ಬಿಬಿಎಂಪಿ ಕಸದ ಲಾರಿಗೆ ಮತ್ತೆರೆಡು ಬಲಿ

 

 

 

 

 

 

 

 

ಬಿಬಿಎಂಪಿ ಕಸದ ಲಾರಿ ಹಾಗೂ ಬೈಕ್ ನಡುವೆ ಅಪಘಾತ, ಘಟನೆಯಲ್ಲಿ ಬೈಕ್ ನಲ್ಲಿದ್ದ ತಾಲೂಕಿನ ಮರಳುಕುಂಟೆ ಗ್ರಾಮದ ಇಬ್ಬರು ಯುವಕರ ಸಾವನ್ನಪ್ಪಿರುವ ಘಟನೆ ತುಮಕೂರು-ದಾಬಸ್ಪೇಟೆ ಹೆದ್ದಾರಿಯ ಹುಲಿಕುಂಟೆ ಗ್ರಾಮದ ಬಳಿ ಘಟನೆ ನಡೆದಿದೆ. ಮಾರುತಿ (28), ಮಹೇಶ್(30) ಘಟನೆಯಲ್ಲಿ ಮೃತಪಟ್ಟವರು.

ತಾಲೂಕಿನ ಚಿಗರೇನಹಳ್ಳಿ ಬಳಿಯಿರುವ ಬಿಬಿಎಂಪಿ ಕಸದ ಎಂಎಸ್ ಜಿಪಿ ಘಟಕಕ್ಕೆ ಕಸವನ್ನು ಡಂಪ್ ಮಾಡಿ ವಾಪಸ್ ಹೋಗುತ್ತಿದ್ದ ಲಾರಿ ಮತ್ತು ಬೈಕ್ ಮಧ್ಯೆ ಅಪಘಾತ ಸಂಭವಿಸಿದೆ. ಮಧುರೆಯಲ್ಲಿ ಶನಿಮಹಾತ್ಮ ಸ್ವಾಮಿಯ ದರ್ಶನ ಮುಗಿಸಿ ಮುಡಿಕೊಟ್ಟ ಯುವಕರು ವಾಪಸ್ ಸ್ವಗ್ರಾಮಕ್ಕೆ ಬರುವಾಗ ದುರ್ಘಟನೆ ನಡೆದಿದೆ.

ಕಳೆದ ಮೂರು ತಿಂಗಳ ಹಿಂದಷ್ಟೇ ಬಿಬಿಎಂಪಿ ಕಸದ ಲಾರಿಗೆ ಓರ್ವ ಯುವಕ ಬಲಿಯಾಗಿದ್ದ. ಸ್ಥಳಕ್ಕೆ ದೊಡ್ಡ ಬೆಳವಂಗಲ ಪೊಲೀಸ್ ಠಾಣೆ ಸಿಬ್ಬಂದಿ ದೌಡು ಪರಿಶೀಲನೆ. ಅಪಘಾತವೇಸಗಿ ಲಾರಿ ಸಮೇತ ಪರಾರಿಯಾಗುತ್ತಿದ್ದ ಲಾರಿ ಚಾಲಕನನ್ನು ಪೊಲೀಸರು ಬೆನ್ನಟ್ಟಿ ಹಿಡಿದು ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.

ಘಟನಾ ಸ್ಥಳಕ್ಕೆ ಶಾಸಕ ಟಿ.ವೆಂಕಟರಮಣಯ್ಯ ಭೇಟಿ,‌ ಪರಿಶೀಲನೆ ನಡೆಸಿ, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಬಿಬಿಎಂಪಿ ಕಸದ ಲಾರಿ ಚಾಲಕರ ಬೇಜವಾಬ್ದಾರಿತನಕ್ಕ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಪದೇ ಪದೇ ಇಂತಹ‌ ಘಟನೆಗಳು ಮರುಕಳಿಸುತ್ತಿರುವುದನ್ನು ಖಂಡಿಸಿ ಬಿಬಿಎಂಪಿಯ ಎಂಎಸ್ ಜಿಪಿ ಘಟಕ ಮುಚ್ಚುವಂತೆ ಒತ್ತಾಯಿಸಿದರು.

 

Ramesh Babu

Journalist

Recent Posts

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

47 minutes ago

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

13 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

13 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

14 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

19 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

1 day ago