ಬಿಬಿಎಂಪಿ ಕಸದ ಲಾರಿ ಹಾಗೂ ಬೈಕ್ ನಡುವೆ ಅಪಘಾತ, ಘಟನೆಯಲ್ಲಿ ಬೈಕ್ ನಲ್ಲಿದ್ದ ತಾಲೂಕಿನ ಮರಳುಕುಂಟೆ ಗ್ರಾಮದ ಇಬ್ಬರು ಯುವಕರ ಸಾವನ್ನಪ್ಪಿರುವ ಘಟನೆ ತುಮಕೂರು-ದಾಬಸ್ಪೇಟೆ ಹೆದ್ದಾರಿಯ ಹುಲಿಕುಂಟೆ ಗ್ರಾಮದ ಬಳಿ ಘಟನೆ ನಡೆದಿದೆ. ಮಾರುತಿ (28), ಮಹೇಶ್(30) ಘಟನೆಯಲ್ಲಿ ಮೃತಪಟ್ಟವರು.
ತಾಲೂಕಿನ ಚಿಗರೇನಹಳ್ಳಿ ಬಳಿಯಿರುವ ಬಿಬಿಎಂಪಿ ಕಸದ ಎಂಎಸ್ ಜಿಪಿ ಘಟಕಕ್ಕೆ ಕಸವನ್ನು ಡಂಪ್ ಮಾಡಿ ವಾಪಸ್ ಹೋಗುತ್ತಿದ್ದ ಲಾರಿ ಮತ್ತು ಬೈಕ್ ಮಧ್ಯೆ ಅಪಘಾತ ಸಂಭವಿಸಿದೆ. ಮಧುರೆಯಲ್ಲಿ ಶನಿಮಹಾತ್ಮ ಸ್ವಾಮಿಯ ದರ್ಶನ ಮುಗಿಸಿ ಮುಡಿಕೊಟ್ಟ ಯುವಕರು ವಾಪಸ್ ಸ್ವಗ್ರಾಮಕ್ಕೆ ಬರುವಾಗ ದುರ್ಘಟನೆ ನಡೆದಿದೆ.
ಕಳೆದ ಮೂರು ತಿಂಗಳ ಹಿಂದಷ್ಟೇ ಬಿಬಿಎಂಪಿ ಕಸದ ಲಾರಿಗೆ ಓರ್ವ ಯುವಕ ಬಲಿಯಾಗಿದ್ದ. ಸ್ಥಳಕ್ಕೆ ದೊಡ್ಡ ಬೆಳವಂಗಲ ಪೊಲೀಸ್ ಠಾಣೆ ಸಿಬ್ಬಂದಿ ದೌಡು ಪರಿಶೀಲನೆ. ಅಪಘಾತವೇಸಗಿ ಲಾರಿ ಸಮೇತ ಪರಾರಿಯಾಗುತ್ತಿದ್ದ ಲಾರಿ ಚಾಲಕನನ್ನು ಪೊಲೀಸರು ಬೆನ್ನಟ್ಟಿ ಹಿಡಿದು ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.
ಘಟನಾ ಸ್ಥಳಕ್ಕೆ ಶಾಸಕ ಟಿ.ವೆಂಕಟರಮಣಯ್ಯ ಭೇಟಿ, ಪರಿಶೀಲನೆ ನಡೆಸಿ, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಬಿಬಿಎಂಪಿ ಕಸದ ಲಾರಿ ಚಾಲಕರ ಬೇಜವಾಬ್ದಾರಿತನಕ್ಕ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಪದೇ ಪದೇ ಇಂತಹ ಘಟನೆಗಳು ಮರುಕಳಿಸುತ್ತಿರುವುದನ್ನು ಖಂಡಿಸಿ ಬಿಬಿಎಂಪಿಯ ಎಂಎಸ್ ಜಿಪಿ ಘಟಕ ಮುಚ್ಚುವಂತೆ ಒತ್ತಾಯಿಸಿದರು.
Instant play casinos allow you to play casino games online without installing any software. These…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…
ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…
Das Schreiben einer Facharbeit ist ein wichtiger Bestandteil des akademischen Lebens und erfordert sowohl Planung…
Welcome to our thorough overview on the very best online slots online casinos. If you're…
ಪರಿಶಿಷ್ಟ ಜಾತಿಯ ಎಲ್ಲಾ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ. ಎಡ, ಬಲ…