ಯುಟಿಲಿಟಿ ಬಿಲ್ಡಿಂಗ್ ನಲ್ಲಿರುವ ದೊಂಬ್ಲೂರು ARO, ಶಾಂತಿನಗರ ARO ಮತ್ತು ಟೌನ್ ಪ್ಲಾನಿಂಗ್ ಕಚೇರಿ ಮೇಲೆ ಲೋಕಾಯುಕ್ತ ರೇಡ್ ನಡೆಸಲಾಗಿದೆ.
ಇನ್ಸ್ಪೆಕ್ಟರ್ ಅಂಜನ್ ಮೂರ್ತಿ ಸೇರಿ ಹಲವು ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ಮಾಡಲಾಗಿದೆ. ARO ಕಚೇರಿಯಲ್ಲಿ ಕಡತಗಳ ಪರಿಶೀಲನೆ ನಡೆಸಿದ ಅಧಿಕಾರಿಗಳು.
ಖುದ್ದಾಗಿ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ರಿಂದ ರಾಜಾಜಿನಗರ ರೆವಿನ್ಯೂ ಆಫೀಸ್ ನಲ್ಲಿ ಕಡತಗಳ ಪರಿಶೀಲನೆ ನಡೆದಿದೆ.
ಫೈಲ್ ಗಳು ಏಕೆ ಕ್ಲಿಯರ್ ಆಗಿಲ್ಲ ಎಂದು ಎಆರ್ ಓ ಭಾರತಿ ಹಾಗೂ ಮ್ಯಾನೇಜರ್ ರುಕ್ಮಿಣಿಗೆ ತರಾಟೆಗೆ ತೆಗೆದುಕೊಳ್ಳಲಾಗಿದೆ.
ಎಷ್ಟು ಅಪ್ಲಿಕೇಷನ್ ಪೆಂಡಿಂಗ್ ಇದೆ ಏಕೆ ಕೆಲಸಗಳು ಬಾಕಿ ಇವೆ ಎಂದು ಅಧಿಕಾರಿಗಳಿಗೆ ವರದಿ ಕೇಳಿದ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್. ಅದೇರೀತಿ ಕಚೇರಿಯಲ್ಲಿ ನಗದು ಇಡಲಾಗಿದಿಯೇ ಎಂದು ಪರಿಶೀಲನೆ ನಡೆಸುವಂತೆ ಲೋಕಾಯುಕ್ತ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ.
ಇಂದು ಬಿಬಿಎಂಪಿಯ 45 ಕಂದಾಯ ಕಚೇರಿಗಳ ಮೇಲೆ ಸರ್ಪ್ರೈಸ್ ಇನ್ಸ್ಪೆಕ್ಷನ್ ನಡೆಸಲಾಗಿದೆ. 100 ಕ್ಕೂ ಹೆಚ್ಚು ಅಧಿಕಾರಿಗಳಿಗಳನ್ನ ಇದಕ್ಕೆ ನಿಯೋಜನೆ ಮಾಡಿದ್ದೇವೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಹೇಳಿದ್ದಾರೆ.
ಕಾನೂನಿನ ಉಲ್ಲಂಘನೆ ಎಲ್ಲಿ ಆಗುತ್ತಿದೆ,ಎಲ್ಲಿಲ್ಲಿ ತಡವಾಗಿ ಕೆಲಸ ಆಗುತ್ತಿದೆ, ಸಾರ್ವಜನಿಕರಿಗೆ ಯಾವ ರೀತಿ ತೊಂದರೆ ಆಗುತ್ತಿದೆ ಎಂಬುದರ ಬಗ್ಗೆ ಪರಿಶೀಲನೆ ಮಾಡಲಾಗಿದೆ ನಮಗೆ ದೂರು ಬಂದ ಕಾರಣದಿಂದ ನಾವು ರೈಡ್ ಮಾಡುತ್ತಿದ್ದೇವೆ ಎಂದರು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…