ಬಿಬಿಎಂಪಿ ಕಸದ ಲಾರಿಗೆ ಮತ್ತೆರೆಡು ಬಲಿ; ಘಟನಾ ಸ್ಥಳಕ್ಕೆ ಶಾಸಕ ಭೇಟಿ

ಬಿಬಿಎಂಪಿ ಕಸದ ಲಾರಿ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು-ದಾಬಸ್ಪೇಟೆ ಹೆದ್ದಾರಿಯ ಹುಲಿಕುಂಟೆ ಗ್ರಾಮದ ಬಳಿ ಘಟನೆ ನಡೆದಿದೆ. ಮರಳುಕುಂಟೆ ಗ್ರಾಮದ ಯುವಕರಾದ ಮಾರುತಿ (28), ಮಹೇಶ್(30) ಘಟನೆಯಲ್ಲಿ ಸಾವನ್ನಪ್ಪಿದ್ದಾರೆ.

ತಾಲೂಕಿನ ಚಿಗರೇನಹಳ್ಳಿ ಬಳಿಯಿರುವ ಬಿಬಿಎಂಪಿ ಕಸದ ಡಂಪ್ ಯಾರ್ಡ್ ಎಂಎಸ್ ಜಿಪಿ ಘಟಕಕ್ಕೆ ಕಸವನ್ನು ಡಂಪ್ ಮಾಡಿ ವಾಪಸ್ ಹೋಗುತ್ತಿದ್ದ ಲಾರಿ ಮತ್ತು ಬೈಕ್ ಮಧ್ಯೆ ಅಪಘಾತ ಸಂಭವಿಸಿದೆ. ಮಧುರೆಯಲ್ಲಿ ಶನಿಮಹಾತ್ಮ ಸ್ವಾಮಿಯ ದರ್ಶನ ಮುಗಿಸಿ ಮುಡಿಕೊಟ್ಟ ಯುವಕರು ವಾಪಸ್ ಸ್ವಗ್ರಾಮಕ್ಕೆ ಬರುವಾಗ ದುರ್ಘಟನೆ ನಡೆದಿದೆ.

ಸ್ಥಳಕ್ಕೆ ಶಾಸಕ ವೆಂಕಟರಮಣಯ್ಯ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ತಿಳಿಸಿದರು. ಬಿಬಿಎಂಪಿ ಕಸದ ಘಟಕವನ್ನು ಮುಚ್ಚುವಂತೆ ಹಲವು ಬಾರಿ ಸರಕಾರಕ್ಕೆ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಪದೇ ಪದೇ ಕಸದ ಘಟಕದಿಂದ ತಾಲೂಕಿನ ಜನ ಪ್ರಾಣ ತೆತ್ತುತ್ತಿದ್ದಾರೆ. ಕಸದ ಘಟಕದಿಂದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪರಿಸರವೂ ಹದಗೆಟ್ಟಿದೆ. ನೀರಿನ ಮೂಲವು ಸಂಪೂರ್ಣ ಕಲುಷಿತಗೊಂಡಿದೆ.

ಅಪಘಾತ ಪ್ರಕರಣಗಳಿಂದ ತಾಲೂಕಿನ ಜನತೆ ಬೇಸತ್ತಿದ್ದಾರೆ. ಬಿಬಿಎಂಪಿ ಅಧಿಕಾರಿಗಳು, ಸರಕಾರ ಶೀಘ್ರವಾಗಿ ಕಸದ ಘಟಕವನ್ನು ಮುಚ್ಚುವಂತೆ ಆಗ್ರಹಿಸಿದರು.

ಕಳೆದ ಮೂರು ತಿಂಗಳ ಹಿಂದಷ್ಟೇ ಮೂಗಿನೇಹಳ್ಳಿ ಕ್ರಾಸ್ ಬಳಿ ಬಿಬಿಎಂಪಿ ಕಸದ ಲಾರಿಗೆ ಓರ್ವ ಯುವಕ ಬಲಿಯಾಗಿದ್ದ. ಕಳೆದ ಒಂದು ವಾರದ ಹಿಂದೆ ದಾಬಸ್ ಪೇಟೆಯಲ್ಲಿಯೂ ಬಿಬಿಎಂಪಿ ಕಸದ ಲಾರಿಗೆ ಸಿಕ್ಕಿ ಓರ್ವ ಯುವಕ ಸಾವನ್ನಪ್ಪಿದ್ದರು.

ಸ್ಥಳಕ್ಕೆ ದೊಡ್ಡ ಬೆಳವಂಗಲ ಪೊಲೀಸ್ ಠಾಣೆ ಸಿಬ್ಬಂದಿ ದೌಡು ಪರಿಶೀಲನೆ. ಅಪಘಾತವೇಸಗಿ ಲಾರಿ ಸಮೇತ ಪರಾರಿಯಾಗುತ್ತಿದ್ದ ಲಾರಿ ಚಾಲಕನನ್ನು ಪೊಲೀಸರು ಬೆನ್ನಟ್ಟಿ ಹಿಡಿದು ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

8 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

19 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

20 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

21 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

23 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

1 day ago