ಬಿಬಿಎಂಪಿ ಕಸದ ಲಾರಿಗೆ ಮತ್ತೆರೆಡು ಬಲಿ; ಘಟನಾ ಸ್ಥಳಕ್ಕೆ ಶಾಸಕ ಭೇಟಿ

ಬಿಬಿಎಂಪಿ ಕಸದ ಲಾರಿ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು-ದಾಬಸ್ಪೇಟೆ ಹೆದ್ದಾರಿಯ ಹುಲಿಕುಂಟೆ ಗ್ರಾಮದ ಬಳಿ ಘಟನೆ ನಡೆದಿದೆ. ಮರಳುಕುಂಟೆ ಗ್ರಾಮದ ಯುವಕರಾದ ಮಾರುತಿ (28), ಮಹೇಶ್(30) ಘಟನೆಯಲ್ಲಿ ಸಾವನ್ನಪ್ಪಿದ್ದಾರೆ.

ತಾಲೂಕಿನ ಚಿಗರೇನಹಳ್ಳಿ ಬಳಿಯಿರುವ ಬಿಬಿಎಂಪಿ ಕಸದ ಡಂಪ್ ಯಾರ್ಡ್ ಎಂಎಸ್ ಜಿಪಿ ಘಟಕಕ್ಕೆ ಕಸವನ್ನು ಡಂಪ್ ಮಾಡಿ ವಾಪಸ್ ಹೋಗುತ್ತಿದ್ದ ಲಾರಿ ಮತ್ತು ಬೈಕ್ ಮಧ್ಯೆ ಅಪಘಾತ ಸಂಭವಿಸಿದೆ. ಮಧುರೆಯಲ್ಲಿ ಶನಿಮಹಾತ್ಮ ಸ್ವಾಮಿಯ ದರ್ಶನ ಮುಗಿಸಿ ಮುಡಿಕೊಟ್ಟ ಯುವಕರು ವಾಪಸ್ ಸ್ವಗ್ರಾಮಕ್ಕೆ ಬರುವಾಗ ದುರ್ಘಟನೆ ನಡೆದಿದೆ.

ಸ್ಥಳಕ್ಕೆ ಶಾಸಕ ವೆಂಕಟರಮಣಯ್ಯ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ತಿಳಿಸಿದರು. ಬಿಬಿಎಂಪಿ ಕಸದ ಘಟಕವನ್ನು ಮುಚ್ಚುವಂತೆ ಹಲವು ಬಾರಿ ಸರಕಾರಕ್ಕೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಪದೇ ಪದೇ ಕಸದ ಘಟಕದಿಂದ ತಾಲೂಕಿನ ಜನ ಪ್ರಾಣ ತೆತ್ತುತ್ತಿದ್ದಾರೆ. ಕಸದ ಘಟಕದಿಂದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪರಿಸರವೂ ಹದಗೆಟ್ಟಿದೆ. ನೀರಿನ ಮೂಲವು ಸಂಪೂರ್ಣ ಕಲುಷಿತಗೊಂಡಿದೆ.

ಅಪಘಾತ ಪ್ರಕರಣಗಳಿಂದ ತಾಲೂಕಿನ ಜನತೆ ಬೇಸತ್ತಿದ್ದಾರೆ. ಬಿಬಿಎಂಪಿ ಅಧಿಕಾರಿಗಳು, ಸರಕಾರ ಶೀಘ್ರವಾಗಿ ಕಸದ ಘಟಕವನ್ನು ಮುಚ್ಚುವಂತೆ ಆಗ್ರಹಿಸಿದರು.

ಕಳೆದ ಮೂರು ತಿಂಗಳ ಹಿಂದಷ್ಟೇ ಮೂಗಿನೇಹಳ್ಳಿ ಕ್ರಾಸ್ ಬಳಿ ಬಿಬಿಎಂಪಿ ಕಸದ ಲಾರಿಗೆ ಓರ್ವ ಯುವಕ ಬಲಿಯಾಗಿದ್ದ. ಕಳೆದ ಒಂದು ವಾರದ ಹಿಂದೆ ದಾಬಸ್ ಪೇಟೆಯಲ್ಲಿಯೂ ಬಿಬಿಎಂಪಿ ಕಸದ ಲಾರಿಗೆ ಸಿಕ್ಕಿ ಓರ್ವ ಯುವಕ ಸಾವನ್ನಪ್ಪಿದ್ದರು.

ಸ್ಥಳಕ್ಕೆ ದೊಡ್ಡ ಬೆಳವಂಗಲ ಪೊಲೀಸ್ ಠಾಣೆ ಸಿಬ್ಬಂದಿ ದೌಡು ಪರಿಶೀಲನೆ. ಅಪಘಾತವೇಸಗಿ ಲಾರಿ ಸಮೇತ ಪರಾರಿಯಾಗುತ್ತಿದ್ದ ಲಾರಿ ಚಾಲಕನನ್ನು ಪೊಲೀಸರು ಬೆನ್ನಟ್ಟಿ ಹಿಡಿದು ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.

Ramesh Babu

Journalist

Recent Posts

ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…

1 hour ago

ಬೈಕ್ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು; ಲಕ್ಷಾಂತರ ಮೌಲ್ಯದ 42 ದ್ವಿಚಕ್ರ ವಾಹನ ವಶ

ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…

6 hours ago

ಪರೀಕ್ಷಾ ಅಕ್ರಮಗಳು……

ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…

8 hours ago

ಮುತ್ತತ್ತಿಯಲ್ಲಿ ದುರಂತ: ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಸಾವು

ರಾಮನಗರ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಫೋಟೋ ತೆಗೆಯಲು ನೀರಿಗೆ ಇಳಿದ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ನೀರಿನಲ್ಲಿ…

9 hours ago

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

23 hours ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

1 day ago