ಯುಟಿಲಿಟಿ ಬಿಲ್ಡಿಂಗ್ ನಲ್ಲಿರುವ ದೊಂಬ್ಲೂರು ARO, ಶಾಂತಿನಗರ ARO ಮತ್ತು ಟೌನ್ ಪ್ಲಾನಿಂಗ್ ಕಚೇರಿ ಮೇಲೆ ಲೋಕಾಯುಕ್ತ ರೇಡ್ ನಡೆಸಲಾಗಿದೆ.
ಇನ್ಸ್ಪೆಕ್ಟರ್ ಅಂಜನ್ ಮೂರ್ತಿ ಸೇರಿ ಹಲವು ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ಮಾಡಲಾಗಿದೆ. ARO ಕಚೇರಿಯಲ್ಲಿ ಕಡತಗಳ ಪರಿಶೀಲನೆ ನಡೆಸಿದ ಅಧಿಕಾರಿಗಳು.
ಖುದ್ದಾಗಿ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ರಿಂದ ರಾಜಾಜಿನಗರ ರೆವಿನ್ಯೂ ಆಫೀಸ್ ನಲ್ಲಿ ಕಡತಗಳ ಪರಿಶೀಲನೆ ನಡೆದಿದೆ.
ಫೈಲ್ ಗಳು ಏಕೆ ಕ್ಲಿಯರ್ ಆಗಿಲ್ಲ ಎಂದು ಎಆರ್ ಓ ಭಾರತಿ ಹಾಗೂ ಮ್ಯಾನೇಜರ್ ರುಕ್ಮಿಣಿಗೆ ತರಾಟೆಗೆ ತೆಗೆದುಕೊಳ್ಳಲಾಗಿದೆ.
ಎಷ್ಟು ಅಪ್ಲಿಕೇಷನ್ ಪೆಂಡಿಂಗ್ ಇದೆ ಏಕೆ ಕೆಲಸಗಳು ಬಾಕಿ ಇವೆ ಎಂದು ಅಧಿಕಾರಿಗಳಿಗೆ ವರದಿ ಕೇಳಿದ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್. ಅದೇರೀತಿ ಕಚೇರಿಯಲ್ಲಿ ನಗದು ಇಡಲಾಗಿದಿಯೇ ಎಂದು ಪರಿಶೀಲನೆ ನಡೆಸುವಂತೆ ಲೋಕಾಯುಕ್ತ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ.
ಇಂದು ಬಿಬಿಎಂಪಿಯ 45 ಕಂದಾಯ ಕಚೇರಿಗಳ ಮೇಲೆ ಸರ್ಪ್ರೈಸ್ ಇನ್ಸ್ಪೆಕ್ಷನ್ ನಡೆಸಲಾಗಿದೆ. 100 ಕ್ಕೂ ಹೆಚ್ಚು ಅಧಿಕಾರಿಗಳಿಗಳನ್ನ ಇದಕ್ಕೆ ನಿಯೋಜನೆ ಮಾಡಿದ್ದೇವೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಹೇಳಿದ್ದಾರೆ.
ಕಾನೂನಿನ ಉಲ್ಲಂಘನೆ ಎಲ್ಲಿ ಆಗುತ್ತಿದೆ,ಎಲ್ಲಿಲ್ಲಿ ತಡವಾಗಿ ಕೆಲಸ ಆಗುತ್ತಿದೆ, ಸಾರ್ವಜನಿಕರಿಗೆ ಯಾವ ರೀತಿ ತೊಂದರೆ ಆಗುತ್ತಿದೆ ಎಂಬುದರ ಬಗ್ಗೆ ಪರಿಶೀಲನೆ ಮಾಡಲಾಗಿದೆ ನಮಗೆ ದೂರು ಬಂದ ಕಾರಣದಿಂದ ನಾವು ರೈಡ್ ಮಾಡುತ್ತಿದ್ದೇವೆ ಎಂದರು.
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…