Categories: ಕೋಲಾರ

ಬಿತ್ತನೆ ಬೀಜ, ರಸಗೊಬ್ಬರ ಬೆಲೆ ಇಳಿಕೆಗೆ ಒತ್ತಾಯಿಸಿ ಪ್ರಾಂತ ರೈತ ಸಂಘ ಪ್ರತಿಭಟನೆ

ಕೋಲಾರ: ರಾಜ್ಯಾದ್ಯಂತ ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಬಿತ್ತನೆ ಬೀಜ, ರಸಗೊಬ್ಬರ ಬೆಲೆಯನ್ನು ಇಳಿಸಿ ನಕಲಿ ಕಳಪೆ ವಸ್ತುಗಳ ಮಾರಾಟ ಜಾಲವನ್ನು ತಡೆಗಟ್ಟುವಂತೆ ಒತ್ತಾಯಿಸಿ ಕೆ.ಪಿ.ಆರ್.ಎಸ್ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಶುಕ್ರವಾರ ಕೃಷಿ ಇಲಾಖೆ ಮುಂದೆ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ, ಈ ಶತಮಾನದಲ್ಲೇ ಕಂಡರಿಯದ ಭೀಕರ ಬರಗಾಲವನ್ನು ಈ ವರ್ಷ ರಾಜ್ಯ ಅನುಭವಿಸಿದೆ. ಯಾವುದೇ ಅರ್ಥ ಪೂರ್ಣವಾದ ಬರಪರಿಹಾರದ ಕ್ರಮಗಳಿಲ್ಲದೇ ದೊಡ್ಡ ಪ್ರಮಾಣದ ಸಂಕಷ್ಟಕ್ಕೆ ಸಿಲುಕಿ ನರಳುತ್ತಿರುವ ರೈತಾಪಿ ಸಮುದಾಯವನ್ನು ಬಿತ್ತನೆ ಬೀಜ, ರಸಗೊಬ್ಬರ ಬೆಲೆಗಳ ಏರಿಕೆಯು ಗಾಯದ ಮೇಲೆ ಬರೆ ಎಳೆದಂತಾಗಿದೆ. ಈ ಕೂಡಲೇ ಬೆಲೆಗಳನ್ನು ಇಳಿಸಬೇಕು. ಉತ್ತಮ ಮಳೆಯ ನಿರೀಕ್ಷೆಯಲ್ಲಿ ಕೃಷಿ ಚಟುವಟಿಕೆಗಳನ್ನು ನಡೆಸುವ ರೈತರನ್ನು ಬೀಜ ಗೊಬ್ಬರಗಳ ವ್ಯಾಪಾರಿಗಳು ಶೋಷಣೆ ಮಾಡದಂತೆ ಕ್ರಮ ವಹಿಸಬೇಕು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದರು.

ರಾಜ್ಯ ಸೇರಿದಂತೆ ಜಿಲ್ಲೆಯಾದ್ಯಂತ ರಸಗೊಬ್ಬರಗಳ ಕೃತಕ ಅಭಾವ ಸೃಷ್ಟಿಸಿ, ಕಾಳಸಂತೆಯಲ್ಲಿನ ಮಾರಾಟವನ್ನು ತಡೆಗಟ್ಟಬೇಕು, ಬಲವಂತದ ಸಾಲ ವಸೂಲಾತಿ ವಿರುದ್ಧ ರೈತರಿಗೆ ರಕ್ಷಣೆ ಒದಗಿಸಬೇಕು. ರಾಜ್ಯಾದ್ಯಂತ ನಡೆಯುತ್ತಿರುವ ವ್ಯಾಪಕ ರೈತರ ಆತ್ಮಹತ್ಯೆಗಳನ್ನು ತಡೆಗಟ್ಟಲು ಅಗತ್ಯ ಕ್ರಮ ವಹಿಸಬೇಕು ಸಾಲಕ್ಕೆ ಬರ ಪರಿಹಾರದ ಹಣ ಕಳೆದುಕೊಂಡಿರುವ ರೈತರ ಖಾತೆಗೆ ಹಣ ಮರಳಿಸಲು ಕ್ರಮ ಕೈಗೊಳ್ಳಬೇಕು. ಕೃಷಿ ಚಟುವಟಿಕೆಗಳು ಪ್ರಾರಂಭವಾಗಿದ್ದು, ಕೃಷಿಗೆ ಸಂಬಂಧಿಸಿದ ಅಗತ್ಯ ಬೆಂಬಲವನ್ನು ಒದಗಿಸಬೇಕು ಬೆಳೆ ವಿಮೆ ಪರಿಹಾರ ಇತ್ಯರ್ಥಕ್ಕೆ ಕ್ರಮ ವಹಿಸಬೇಕು ಎಂದು ಮನವಿ ಮಾಡಿದರು.

ರೈತರಿಗೆ ತುಂಬಾ ಅನುಕೂಲವಾಗಿರುವ ಬ್ಯಾಟರಿ ಸ್ಪೈಯರ್ ಗಳನ್ನು ಸಬ್ಸಿಡಿ ದರದಲ್ಲಿ ನೀಡುವುದು ಮುಂದುವರಿಸಬೇಕು. ಹನಿ ನೀರಾವರಿ ಸಾಮಗ್ರಿಗಳನ್ನು ಸಹಾಯ ಧನ ಅಡಿಯಲ್ಲಿ ಏಳು ವರ್ಷಕ್ಕೊಮ್ಮೆ ಎಸ್ ಸಿ ಎಸ್ ಟಿ ಜನಾಂಗಕ್ಕೆ ನೀಡುತ್ತಿದ್ದು, ಅದನ್ನು ಸಾಮಾನ್ಯ ರೈತರಿಗೂ ವಿಸ್ತರಿಸಬೇಕು. ಕೃಷಿಭಾಗ್ಯ ಯೋಜನೆಯಲ್ಲಿ ಕೃಷಿಹೊಂಡ ನಿರ್ಮಾಣಗಳನ್ನು ಮಾಡಿದ್ದು ,ಅದರ ಟಾರ್ಪಲ್ಲುಗಳು ಶೀಥಲಗೊಂಡಿದ್ದು ಕನಿಷ್ಠ 3 ವರ್ಷಕ್ಕೊಮ್ಮೆ ಹೊಸದಾಗಿ ಸಬ್ಸಿಡಿ ದರದಲ್ಲಿ ಟಾರ್ಪಲ್ ಗಳನ್ನು ನೀಡಬೇಕು. ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿರುವುದರಿಂದ ರೈತರು ತಮ್ಮ ಜಮೀನುಗಳಿಗೆ ಸೋಲರ್ ತಂತಿಯನ್ನು ಅಳವಡಿಸಲು ಸರ್ಕಾರ ಸಹಾಯ ಧನ ನೀಡಬೇಕು. ಬರ ಪರಿಹಾರದ ಹಣ ಕೆಲವೇ ರೈತರಿಗೆ ಮಾತ್ರ ಸಿಕ್ಕಿದ್ದು ಅದು ಎಲ್ಲ ರೈತರಿಗೂ ಸಿಗುವ ರೀತಿ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಈ ಪ್ರತಿಭಟನೆಯ ನೇತೃತ್ವವನ್ನು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಾತಕೋಟ ನವೀನ್ ಕುಮಾರ್, ಉಪಾಧ್ಯಕ್ಷರಾದ ಅಲಹಳ್ಳಿ ವೆಂಕಟೇಶಪ್ಪ, ಎನ್.ಎನ್ ಶ್ರೀರಾಮ್, ಗಂಗಮ್ಮ, ಕೆ.ವೆಂಕಟಪ್ಪ, ಮುಖಂಡರಾದ ಎಂ.ಎಸ್ ನಾಗರಾಜ್, ವೆಂಕಟಲಕ್ಷ್ಮಮ್ಮ, ನಾರಾಯಣಸ್ವಾಮಿ, ನಾರಾಯಣಪ್ಪ, ಚಿನ್ನಮ್ಮ, ಹರೀಶ್, ರಾಮಪ್ಪ,ಬಿ.ಸಿ. ರಾಮರೆಡ್ಡಿ, ಮಂಜುಳಾ, ಮುನಿರತ್ನಮ್ಮ ಮುಂತಾದವರಿದ್ದರು

Ramesh Babu

Journalist

Recent Posts

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

13 hours ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

13 hours ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

1 day ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

1 day ago

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…

1 day ago

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

1 day ago