ಯುಟಿಲಿಟಿ ಬಿಲ್ಡಿಂಗ್ ನಲ್ಲಿರುವ ದೊಂಬ್ಲೂರು ARO, ಶಾಂತಿನಗರ ARO ಮತ್ತು ಟೌನ್ ಪ್ಲಾನಿಂಗ್ ಕಚೇರಿ ಮೇಲೆ ಲೋಕಾಯುಕ್ತ ರೇಡ್ ನಡೆಸಲಾಗಿದೆ.
ಇನ್ಸ್ಪೆಕ್ಟರ್ ಅಂಜನ್ ಮೂರ್ತಿ ಸೇರಿ ಹಲವು ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ಮಾಡಲಾಗಿದೆ. ARO ಕಚೇರಿಯಲ್ಲಿ ಕಡತಗಳ ಪರಿಶೀಲನೆ ನಡೆಸಿದ ಅಧಿಕಾರಿಗಳು.
ಖುದ್ದಾಗಿ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ರಿಂದ ರಾಜಾಜಿನಗರ ರೆವಿನ್ಯೂ ಆಫೀಸ್ ನಲ್ಲಿ ಕಡತಗಳ ಪರಿಶೀಲನೆ ನಡೆದಿದೆ.
ಫೈಲ್ ಗಳು ಏಕೆ ಕ್ಲಿಯರ್ ಆಗಿಲ್ಲ ಎಂದು ಎಆರ್ ಓ ಭಾರತಿ ಹಾಗೂ ಮ್ಯಾನೇಜರ್ ರುಕ್ಮಿಣಿಗೆ ತರಾಟೆಗೆ ತೆಗೆದುಕೊಳ್ಳಲಾಗಿದೆ.
ಎಷ್ಟು ಅಪ್ಲಿಕೇಷನ್ ಪೆಂಡಿಂಗ್ ಇದೆ ಏಕೆ ಕೆಲಸಗಳು ಬಾಕಿ ಇವೆ ಎಂದು ಅಧಿಕಾರಿಗಳಿಗೆ ವರದಿ ಕೇಳಿದ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್. ಅದೇರೀತಿ ಕಚೇರಿಯಲ್ಲಿ ನಗದು ಇಡಲಾಗಿದಿಯೇ ಎಂದು ಪರಿಶೀಲನೆ ನಡೆಸುವಂತೆ ಲೋಕಾಯುಕ್ತ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ.
ಇಂದು ಬಿಬಿಎಂಪಿಯ 45 ಕಂದಾಯ ಕಚೇರಿಗಳ ಮೇಲೆ ಸರ್ಪ್ರೈಸ್ ಇನ್ಸ್ಪೆಕ್ಷನ್ ನಡೆಸಲಾಗಿದೆ. 100 ಕ್ಕೂ ಹೆಚ್ಚು ಅಧಿಕಾರಿಗಳಿಗಳನ್ನ ಇದಕ್ಕೆ ನಿಯೋಜನೆ ಮಾಡಿದ್ದೇವೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಹೇಳಿದ್ದಾರೆ.
ಕಾನೂನಿನ ಉಲ್ಲಂಘನೆ ಎಲ್ಲಿ ಆಗುತ್ತಿದೆ,ಎಲ್ಲಿಲ್ಲಿ ತಡವಾಗಿ ಕೆಲಸ ಆಗುತ್ತಿದೆ, ಸಾರ್ವಜನಿಕರಿಗೆ ಯಾವ ರೀತಿ ತೊಂದರೆ ಆಗುತ್ತಿದೆ ಎಂಬುದರ ಬಗ್ಗೆ ಪರಿಶೀಲನೆ ಮಾಡಲಾಗಿದೆ ನಮಗೆ ದೂರು ಬಂದ ಕಾರಣದಿಂದ ನಾವು ರೈಡ್ ಮಾಡುತ್ತಿದ್ದೇವೆ ಎಂದರು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…