಅದನ್ನು ಸಾಮಾನ್ಯ ರೈತರಿಗೂ ವಿಸ್ತರಿಸಬೇಕು. ಕೃಷಿಭಾಗ್ಯ ಯೋಜನೆಯಲ್ಲಿ ಕೃಷಿಹೊಂಡ ನಿರ್ಮಾಣಗಳನ್ನು ಮಾಡಿದ್ದು ,ಅದರ ಟಾರ್ಪಲ್ಲುಗಳು ಶೀಥಲಗೊಂಡಿದ್ದು ಕನಿಷ್ಠ 3 ವರ್ಷಕ್ಕೊಮ್ಮೆ ಹೊಸದಾಗಿ ಸಬ್ಸಿಡಿ ದರದಲ್ಲಿ ಟಾರ್ಪಲ್ ಗಳನ್ನು ನೀಡಬೇಕು. ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿರುವುದರಿಂದ ರೈತರು ತಮ್ಮ ಜಮೀನುಗಳಿಗೆ ಸೋಲರ್ ತಂತಿಯನ್ನು ಅಳವಡಿಸಲು ಸರ್ಕಾರ ಸಹಾಯ ಧನ ನೀಡಬೇಕು. ಬರ ಪರಿಹಾರದ ಹಣ ಕೆಲವೇ ರೈತರಿಗೆ ಮಾತ್ರ ಸಿಕ್ಕಿದ್ದು ಅದು ಎಲ್ಲ ರೈತರಿಗೂ ಸಿಗುವ ರೀತಿ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಈ ಪ್ರತಿಭಟನೆಯ ನೇತೃತ್ವವನ್ನು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಾತಕೋಟ ನವೀನ್ ಕುಮಾರ್, ಉಪಾಧ್ಯಕ್ಷರಾದ ಅಲಹಳ್ಳಿ ವೆಂಕಟೇಶಪ್ಪ, ಎನ್.ಎನ್ ಶ್ರೀರಾಮ್, ಗಂಗಮ್ಮ, ಕೆ.ವೆಂಕಟಪ್ಪ, ಮುಖಂಡರಾದ ಎಂ.ಎಸ್ ನಾಗರಾಜ್, ವೆಂಕಟಲಕ್ಷ್ಮಮ್ಮ, ನಾರಾಯಣಸ್ವಾಮಿ, ನಾರಾಯಣಪ್ಪ, ಚಿನ್ನಮ್ಮ, ಹರೀಶ್, ರಾಮಪ್ಪ,ಬಿ.ಸಿ. ರಾಮರೆಡ್ಡಿ, ಮಂಜುಳಾ, ಮುನಿರತ್ನಮ್ಮ ಮುಂತಾದವರಿದ್ದರು

Ramesh Babu

Journalist

Recent Posts

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

6 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

6 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

10 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

12 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

15 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

19 hours ago