ಬಿಬಿಎಂಪಿ ಕಸದ ಲಾರಿಗೆ ಮತ್ತೆರೆಡು ಬಲಿ; ಘಟನಾ ಸ್ಥಳಕ್ಕೆ ಶಾಸಕ ಭೇಟಿ

ಬಿಬಿಎಂಪಿ ಕಸದ ಲಾರಿ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು-ದಾಬಸ್ಪೇಟೆ ಹೆದ್ದಾರಿಯ ಹುಲಿಕುಂಟೆ ಗ್ರಾಮದ ಬಳಿ ಘಟನೆ ನಡೆದಿದೆ. ಮರಳುಕುಂಟೆ ಗ್ರಾಮದ ಯುವಕರಾದ ಮಾರುತಿ (28), ಮಹೇಶ್(30) ಘಟನೆಯಲ್ಲಿ ಸಾವನ್ನಪ್ಪಿದ್ದಾರೆ.

ತಾಲೂಕಿನ ಚಿಗರೇನಹಳ್ಳಿ ಬಳಿಯಿರುವ ಬಿಬಿಎಂಪಿ ಕಸದ ಡಂಪ್ ಯಾರ್ಡ್ ಎಂಎಸ್ ಜಿಪಿ ಘಟಕಕ್ಕೆ ಕಸವನ್ನು ಡಂಪ್ ಮಾಡಿ ವಾಪಸ್ ಹೋಗುತ್ತಿದ್ದ ಲಾರಿ ಮತ್ತು ಬೈಕ್ ಮಧ್ಯೆ ಅಪಘಾತ ಸಂಭವಿಸಿದೆ. ಮಧುರೆಯಲ್ಲಿ ಶನಿಮಹಾತ್ಮ ಸ್ವಾಮಿಯ ದರ್ಶನ ಮುಗಿಸಿ ಮುಡಿಕೊಟ್ಟ ಯುವಕರು ವಾಪಸ್ ಸ್ವಗ್ರಾಮಕ್ಕೆ ಬರುವಾಗ ದುರ್ಘಟನೆ ನಡೆದಿದೆ.

ಸ್ಥಳಕ್ಕೆ ಶಾಸಕ ವೆಂಕಟರಮಣಯ್ಯ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ತಿಳಿಸಿದರು. ಬಿಬಿಎಂಪಿ ಕಸದ ಘಟಕವನ್ನು ಮುಚ್ಚುವಂತೆ ಹಲವು ಬಾರಿ ಸರಕಾರಕ್ಕೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಪದೇ ಪದೇ ಕಸದ ಘಟಕದಿಂದ ತಾಲೂಕಿನ ಜನ ಪ್ರಾಣ ತೆತ್ತುತ್ತಿದ್ದಾರೆ. ಕಸದ ಘಟಕದಿಂದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪರಿಸರವೂ ಹದಗೆಟ್ಟಿದೆ. ನೀರಿನ ಮೂಲವು ಸಂಪೂರ್ಣ ಕಲುಷಿತಗೊಂಡಿದೆ.

ಅಪಘಾತ ಪ್ರಕರಣಗಳಿಂದ ತಾಲೂಕಿನ ಜನತೆ ಬೇಸತ್ತಿದ್ದಾರೆ. ಬಿಬಿಎಂಪಿ ಅಧಿಕಾರಿಗಳು, ಸರಕಾರ ಶೀಘ್ರವಾಗಿ ಕಸದ ಘಟಕವನ್ನು ಮುಚ್ಚುವಂತೆ ಆಗ್ರಹಿಸಿದರು.

ಕಳೆದ ಮೂರು ತಿಂಗಳ ಹಿಂದಷ್ಟೇ ಮೂಗಿನೇಹಳ್ಳಿ ಕ್ರಾಸ್ ಬಳಿ ಬಿಬಿಎಂಪಿ ಕಸದ ಲಾರಿಗೆ ಓರ್ವ ಯುವಕ ಬಲಿಯಾಗಿದ್ದ. ಕಳೆದ ಒಂದು ವಾರದ ಹಿಂದೆ ದಾಬಸ್ ಪೇಟೆಯಲ್ಲಿಯೂ ಬಿಬಿಎಂಪಿ ಕಸದ ಲಾರಿಗೆ ಸಿಕ್ಕಿ ಓರ್ವ ಯುವಕ ಸಾವನ್ನಪ್ಪಿದ್ದರು.

ಸ್ಥಳಕ್ಕೆ ದೊಡ್ಡ ಬೆಳವಂಗಲ ಪೊಲೀಸ್ ಠಾಣೆ ಸಿಬ್ಬಂದಿ ದೌಡು ಪರಿಶೀಲನೆ. ಅಪಘಾತವೇಸಗಿ ಲಾರಿ ಸಮೇತ ಪರಾರಿಯಾಗುತ್ತಿದ್ದ ಲಾರಿ ಚಾಲಕನನ್ನು ಪೊಲೀಸರು ಬೆನ್ನಟ್ಟಿ ಹಿಡಿದು ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.

Ramesh Babu

Journalist

Recent Posts

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

30 minutes ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

2 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

9 hours ago

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…

10 hours ago

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

10 hours ago

ನೈತಿಕತೆ, ಸಾಹಿತ್ಯ ಮತ್ತು ಜ್ಞಾನಪೀಠ ಪ್ರಶಸ್ತಿ…

ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…

11 hours ago