ಬಿಬಿಎಂಪಿ ಕಸದ ಲಾರಿ ಹಾಗೂ ಬೈಕ್ ನಡುವೆ ಅಪಘಾತ, ಘಟನೆಯಲ್ಲಿ ಬೈಕ್ ನಲ್ಲಿದ್ದ ತಾಲೂಕಿನ ಮರಳುಕುಂಟೆ ಗ್ರಾಮದ ಇಬ್ಬರು ಯುವಕರ ಸಾವನ್ನಪ್ಪಿರುವ ಘಟನೆ ತುಮಕೂರು-ದಾಬಸ್ಪೇಟೆ ಹೆದ್ದಾರಿಯ ಹುಲಿಕುಂಟೆ ಗ್ರಾಮದ ಬಳಿ ಘಟನೆ ನಡೆದಿದೆ. ಮಾರುತಿ (28), ಮಹೇಶ್(30) ಘಟನೆಯಲ್ಲಿ ಮೃತಪಟ್ಟವರು.
ತಾಲೂಕಿನ ಚಿಗರೇನಹಳ್ಳಿ ಬಳಿಯಿರುವ ಬಿಬಿಎಂಪಿ ಕಸದ ಎಂಎಸ್ ಜಿಪಿ ಘಟಕಕ್ಕೆ ಕಸವನ್ನು ಡಂಪ್ ಮಾಡಿ ವಾಪಸ್ ಹೋಗುತ್ತಿದ್ದ ಲಾರಿ ಮತ್ತು ಬೈಕ್ ಮಧ್ಯೆ ಅಪಘಾತ ಸಂಭವಿಸಿದೆ. ಮಧುರೆಯಲ್ಲಿ ಶನಿಮಹಾತ್ಮ ಸ್ವಾಮಿಯ ದರ್ಶನ ಮುಗಿಸಿ ಮುಡಿಕೊಟ್ಟ ಯುವಕರು ವಾಪಸ್ ಸ್ವಗ್ರಾಮಕ್ಕೆ ಬರುವಾಗ ದುರ್ಘಟನೆ ನಡೆದಿದೆ.
ಕಳೆದ ಮೂರು ತಿಂಗಳ ಹಿಂದಷ್ಟೇ ಬಿಬಿಎಂಪಿ ಕಸದ ಲಾರಿಗೆ ಓರ್ವ ಯುವಕ ಬಲಿಯಾಗಿದ್ದ. ಸ್ಥಳಕ್ಕೆ ದೊಡ್ಡ ಬೆಳವಂಗಲ ಪೊಲೀಸ್ ಠಾಣೆ ಸಿಬ್ಬಂದಿ ದೌಡು ಪರಿಶೀಲನೆ. ಅಪಘಾತವೇಸಗಿ ಲಾರಿ ಸಮೇತ ಪರಾರಿಯಾಗುತ್ತಿದ್ದ ಲಾರಿ ಚಾಲಕನನ್ನು ಪೊಲೀಸರು ಬೆನ್ನಟ್ಟಿ ಹಿಡಿದು ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.
ಘಟನಾ ಸ್ಥಳಕ್ಕೆ ಶಾಸಕ ಟಿ.ವೆಂಕಟರಮಣಯ್ಯ ಭೇಟಿ, ಪರಿಶೀಲನೆ ನಡೆಸಿ, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಬಿಬಿಎಂಪಿ ಕಸದ ಲಾರಿ ಚಾಲಕರ ಬೇಜವಾಬ್ದಾರಿತನಕ್ಕ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಪದೇ ಪದೇ ಇಂತಹ ಘಟನೆಗಳು ಮರುಕಳಿಸುತ್ತಿರುವುದನ್ನು ಖಂಡಿಸಿ ಬಿಬಿಎಂಪಿಯ ಎಂಎಸ್ ಜಿಪಿ ಘಟಕ ಮುಚ್ಚುವಂತೆ ಒತ್ತಾಯಿಸಿದರು.
ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…
ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…
ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…
ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…
ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…