ಯುಟಿಲಿಟಿ ಬಿಲ್ಡಿಂಗ್ ನಲ್ಲಿರುವ ದೊಂಬ್ಲೂರು ARO, ಶಾಂತಿನಗರ ARO ಮತ್ತು ಟೌನ್ ಪ್ಲಾನಿಂಗ್ ಕಚೇರಿ ಮೇಲೆ ಲೋಕಾಯುಕ್ತ ರೇಡ್ ನಡೆಸಲಾಗಿದೆ.
ಇನ್ಸ್ಪೆಕ್ಟರ್ ಅಂಜನ್ ಮೂರ್ತಿ ಸೇರಿ ಹಲವು ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ಮಾಡಲಾಗಿದೆ. ARO ಕಚೇರಿಯಲ್ಲಿ ಕಡತಗಳ ಪರಿಶೀಲನೆ ನಡೆಸಿದ ಅಧಿಕಾರಿಗಳು.
ಖುದ್ದಾಗಿ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ರಿಂದ ರಾಜಾಜಿನಗರ ರೆವಿನ್ಯೂ ಆಫೀಸ್ ನಲ್ಲಿ ಕಡತಗಳ ಪರಿಶೀಲನೆ ನಡೆದಿದೆ.
ಫೈಲ್ ಗಳು ಏಕೆ ಕ್ಲಿಯರ್ ಆಗಿಲ್ಲ ಎಂದು ಎಆರ್ ಓ ಭಾರತಿ ಹಾಗೂ ಮ್ಯಾನೇಜರ್ ರುಕ್ಮಿಣಿಗೆ ತರಾಟೆಗೆ ತೆಗೆದುಕೊಳ್ಳಲಾಗಿದೆ.
ಎಷ್ಟು ಅಪ್ಲಿಕೇಷನ್ ಪೆಂಡಿಂಗ್ ಇದೆ ಏಕೆ ಕೆಲಸಗಳು ಬಾಕಿ ಇವೆ ಎಂದು ಅಧಿಕಾರಿಗಳಿಗೆ ವರದಿ ಕೇಳಿದ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್. ಅದೇರೀತಿ ಕಚೇರಿಯಲ್ಲಿ ನಗದು ಇಡಲಾಗಿದಿಯೇ ಎಂದು ಪರಿಶೀಲನೆ ನಡೆಸುವಂತೆ ಲೋಕಾಯುಕ್ತ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ.
ಇಂದು ಬಿಬಿಎಂಪಿಯ 45 ಕಂದಾಯ ಕಚೇರಿಗಳ ಮೇಲೆ ಸರ್ಪ್ರೈಸ್ ಇನ್ಸ್ಪೆಕ್ಷನ್ ನಡೆಸಲಾಗಿದೆ. 100 ಕ್ಕೂ ಹೆಚ್ಚು ಅಧಿಕಾರಿಗಳಿಗಳನ್ನ ಇದಕ್ಕೆ ನಿಯೋಜನೆ ಮಾಡಿದ್ದೇವೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಹೇಳಿದ್ದಾರೆ.
ಕಾನೂನಿನ ಉಲ್ಲಂಘನೆ ಎಲ್ಲಿ ಆಗುತ್ತಿದೆ,ಎಲ್ಲಿಲ್ಲಿ ತಡವಾಗಿ ಕೆಲಸ ಆಗುತ್ತಿದೆ, ಸಾರ್ವಜನಿಕರಿಗೆ ಯಾವ ರೀತಿ ತೊಂದರೆ ಆಗುತ್ತಿದೆ ಎಂಬುದರ ಬಗ್ಗೆ ಪರಿಶೀಲನೆ ಮಾಡಲಾಗಿದೆ ನಮಗೆ ದೂರು ಬಂದ ಕಾರಣದಿಂದ ನಾವು ರೈಡ್ ಮಾಡುತ್ತಿದ್ದೇವೆ ಎಂದರು.
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…