ಬಿಬಿಎಂಪಿ ಕಸದ ಲಾರಿಗೆ ಮತ್ತೆರೆಡು ಬಲಿ

 

 

 

 

 

 

 

 

ಬಿಬಿಎಂಪಿ ಕಸದ ಲಾರಿ ಹಾಗೂ ಬೈಕ್ ನಡುವೆ ಅಪಘಾತ, ಘಟನೆಯಲ್ಲಿ ಬೈಕ್ ನಲ್ಲಿದ್ದ ತಾಲೂಕಿನ ಮರಳುಕುಂಟೆ ಗ್ರಾಮದ ಇಬ್ಬರು ಯುವಕರ ಸಾವನ್ನಪ್ಪಿರುವ ಘಟನೆ ತುಮಕೂರು-ದಾಬಸ್ಪೇಟೆ ಹೆದ್ದಾರಿಯ ಹುಲಿಕುಂಟೆ ಗ್ರಾಮದ ಬಳಿ ಘಟನೆ ನಡೆದಿದೆ. ಮಾರುತಿ (28), ಮಹೇಶ್(30) ಘಟನೆಯಲ್ಲಿ ಮೃತಪಟ್ಟವರು.

ತಾಲೂಕಿನ ಚಿಗರೇನಹಳ್ಳಿ ಬಳಿಯಿರುವ ಬಿಬಿಎಂಪಿ ಕಸದ ಎಂಎಸ್ ಜಿಪಿ ಘಟಕಕ್ಕೆ ಕಸವನ್ನು ಡಂಪ್ ಮಾಡಿ ವಾಪಸ್ ಹೋಗುತ್ತಿದ್ದ ಲಾರಿ ಮತ್ತು ಬೈಕ್ ಮಧ್ಯೆ ಅಪಘಾತ ಸಂಭವಿಸಿದೆ. ಮಧುರೆಯಲ್ಲಿ ಶನಿಮಹಾತ್ಮ ಸ್ವಾಮಿಯ ದರ್ಶನ ಮುಗಿಸಿ ಮುಡಿಕೊಟ್ಟ ಯುವಕರು ವಾಪಸ್ ಸ್ವಗ್ರಾಮಕ್ಕೆ ಬರುವಾಗ ದುರ್ಘಟನೆ ನಡೆದಿದೆ.

ಕಳೆದ ಮೂರು ತಿಂಗಳ ಹಿಂದಷ್ಟೇ ಬಿಬಿಎಂಪಿ ಕಸದ ಲಾರಿಗೆ ಓರ್ವ ಯುವಕ ಬಲಿಯಾಗಿದ್ದ. ಸ್ಥಳಕ್ಕೆ ದೊಡ್ಡ ಬೆಳವಂಗಲ ಪೊಲೀಸ್ ಠಾಣೆ ಸಿಬ್ಬಂದಿ ದೌಡು ಪರಿಶೀಲನೆ. ಅಪಘಾತವೇಸಗಿ ಲಾರಿ ಸಮೇತ ಪರಾರಿಯಾಗುತ್ತಿದ್ದ ಲಾರಿ ಚಾಲಕನನ್ನು ಪೊಲೀಸರು ಬೆನ್ನಟ್ಟಿ ಹಿಡಿದು ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.

ಘಟನಾ ಸ್ಥಳಕ್ಕೆ ಶಾಸಕ ಟಿ.ವೆಂಕಟರಮಣಯ್ಯ ಭೇಟಿ,‌ ಪರಿಶೀಲನೆ ನಡೆಸಿ, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಬಿಬಿಎಂಪಿ ಕಸದ ಲಾರಿ ಚಾಲಕರ ಬೇಜವಾಬ್ದಾರಿತನಕ್ಕ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಪದೇ ಪದೇ ಇಂತಹ‌ ಘಟನೆಗಳು ಮರುಕಳಿಸುತ್ತಿರುವುದನ್ನು ಖಂಡಿಸಿ ಬಿಬಿಎಂಪಿಯ ಎಂಎಸ್ ಜಿಪಿ ಘಟಕ ಮುಚ್ಚುವಂತೆ ಒತ್ತಾಯಿಸಿದರು.

 

Ramesh Babu

Journalist

Recent Posts

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

5 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

5 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

7 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

15 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

18 hours ago

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್: ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸಲು ಸಭೆ

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…

1 day ago