Categories: ಕೋಲಾರ

ಬಿತ್ತನೆ ಬೀಜ, ರಸಗೊಬ್ಬರ ಬೆಲೆ ಇಳಿಕೆಗೆ ಒತ್ತಾಯಿಸಿ ಪ್ರಾಂತ ರೈತ ಸಂಘ ಪ್ರತಿಭಟನೆ

ಕೋಲಾರ: ರಾಜ್ಯಾದ್ಯಂತ ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಬಿತ್ತನೆ ಬೀಜ, ರಸಗೊಬ್ಬರ ಬೆಲೆಯನ್ನು ಇಳಿಸಿ ನಕಲಿ ಕಳಪೆ ವಸ್ತುಗಳ ಮಾರಾಟ ಜಾಲವನ್ನು ತಡೆಗಟ್ಟುವಂತೆ ಒತ್ತಾಯಿಸಿ ಕೆ.ಪಿ.ಆರ್.ಎಸ್ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಶುಕ್ರವಾರ ಕೃಷಿ ಇಲಾಖೆ ಮುಂದೆ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ, ಈ ಶತಮಾನದಲ್ಲೇ ಕಂಡರಿಯದ ಭೀಕರ ಬರಗಾಲವನ್ನು ಈ ವರ್ಷ ರಾಜ್ಯ ಅನುಭವಿಸಿದೆ. ಯಾವುದೇ ಅರ್ಥ ಪೂರ್ಣವಾದ ಬರಪರಿಹಾರದ ಕ್ರಮಗಳಿಲ್ಲದೇ ದೊಡ್ಡ ಪ್ರಮಾಣದ ಸಂಕಷ್ಟಕ್ಕೆ ಸಿಲುಕಿ ನರಳುತ್ತಿರುವ ರೈತಾಪಿ ಸಮುದಾಯವನ್ನು ಬಿತ್ತನೆ ಬೀಜ, ರಸಗೊಬ್ಬರ ಬೆಲೆಗಳ ಏರಿಕೆಯು ಗಾಯದ ಮೇಲೆ ಬರೆ ಎಳೆದಂತಾಗಿದೆ. ಈ ಕೂಡಲೇ ಬೆಲೆಗಳನ್ನು ಇಳಿಸಬೇಕು. ಉತ್ತಮ ಮಳೆಯ ನಿರೀಕ್ಷೆಯಲ್ಲಿ ಕೃಷಿ ಚಟುವಟಿಕೆಗಳನ್ನು ನಡೆಸುವ ರೈತರನ್ನು ಬೀಜ ಗೊಬ್ಬರಗಳ ವ್ಯಾಪಾರಿಗಳು ಶೋಷಣೆ ಮಾಡದಂತೆ ಕ್ರಮ ವಹಿಸಬೇಕು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದರು.

ರಾಜ್ಯ ಸೇರಿದಂತೆ ಜಿಲ್ಲೆಯಾದ್ಯಂತ ರಸಗೊಬ್ಬರಗಳ ಕೃತಕ ಅಭಾವ ಸೃಷ್ಟಿಸಿ, ಕಾಳಸಂತೆಯಲ್ಲಿನ ಮಾರಾಟವನ್ನು ತಡೆಗಟ್ಟಬೇಕು, ಬಲವಂತದ ಸಾಲ ವಸೂಲಾತಿ ವಿರುದ್ಧ ರೈತರಿಗೆ ರಕ್ಷಣೆ ಒದಗಿಸಬೇಕು. ರಾಜ್ಯಾದ್ಯಂತ ನಡೆಯುತ್ತಿರುವ ವ್ಯಾಪಕ ರೈತರ ಆತ್ಮಹತ್ಯೆಗಳನ್ನು ತಡೆಗಟ್ಟಲು ಅಗತ್ಯ ಕ್ರಮ ವಹಿಸಬೇಕು ಸಾಲಕ್ಕೆ ಬರ ಪರಿಹಾರದ ಹಣ ಕಳೆದುಕೊಂಡಿರುವ ರೈತರ ಖಾತೆಗೆ ಹಣ ಮರಳಿಸಲು ಕ್ರಮ ಕೈಗೊಳ್ಳಬೇಕು. ಕೃಷಿ ಚಟುವಟಿಕೆಗಳು ಪ್ರಾರಂಭವಾಗಿದ್ದು, ಕೃಷಿಗೆ ಸಂಬಂಧಿಸಿದ ಅಗತ್ಯ ಬೆಂಬಲವನ್ನು ಒದಗಿಸಬೇಕು ಬೆಳೆ ವಿಮೆ ಪರಿಹಾರ ಇತ್ಯರ್ಥಕ್ಕೆ ಕ್ರಮ ವಹಿಸಬೇಕು ಎಂದು ಮನವಿ ಮಾಡಿದರು.

ರೈತರಿಗೆ ತುಂಬಾ ಅನುಕೂಲವಾಗಿರುವ ಬ್ಯಾಟರಿ ಸ್ಪೈಯರ್ ಗಳನ್ನು ಸಬ್ಸಿಡಿ ದರದಲ್ಲಿ ನೀಡುವುದು ಮುಂದುವರಿಸಬೇಕು. ಹನಿ ನೀರಾವರಿ ಸಾಮಗ್ರಿಗಳನ್ನು ಸಹಾಯ ಧನ ಅಡಿಯಲ್ಲಿ ಏಳು ವರ್ಷಕ್ಕೊಮ್ಮೆ ಎಸ್ ಸಿ ಎಸ್ ಟಿ ಜನಾಂಗಕ್ಕೆ ನೀಡುತ್ತಿದ್ದು, ಅದನ್ನು ಸಾಮಾನ್ಯ ರೈತರಿಗೂ ವಿಸ್ತರಿಸಬೇಕು. ಕೃಷಿಭಾಗ್ಯ ಯೋಜನೆಯಲ್ಲಿ ಕೃಷಿಹೊಂಡ ನಿರ್ಮಾಣಗಳನ್ನು ಮಾಡಿದ್ದು ,ಅದರ ಟಾರ್ಪಲ್ಲುಗಳು ಶೀಥಲಗೊಂಡಿದ್ದು ಕನಿಷ್ಠ 3 ವರ್ಷಕ್ಕೊಮ್ಮೆ ಹೊಸದಾಗಿ ಸಬ್ಸಿಡಿ ದರದಲ್ಲಿ ಟಾರ್ಪಲ್ ಗಳನ್ನು ನೀಡಬೇಕು. ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿರುವುದರಿಂದ ರೈತರು ತಮ್ಮ ಜಮೀನುಗಳಿಗೆ ಸೋಲರ್ ತಂತಿಯನ್ನು ಅಳವಡಿಸಲು ಸರ್ಕಾರ ಸಹಾಯ ಧನ ನೀಡಬೇಕು. ಬರ ಪರಿಹಾರದ ಹಣ ಕೆಲವೇ ರೈತರಿಗೆ ಮಾತ್ರ ಸಿಕ್ಕಿದ್ದು ಅದು ಎಲ್ಲ ರೈತರಿಗೂ ಸಿಗುವ ರೀತಿ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಈ ಪ್ರತಿಭಟನೆಯ ನೇತೃತ್ವವನ್ನು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಾತಕೋಟ ನವೀನ್ ಕುಮಾರ್, ಉಪಾಧ್ಯಕ್ಷರಾದ ಅಲಹಳ್ಳಿ ವೆಂಕಟೇಶಪ್ಪ, ಎನ್.ಎನ್ ಶ್ರೀರಾಮ್, ಗಂಗಮ್ಮ, ಕೆ.ವೆಂಕಟಪ್ಪ, ಮುಖಂಡರಾದ ಎಂ.ಎಸ್ ನಾಗರಾಜ್, ವೆಂಕಟಲಕ್ಷ್ಮಮ್ಮ, ನಾರಾಯಣಸ್ವಾಮಿ, ನಾರಾಯಣಪ್ಪ, ಚಿನ್ನಮ್ಮ, ಹರೀಶ್, ರಾಮಪ್ಪ,ಬಿ.ಸಿ. ರಾಮರೆಡ್ಡಿ, ಮಂಜುಳಾ, ಮುನಿರತ್ನಮ್ಮ ಮುಂತಾದವರಿದ್ದರು

Ramesh Babu

Journalist

Recent Posts

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

1 hour ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

17 hours ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

2 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

2 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

3 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

4 days ago